ನೂರಾರು ಜನರು ರಾಜಪಕ್ಸ ಅವರ ನಿವಾಸವನ್ನು ಮುತ್ತಿಗೆ ಹಾಕಲು ಪ್ರಯತ್ನಿಸಿದ ಮರುದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ. ‘ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಇದೆ ಎಂಬುದು ನನ್ನ ನಂಬಿಕೆ. ಅದರಿಂದಾಗಿ ಕಠಿಣ ಕಾನೂನುಗಳನ್ನು ಜಾರಿ ಮಾಡ
ಬೇಕಾಯಿತು. ಶಂಕಿತರನ್ನು ಬಂಧಿಸಲು, ವಶಕ್ಕೆ ತೆಗೆದುಕೊಳ್ಳಲು ಭದ್ರತಾ ಪಡೆಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ’ ಎಂದು ರಾಜಪಕ್ಸ ಹೇಳಿದ್ದಾರೆ.