<p><strong>ಕೊಲಂಬೊ</strong>: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಸ್ಥಿರ ಸರ್ಕಾರ ನೀಡುವ ನಿಟ್ಟಿನಲ್ಲಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಮಾಜಿ ಅಧ್ಯಕ್ಷರಾದ ಗೊಟಬಯ ರಾಜಪಕ್ಸ ಸಂಬಂಧಿ ಸೇರಿದಂತೆ 17 ಮಂದಿಯನ್ನು ರಾಜ್ಯ ಸಚಿವರಾಗಿ ನೇಮಕ ಮಾಡಲಾಗಿದೆ.</p>.<p>ರಾಜ್ಯ ಸಚಿವರಾಗಿ ಆಯ್ಕೆಯಾದವರಲ್ಲಿ ಹೆಚ್ಚು ಮಂದಿ ಆಡಳಿತಾರೂಢ ಲಂಕಾ ಪೊದುಜನ ಪೆರಮುನ(ಎಸ್ಎಲ್ಪಿಪಿ) ಪಕ್ಷಕ್ಕೆ ಸೇರಿದವರು.</p>.<p>ಜುಲೈನಲ್ಲಿ ಸರ್ಕಾರ ರಚನೆ ವೇಳೆ ಹೊರಗುಳಿಯುವ ನಿರ್ಧಾರ ಮಾಡಿದ್ದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಶ್ರೀಲಂಕಾ ಫ್ರೀಡಂ ಪಾರ್ಟಿ(ಎಸ್ಎಲ್ಎಫ್ಪಿ)ಯಿಂದಲೂ ಕೆಲವರನ್ನು ನೇಮಕ ಮಾಡಲಾಗಿದೆ.</p>.<p>ನೂತನ ಸಚಿವರು ಅಧ್ಯಕ್ಷರ ಕಾರ್ಯಾಲಯದಲ್ಲಿ ಅವರ ಎದುರೇ ಪ್ರಮಾಣ ಸ್ವೀಕರಿಸಿದರು ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.</p>.<p>1948ರಲ್ಲಿ ಸ್ವಾತಂತ್ರ್ಯನಂತರದ ಅತ್ಯಂತ ಕೆಟ್ಟ ಆರ್ಥಿಕ ದುಸ್ಥಿತಿಗೆ ದ್ವೀಪ ರಾಷ್ಟ್ರ ಸಿಲುಕಿದೆ. ಪ್ರಮುಖವಾಗಿ ಅಗತ್ಯ ವಸ್ತುಗಳ ಖರೀದಿಗೆ ವಿದೇಶಿ ವಿನಿಮಯದ ಕೊರತೆಯಿಂದಾಗಿ 2.2 ಕೋಟಿ ಜನಸಂಖ್ಯೆ ಅಗತ್ಯ ವಸ್ತುಗಳಿಗೂ ಪರಿತಪಿಸುವಂತಾಗಿದೆ.</p>.<p>ಸಂಸದ ರಂಜಿತ್ ಸಿಯಂಬಲಪಿತಿಯ ಮತ್ತು ಶೆಹನ್ ಸೀಮಸಿಂಘೆ ಅವರು ಹಣಕಾಸು ಖಾತೆ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಗೊಟಬಯ ರಾಜಪಕ್ಸ ಸಂಬಂಧಿ ಶಶೀಂದ್ರೆ ರಾಜಪಕ್ಷ ನೀರಾವರಿ ಸಚಿವರಾಗಿ ಪದಗ್ರಹಣ ಮಾಡಿದರು.</p>.<p>ಕಳೆದ ತಿಂಗಳು ಸಂಸತ್ತಿನಲ್ಲಿ 2022 ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದಾಗ, 'ಈ ಸಂಸತ್ತಿನಲ್ಲಿ ಜನರನ್ನು ಪ್ರತಿನಿಧಿಸುವ ಎಲ್ಲಾ ಪಕ್ಷಗಳಿಗೆ ನಾನು ಸರ್ವಪಕ್ಷ ಸರ್ಕಾರಕ್ಕೆ ಸೇರಲು ಪುನರ್ ಆಹ್ವಾನ ನೀಡುತ್ತಿದ್ದೇನೆ. ಈ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಮತ್ತು ಆದ್ದರಿಂದ ದೇಶದ ಅಗತ್ಯತೆಗಳಿಗೆ ಆದ್ಯತೆ ನೀಡಬೇಕಾಗಿದೆ’ಎಂದು ಅಧ್ಯಕ್ಷ ವಿಕ್ರಮಸಿಂಘೆ ಹೇಳಿದ್ದರು.</p>.<p>ಜುಲೈನಲ್ಲಿ ಆರ್ಥಿಕ ದುಸ್ಥಿತಿ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗಳ ನಂತರ ಗೊಟಬಯ ರಾಜಪಕ್ಸೆ ಶ್ರೀಲಂಕಾದಿಂದ ಪಲಾಯನ ಮಾಡಿ, ರಾಜೀನಾಮೆ ಸಲ್ಲಿಸಿದ ನಂತರ, ವಿಕ್ರಮಸಿಂಘೆ ಅಧಿಕಾರ ವಹಿಸಿಕೊಂಡರು.</p>.