ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಮಾಸಿಕ ಸಭೆಯು ಈಚೆಗೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ (ಉಪ) ಕೆ.ನಾಗರಾಜ ನಾಯ್ಡು ಅವರು,‘ತೈಜ್, ಅಲ್ ಜಾವ್ಫ್ ಮತ್ತು ಸನಾದಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷಗಳು ಆತಂಕವನ್ನುಂಟು ಮಾಡಿದೆ. ಈ ಸಂಘರ್ಷದಿಂದಾಗಿ ಸಾವು–ನೋವು ಉಂಟಾಗಿದೆ. ಆಸ್ತಿಗಳಿಗೆ ಹಾನಿಯಾಗಿದೆ. ಅಲ್ಲದೆ ಹಲವಾರು ನಾಗರಿಕರನ್ನು ಸ್ಥಳಾಂತರಿಸುವ ಪರಿಸ್ಥಿತಿ ಎದುರಾಗಿದೆ’ ಎಂದರು.