<p><strong>ರೋಮ್: </strong>ಹವಾಮಾನ ಬದಲಾವಣೆ ವಿರುದ್ಧ ಹೋರಾಟಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಮ್ಮ ದೇಶದ ಜಿಡಿಪಿಯ ಶೇ 1ರಷ್ಟನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿನ ‘ಹಸಿರು ಯೋಜನೆ‘ಗಳಿಗೆ ನೀಡುವ ಕುರಿತು ಗುರಿ ನಿಗದಿಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.</p>.<p>ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಅಗತ್ಯ ಹಣಕಾಸು ನೆರವು ನೀಡಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ನಿರ್ಲಕ್ಷ್ಯಿಸುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ ಎಂದು ಹೇಳಿದ ಪ್ರಧಾನಿಯವರು, ‘ಈ ಬಗ್ಗೆ ಸ್ಪಷ್ಟತೆ ಇಲ್ಲದೇ, ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಹವಾಮಾನ ಬದಲಾವಣೆ ನಿಯಂತ್ರಿಸುವಂತೆ ಒತ್ತಡ ಹೇರುವುದು ನ್ಯಾಯಸಮ್ಮತವಲ್ಲ‘ ಎಂದು ಪ್ರತಿಪಾದಿಸಿದ್ದಾರೆ.</p>.<p>ಭಾನುವಾರ ಇಲ್ಲಿ ಮುಕ್ತಾಯಗೊಂಡ ಜಿ20 ರಾಷ್ಟ್ರಗಳ ಶೃಂಗಸಭೆಯಲ್ಲಿ ‘ಹವಾಮಾನ ಬದಲಾವಣೆ ಮತ್ತು ಪರಿಸರ‘ ಕುರಿತು ಮಾತನಾಡಿದ ಪ್ರಧಾನಿ ಮೋದಿ, ‘ಹವಾಮಾನದ ವಿಷಯದಲ್ಲಿ ನ್ಯಾಯ ಒದಗಿಸುವುದನ್ನೇ ನಾವು ಮರೆತಿದ್ದೇವೆ. ಈ ವಿಷಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗಷ್ಟೇ ಅನ್ಯಾಯ ಮಾಡುತ್ತಿಲ್ಲ, ಇಡೀ ಮಾನವಕುಲಕ್ಕೆ ದ್ರೋಹ ಬಗೆಯುತ್ತಿದ್ದೇವೆ‘ ಎಂದು ಹೇಳಿದ್ದಾರೆ.</p>.<p>ಹವಾಮಾನ ಬದಲಾವಣೆ ನಿಯಂತ್ರಣದ ವಿಷಯದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹಣಕಾಸು ಒದಗಿಸಲು ನಿರ್ಲಕ್ಷ್ಯ ತೋರುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ. ಈ ವಿಷಯದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪರ ಧ್ವನಿಯಾಗಲಿದೆ‘ ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಮ್: </strong>ಹವಾಮಾನ ಬದಲಾವಣೆ ವಿರುದ್ಧ ಹೋರಾಟಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಮ್ಮ ದೇಶದ ಜಿಡಿಪಿಯ ಶೇ 1ರಷ್ಟನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿನ ‘ಹಸಿರು ಯೋಜನೆ‘ಗಳಿಗೆ ನೀಡುವ ಕುರಿತು ಗುರಿ ನಿಗದಿಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.</p>.<p>ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಅಗತ್ಯ ಹಣಕಾಸು ನೆರವು ನೀಡಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ನಿರ್ಲಕ್ಷ್ಯಿಸುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ ಎಂದು ಹೇಳಿದ ಪ್ರಧಾನಿಯವರು, ‘ಈ ಬಗ್ಗೆ ಸ್ಪಷ್ಟತೆ ಇಲ್ಲದೇ, ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಹವಾಮಾನ ಬದಲಾವಣೆ ನಿಯಂತ್ರಿಸುವಂತೆ ಒತ್ತಡ ಹೇರುವುದು ನ್ಯಾಯಸಮ್ಮತವಲ್ಲ‘ ಎಂದು ಪ್ರತಿಪಾದಿಸಿದ್ದಾರೆ.</p>.<p>ಭಾನುವಾರ ಇಲ್ಲಿ ಮುಕ್ತಾಯಗೊಂಡ ಜಿ20 ರಾಷ್ಟ್ರಗಳ ಶೃಂಗಸಭೆಯಲ್ಲಿ ‘ಹವಾಮಾನ ಬದಲಾವಣೆ ಮತ್ತು ಪರಿಸರ‘ ಕುರಿತು ಮಾತನಾಡಿದ ಪ್ರಧಾನಿ ಮೋದಿ, ‘ಹವಾಮಾನದ ವಿಷಯದಲ್ಲಿ ನ್ಯಾಯ ಒದಗಿಸುವುದನ್ನೇ ನಾವು ಮರೆತಿದ್ದೇವೆ. ಈ ವಿಷಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗಷ್ಟೇ ಅನ್ಯಾಯ ಮಾಡುತ್ತಿಲ್ಲ, ಇಡೀ ಮಾನವಕುಲಕ್ಕೆ ದ್ರೋಹ ಬಗೆಯುತ್ತಿದ್ದೇವೆ‘ ಎಂದು ಹೇಳಿದ್ದಾರೆ.</p>.<p>ಹವಾಮಾನ ಬದಲಾವಣೆ ನಿಯಂತ್ರಣದ ವಿಷಯದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹಣಕಾಸು ಒದಗಿಸಲು ನಿರ್ಲಕ್ಷ್ಯ ತೋರುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ. ಈ ವಿಷಯದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪರ ಧ್ವನಿಯಾಗಲಿದೆ‘ ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>