<p><strong>ವಾಷಿಂಗ್ಟನ್: </strong>ಖಲಿಸ್ತಾನ ಪ್ರತ್ಯೇಕತಾವಾದಿಗಳು ಇಲ್ಲಿನ ಭಾರತೀಯ ದೂತವಾಸ ಕಚೇರಿ ಬಳಿಯ ಮಹಾತ್ಮಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿರುವುದು ಅಪಾಯಕಾರಿ ಘಟನೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಮೆಕ್ಎನಾನಿ ಬಣ್ಣಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ‘ಇದೊಂದು ಭಯಾನಕ ಘಟನೆ. ಯಾವುದೇ ಪ್ರತಿಮೆ ಅಥವಾ ಸ್ಮಾರಕವನ್ನು ವಿರೂಪ ಅಥವಾ ಅಪವಿತ್ರಗೊಳಿಸಬಾರದು. ಗಾಂಧೀಜಿ ಮಾತ್ರವಲ್ಲ, ಅಮೆರಿಕ ಪ್ರತಿಪಾದಿಸುವ ಶಾಂತಿ, ಸೌಹಾರ್ದ ಮತ್ತು ಸ್ವಾತಂತ್ರ್ಯವನ್ನು ಗೌರವಿಸುವ ಯಾವುದೇ ವ್ಯಕ್ತಿಗಳ ಪ್ರತಿಮೆಗಳನ್ನು ಅಗೌರವಿಸಬಾರದು‘ ಎಂದರು.</p>.<p>ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲವಾಗಿ ಅಮೆರಿಕನ್–ಸಿಖ್ ಯುವಕರು ಕರೆ ನೀಡಿದ್ದ ಪ್ರತಿಭಟನೆ ವೇಳೆ ಕೆಲವು ಖಲಿಸ್ತಾನ ಪ್ರತ್ಯೇಕತಾವಾದಿಗಳು ಭಾರತೀಯ ದೂತವಾಸ ಕಚೇರಿ ಬಳಿಯ ಗಾಂಧಿ ಪುತ್ಥಳಿಗೆ ಪೋಸ್ಟರ್ ಹಚ್ಚಿ ಅಪವಿತ್ರಗೊಳಿಸಿದ್ದರು.</p>.<p>‘ಹಲವು ಬಾರಿ ಇಂಥ ಘಟನೆಗಳು ಸಂಭಿಸಿದ್ದು, ಇದು ಬಹಳ ಭಯ ಹುಟ್ಟಿಸುವಂತಹದ್ದು‘ ಎಂದು ಹೇಳಿದ ಅವರು, ‘ನಾವು ಮಹಾತ್ಮ ಗಾಂಧೀಜಿ ಅವರನ್ನು ಎಂದೆಂದೂ ಗೌರವಿಸುತ್ತೇವೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>ಖಲಿಸ್ತಾನ ಪ್ರತ್ಯೇಕತಾವಾದಿಗಳು ಇಲ್ಲಿನ ಭಾರತೀಯ ದೂತವಾಸ ಕಚೇರಿ ಬಳಿಯ ಮಹಾತ್ಮಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿರುವುದು ಅಪಾಯಕಾರಿ ಘಟನೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಮೆಕ್ಎನಾನಿ ಬಣ್ಣಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ‘ಇದೊಂದು ಭಯಾನಕ ಘಟನೆ. ಯಾವುದೇ ಪ್ರತಿಮೆ ಅಥವಾ ಸ್ಮಾರಕವನ್ನು ವಿರೂಪ ಅಥವಾ ಅಪವಿತ್ರಗೊಳಿಸಬಾರದು. ಗಾಂಧೀಜಿ ಮಾತ್ರವಲ್ಲ, ಅಮೆರಿಕ ಪ್ರತಿಪಾದಿಸುವ ಶಾಂತಿ, ಸೌಹಾರ್ದ ಮತ್ತು ಸ್ವಾತಂತ್ರ್ಯವನ್ನು ಗೌರವಿಸುವ ಯಾವುದೇ ವ್ಯಕ್ತಿಗಳ ಪ್ರತಿಮೆಗಳನ್ನು ಅಗೌರವಿಸಬಾರದು‘ ಎಂದರು.</p>.<p>ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲವಾಗಿ ಅಮೆರಿಕನ್–ಸಿಖ್ ಯುವಕರು ಕರೆ ನೀಡಿದ್ದ ಪ್ರತಿಭಟನೆ ವೇಳೆ ಕೆಲವು ಖಲಿಸ್ತಾನ ಪ್ರತ್ಯೇಕತಾವಾದಿಗಳು ಭಾರತೀಯ ದೂತವಾಸ ಕಚೇರಿ ಬಳಿಯ ಗಾಂಧಿ ಪುತ್ಥಳಿಗೆ ಪೋಸ್ಟರ್ ಹಚ್ಚಿ ಅಪವಿತ್ರಗೊಳಿಸಿದ್ದರು.</p>.<p>‘ಹಲವು ಬಾರಿ ಇಂಥ ಘಟನೆಗಳು ಸಂಭಿಸಿದ್ದು, ಇದು ಬಹಳ ಭಯ ಹುಟ್ಟಿಸುವಂತಹದ್ದು‘ ಎಂದು ಹೇಳಿದ ಅವರು, ‘ನಾವು ಮಹಾತ್ಮ ಗಾಂಧೀಜಿ ಅವರನ್ನು ಎಂದೆಂದೂ ಗೌರವಿಸುತ್ತೇವೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>