<p><strong>ವಿಶ್ವಸಂಸ್ಥೆ:</strong> ‘ಯುದ್ಧಪೀಡಿತ ಉಕ್ರೇನ್ನ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಅನುಕೂಲವಾಗುವಂತೆ ಸುರಕ್ಷಿತ ಕಾರಿಡಾರ್ ಒದಗಿಸುವಂತೆ ಹಲವು ಬಾರಿ ಒತ್ತಾಯಿಸಲಾಗಿದ್ದರೂ, ಫಲಪ್ರದವಾಗಿಲ್ಲ’ ಎಂದು ವಿಶ್ವಸಂಸ್ಥೆಯ ಭದ್ರತಾಮಂಡಳಿ ಸಭೆಯಲ್ಲಿ ಭಾರತ ಕಳವಳ ವ್ಯಕ್ತಪಡಿಸಿದೆ.</p>.<p>‘ಯುದ್ಧಪೀಡಿತ ಪ್ರದೇಶಗಳಿಂದ ಈ ವರೆಗೆ 20 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ. ಉಳಿದವರ ತೆರವಿಗಾಗಿ ರಷ್ಯಾ ಹಾಗೂ ಉಕ್ರೇನ್ಗೆ ಪದೇಪದೇ ಮನವಿ ಮಾಡಲಾಗಿದ್ದರೂ, ಸುರಕ್ಷಿತ ಕಾರಿಡಾರ್ ಕಾರ್ಯರೂಪಕ್ಕೆ ಬಂದಿಲ್ಲ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಹೇಳಿದ್ದಾರೆ.</p>.<p>‘ಮಾನವೀಯ ಕಾರಿಡಾರ್ ಒದಗಿಸುವ ವಿಷಯವನ್ನು ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಬಾರದು. ಮಾನವೀಯ ನೆರವು, ತಟಸ್ಥ ಧೋರಣೆ, ನಿಷ್ಪಕ್ಷಪಾತ ಹಾಗೂ ಸ್ವಾತಂತ್ರ್ಯದಂತಹ ತತ್ವಗಳೇ ಈ ಕಾರ್ಯಕ್ಕೆ ಮಾರ್ಗದರ್ಶಿಸೂತ್ರಗಳಾಗಬೇಕು’ ಎಂದೂ ಅವರು ಪ್ರತಿಪಾದಿಸಿದರು.</p>.<p>‘ಕೇವಲ ಭಾರತೀಯರಷ್ಟೇ ಅಲ್ಲ, ಸಹಾಯ ಯಾಚಿಸಿದ ಬೇರೆ ದೇಶಗಳ ಪ್ರಜೆಗಳಿಗೂ ಸಹ ಭಾರತ ಸ್ಪಂದಿಸಿದೆ. ಬರುವ ದಿನಗಳಲ್ಲಿ ಇಂಥ ಸ್ಪಂದನೆ ಮುಂದುವರಿಯುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ‘ಯುದ್ಧಪೀಡಿತ ಉಕ್ರೇನ್ನ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಅನುಕೂಲವಾಗುವಂತೆ ಸುರಕ್ಷಿತ ಕಾರಿಡಾರ್ ಒದಗಿಸುವಂತೆ ಹಲವು ಬಾರಿ ಒತ್ತಾಯಿಸಲಾಗಿದ್ದರೂ, ಫಲಪ್ರದವಾಗಿಲ್ಲ’ ಎಂದು ವಿಶ್ವಸಂಸ್ಥೆಯ ಭದ್ರತಾಮಂಡಳಿ ಸಭೆಯಲ್ಲಿ ಭಾರತ ಕಳವಳ ವ್ಯಕ್ತಪಡಿಸಿದೆ.</p>.<p>‘ಯುದ್ಧಪೀಡಿತ ಪ್ರದೇಶಗಳಿಂದ ಈ ವರೆಗೆ 20 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ. ಉಳಿದವರ ತೆರವಿಗಾಗಿ ರಷ್ಯಾ ಹಾಗೂ ಉಕ್ರೇನ್ಗೆ ಪದೇಪದೇ ಮನವಿ ಮಾಡಲಾಗಿದ್ದರೂ, ಸುರಕ್ಷಿತ ಕಾರಿಡಾರ್ ಕಾರ್ಯರೂಪಕ್ಕೆ ಬಂದಿಲ್ಲ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಹೇಳಿದ್ದಾರೆ.</p>.<p>‘ಮಾನವೀಯ ಕಾರಿಡಾರ್ ಒದಗಿಸುವ ವಿಷಯವನ್ನು ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಬಾರದು. ಮಾನವೀಯ ನೆರವು, ತಟಸ್ಥ ಧೋರಣೆ, ನಿಷ್ಪಕ್ಷಪಾತ ಹಾಗೂ ಸ್ವಾತಂತ್ರ್ಯದಂತಹ ತತ್ವಗಳೇ ಈ ಕಾರ್ಯಕ್ಕೆ ಮಾರ್ಗದರ್ಶಿಸೂತ್ರಗಳಾಗಬೇಕು’ ಎಂದೂ ಅವರು ಪ್ರತಿಪಾದಿಸಿದರು.</p>.<p>‘ಕೇವಲ ಭಾರತೀಯರಷ್ಟೇ ಅಲ್ಲ, ಸಹಾಯ ಯಾಚಿಸಿದ ಬೇರೆ ದೇಶಗಳ ಪ್ರಜೆಗಳಿಗೂ ಸಹ ಭಾರತ ಸ್ಪಂದಿಸಿದೆ. ಬರುವ ದಿನಗಳಲ್ಲಿ ಇಂಥ ಸ್ಪಂದನೆ ಮುಂದುವರಿಯುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>