<p>ಈ ತಿಂಗಳ ಆರಂಭದಲ್ಲಿ, ಶ್ರೀಲಂಕಾವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) 2.9 ಶತಕೋಟಿ ಡಾಲರ್ ನೆರವಿಗೆ ಒಪ್ಪಂದ ಮಾಡಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಸ್ಥಿರ ಸರ್ಕಾರ ನೀಡುವ ನಿಟ್ಟಿನಲ್ಲಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಮಾಜಿ ಅಧ್ಯಕ್ಷರಾದ ಗೊಟಬಯ ರಾಜಪಕ್ಸ ಸಂಬಂಧಿ ಸೇರಿದಂತೆ 17 ಮಂದಿಯನ್ನು ರಾಜ್ಯ ಸಚಿವರಾಗಿ ನೇಮಕ ಮಾಡಲಾಗಿದೆ.</p>.<p>ರಾಜ್ಯ ಸಚಿವರಾಗಿ ಆಯ್ಕೆಯಾದವರಲ್ಲಿ ಹೆಚ್ಚು ಮಂದಿ ಆಡಳಿತಾರೂಢ ಲಂಕಾ ಪೊದುಜನ ಪೆರಮುನ(ಎಸ್ಎಲ್ಪಿಪಿ) ಪಕ್ಷಕ್ಕೆ ಸೇರಿದವರು.</p>.<p>ಜುಲೈನಲ್ಲಿ ಸರ್ಕಾರ ರಚನೆ ವೇಳೆ ಹೊರಗುಳಿಯುವ ನಿರ್ಧಾರ ಮಾಡಿದ್ದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಶ್ರೀಲಂಕಾ ಫ್ರೀಡಂ ಪಾರ್ಟಿ(ಎಸ್ಎಲ್ಎಫ್ಪಿ)ಯಿಂದಲೂ ಕೆಲವರನ್ನು ನೇಮಕ ಮಾಡಲಾಗಿದೆ.</p>.<p>ನೂತನ ಸಚಿವರು ಅಧ್ಯಕ್ಷರ ಕಾರ್ಯಾಲಯದಲ್ಲಿ ಅವರ ಎದುರೇ ಪ್ರಮಾಣ ಸ್ವೀಕರಿಸಿದರು ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.</p>.<p>1948ರಲ್ಲಿ ಸ್ವಾತಂತ್ರ್ಯನಂತರದ ಅತ್ಯಂತ ಕೆಟ್ಟ ಆರ್ಥಿಕ ದುಸ್ಥಿತಿಗೆ ದ್ವೀಪ ರಾಷ್ಟ್ರ ಸಿಲುಕಿದೆ. ಪ್ರಮುಖವಾಗಿ ಅಗತ್ಯ ವಸ್ತುಗಳ ಖರೀದಿಗೆ ವಿದೇಶಿ ವಿನಿಮಯದ ಕೊರತೆಯಿಂದಾಗಿ 2.2 ಕೋಟಿ ಜನಸಂಖ್ಯೆ ಅಗತ್ಯ ವಸ್ತುಗಳಿಗೂ ಪರಿತಪಿಸುವಂತಾಗಿದೆ.</p>.<p>ಸಂಸದ ರಂಜಿತ್ ಸಿಯಂಬಲಪಿತಿಯ ಮತ್ತು ಶೆಹನ್ ಸೀಮಸಿಂಘೆ ಅವರು ಹಣಕಾಸು ಖಾತೆ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಗೊಟಬಯ ರಾಜಪಕ್ಸ ಸಂಬಂಧಿ ಶಶೀಂದ್ರೆ ರಾಜಪಕ್ಷ ನೀರಾವರಿ ಸಚಿವರಾಗಿ ಪದಗ್ರಹಣ ಮಾಡಿದರು.</p>.<p>ಕಳೆದ ತಿಂಗಳು ಸಂಸತ್ತಿನಲ್ಲಿ 2022 ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದಾಗ, 'ಈ ಸಂಸತ್ತಿನಲ್ಲಿ ಜನರನ್ನು ಪ್ರತಿನಿಧಿಸುವ ಎಲ್ಲಾ ಪಕ್ಷಗಳಿಗೆ ನಾನು ಸರ್ವಪಕ್ಷ ಸರ್ಕಾರಕ್ಕೆ ಸೇರಲು ಪುನರ್ ಆಹ್ವಾನ ನೀಡುತ್ತಿದ್ದೇನೆ. ಈ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಮತ್ತು ಆದ್ದರಿಂದ ದೇಶದ ಅಗತ್ಯತೆಗಳಿಗೆ ಆದ್ಯತೆ ನೀಡಬೇಕಾಗಿದೆ’ಎಂದು ಅಧ್ಯಕ್ಷ ವಿಕ್ರಮಸಿಂಘೆ ಹೇಳಿದ್ದರು.</p>.<p>ಜುಲೈನಲ್ಲಿ ಆರ್ಥಿಕ ದುಸ್ಥಿತಿ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗಳ ನಂತರ ಗೊಟಬಯ ರಾಜಪಕ್ಸೆ ಶ್ರೀಲಂಕಾದಿಂದ ಪಲಾಯನ ಮಾಡಿ, ರಾಜೀನಾಮೆ ಸಲ್ಲಿಸಿದ ನಂತರ, ವಿಕ್ರಮಸಿಂಘೆ ಅಧಿಕಾರ ವಹಿಸಿಕೊಂಡರು.</p>.<p>ಈ ತಿಂಗಳ ಆರಂಭದಲ್ಲಿ, ಶ್ರೀಲಂಕಾವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) 2.9 ಶತಕೋಟಿ ಡಾಲರ್ ನೆರವಿಗೆ ಒಪ್ಪಂದ ಮಾಡಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>