<p><strong>ಕಾಬೂಲ್</strong>: ಅಫ್ಗಾನಿಸ್ತಾನದಲ್ಲಿ ಮಂಗಳವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 1,150 ಕ್ಕೆ ಏರಿಕೆಯಾಗಿದೆ.</p>.<p>6.1 ತೀವ್ರತೆಯ ಭೂಕಂಪದಿಂದಾಗಿ ಸಾವಿರಾರು ಮಂದಿ ಆಶ್ರಯ ಕಳೆದುಕೊಂಡಿದ್ದು, ಸುಮಾರು 3,000 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಫ್ಗಾನಿಸ್ತಾನದ ಸರ್ಕಾರಿ ಮಾಧ್ಯಮ ಮಾಹಿತಿ ನೀಡಿದೆ.</p>.<p>ಕಟ್ಟಡಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗ್ರಾಮಸ್ಥರು ಕೈಯಿಂದಲೇ ಅವಶೇಷಗಳನ್ನು ಹೊರತೆಗೆಯುತ್ತಿದ್ದಾರೆ.</p>.<p>ಪೂರ್ವ ಅಫ್ಗಾನಿಸ್ತಾನದ ಗಯಾನ್ ಜಿಲ್ಲೆಯಲ್ಲಿ ಕನಿಷ್ಠ 1,000 ಮನೆಗಳಿಗೆ ಹಾನಿಯಾಗಿದ್ದು, ಖೋಸ್ಟ್ ಪ್ರಾಂತ್ಯದ ಸ್ಪೆರೆ ಜಿಲ್ಲೆಯಲ್ಲಿ 800 ಮನೆಗಳು ನೆಲಸಮಗೊಂಡಿವೆ.</p>.<p>ಜರ್ಮನಿ, ನಾರ್ವೆ ಸೇರಿದಂತೆ ಇತರ ದೇಶಗಳು ವಿಶ್ವಸಂಸ್ಥೆಯ ಮೂಲಕ ಅಫ್ಗಾನಿಸ್ತಾನಕ್ಕೆ ಸಹಾಯಹಸ್ತ ಚಾಚುವುದಾಗಿ ಘೋಷಿಸಿವೆ.</p>.<p>ಭಾರತ, ಪಾಕಿಸ್ತಾನ, ಇರಾನ್ ಹಾಗೂ ಕತಾರ್ ದೇಶಗಳು ಭೂಕಂಪ ಪೀಡಿತ ಪ್ರದೇಶಗಳಿಗೆ ಮಾನವೀಯ ನೆರವು ನೀಡುವ ಕಾರ್ಯದಲ್ಲಿ ತೊಡಗಿವೆ. </p>.<p>ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪವು ಲಕ್ಷಾಂತರ ಮಕ್ಕಳನ್ನು ಅಪೌಷ್ಟಿಕತೆಯ ಅಪಾಯಕ್ಕೆ ದೂಡಲಿದೆ ಎಂದು ಹೇಳಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಬೂಲ್</strong>: ಅಫ್ಗಾನಿಸ್ತಾನದಲ್ಲಿ ಮಂಗಳವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 1,150 ಕ್ಕೆ ಏರಿಕೆಯಾಗಿದೆ.</p>.<p>6.1 ತೀವ್ರತೆಯ ಭೂಕಂಪದಿಂದಾಗಿ ಸಾವಿರಾರು ಮಂದಿ ಆಶ್ರಯ ಕಳೆದುಕೊಂಡಿದ್ದು, ಸುಮಾರು 3,000 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಫ್ಗಾನಿಸ್ತಾನದ ಸರ್ಕಾರಿ ಮಾಧ್ಯಮ ಮಾಹಿತಿ ನೀಡಿದೆ.</p>.<p>ಕಟ್ಟಡಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗ್ರಾಮಸ್ಥರು ಕೈಯಿಂದಲೇ ಅವಶೇಷಗಳನ್ನು ಹೊರತೆಗೆಯುತ್ತಿದ್ದಾರೆ.</p>.<p>ಪೂರ್ವ ಅಫ್ಗಾನಿಸ್ತಾನದ ಗಯಾನ್ ಜಿಲ್ಲೆಯಲ್ಲಿ ಕನಿಷ್ಠ 1,000 ಮನೆಗಳಿಗೆ ಹಾನಿಯಾಗಿದ್ದು, ಖೋಸ್ಟ್ ಪ್ರಾಂತ್ಯದ ಸ್ಪೆರೆ ಜಿಲ್ಲೆಯಲ್ಲಿ 800 ಮನೆಗಳು ನೆಲಸಮಗೊಂಡಿವೆ.</p>.<p>ಜರ್ಮನಿ, ನಾರ್ವೆ ಸೇರಿದಂತೆ ಇತರ ದೇಶಗಳು ವಿಶ್ವಸಂಸ್ಥೆಯ ಮೂಲಕ ಅಫ್ಗಾನಿಸ್ತಾನಕ್ಕೆ ಸಹಾಯಹಸ್ತ ಚಾಚುವುದಾಗಿ ಘೋಷಿಸಿವೆ.</p>.<p>ಭಾರತ, ಪಾಕಿಸ್ತಾನ, ಇರಾನ್ ಹಾಗೂ ಕತಾರ್ ದೇಶಗಳು ಭೂಕಂಪ ಪೀಡಿತ ಪ್ರದೇಶಗಳಿಗೆ ಮಾನವೀಯ ನೆರವು ನೀಡುವ ಕಾರ್ಯದಲ್ಲಿ ತೊಡಗಿವೆ. </p>.<p>ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪವು ಲಕ್ಷಾಂತರ ಮಕ್ಕಳನ್ನು ಅಪೌಷ್ಟಿಕತೆಯ ಅಪಾಯಕ್ಕೆ ದೂಡಲಿದೆ ಎಂದು ಹೇಳಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>