ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಷ್ಯಾದಲ್ಲಿ ‘ಕೊರೊನಾವೈರಸ್‌ ತುರ್ತುಪರಿಸ್ಥಿತಿ’ ಘೋಷಣೆ

Last Updated 12 ಜನವರಿ 2021, 10:03 IST
ಅಕ್ಷರ ಗಾತ್ರ

ಕ್ವಾಲಾಲಂಪುರ: ಕೊರೊನಾವೈರಸ್‌ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಲೇಷ್ಯಾದಲ್ಲಿ ತುರ್ತುಪರಿಸ್ಥಿತಿ ಘೋಷಣೆಗೆ ಅಲ್ಲಿನ ರಾಜಅಂಗೀಕಾರ ನೀಡಿದ್ದು, ಆಗಸ್ಟ್‌ವರೆಗೆ ಸಂಸತ್‌ ಅನ್ನು ಅಮಾನತಿನಲ್ಲಿಡಲಾಗುತ್ತಿದೆ.

ತುರ್ತುಪರಿಸ್ಥಿತಿ ಘೋಷಣೆ ಹಿನ್ನೆಲೆಯಲ್ಲಿ ಈಗ ನಡೆಯಬೇಕಾಗಿದ್ದ ಸಾರ್ವತ್ರಿಕ ಚುನಾವಣೆಯನ್ನು ಮುಂದೂಡಲಾಗುತ್ತಿದೆ.

ತುರ್ತುಪರಿಸ್ಥಿತಿ ಘೋಷಣೆ ಅಂಗೀಕಾರವಾದ ನಂತರ ದೂರದರ್ಶನದ ಮೂಲಕ ಮಾತನಾಡಿದ ಪ್ರಧಾನ ಮಂತ್ರಿ ಮೊಹಿದ್ದೀನ್‌, ‘ಈಗ ಘೋಷಿಸಿರುವ ತುರ್ತು ಪರಿಸ್ಥಿತಿ ಯಾವುದೇ ಸೇನಾ ದಂಗೆಯಲ್ಲ. ಈಗ ದೇಶದಲ್ಲಿ ಕರ್ಫ್ಯೂ ವಿ‌ಧಿಸುವುದಿಲ್ಲ‘ ಎಂದು ಮಲೇಷ್ಯಾ ನಾಗರಿಕರಿಗೆ ಭರವಸೆ ನೀಡಿದರು. ‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಮ್ಮ ಸರ್ಕಾರ ಉಸ್ತುವಾರಿಯಾಗಿ ದೇಶವನ್ನು ಮುನ್ನಡೆಸಲಿದೆ‘ ಎಂದು ತಿಳಿಸಿದರು.

ಕ್ವಾಲಾಲಂಪುರದ ಆಡಳಿತಾತ್ಮಕ ರಾಜಧಾನಿ ಪುತ್ರಜಯ ಸೇರಿದಂತೆ ಐದು ರಾಜ್ಯಗಳಲ್ಲಿ ಲಾಕ್‌ಡೌನ್‌ ತೆರವುಗೊಳಿಸುವ ಒಂದು ದಿನದ ಮೊದಲು ಮಲೇಷ್ಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT