<p><strong>ವಿಶ್ವಸಂಸ್ಥೆ: </strong>ಅಭದ್ರತೆ ಮತ್ತು ಹಿಂಸಾಚಾರದ ಕಾರಣದಿಂದಾಗಿ ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಹೊಸದಾಗಿ 2.70 ಲಕ್ಷ ಆಫ್ಗನ್ನರು ದೇಶದಿಂದ ಸ್ಥಳಾಂತರಗೊಂಡಿರುವುದಾಗಿ ಹೇಳಿರುವ ವಿಶ್ವಸಂಸ್ಥೆಯ ನಿರಾಶ್ರಿತರ ಆಯೋಗ(ಯುಎನ್ಎಚ್ಸಿಆರ್), ಅಭದ್ರತೆಯ ಕಾರಣದ ಆಫ್ಗಾನಿಸ್ತಾನದಲ್ಲಿ ಮಾನವೀಯತೆಯ ಬಿಕ್ಕಟ್ಟು ತೀವ್ರವಾಗುವ ಸಾಧ್ಯತೆ ಕುರಿತು ಎಚ್ಚರಿಕೆ ನೀಡಿದೆ.</p>.<p>ಅಫ್ಗಾನಿಸ್ತಾನದಿಂದ ಅಮೆರಿಕ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಆರಂಭಿಸಿದ ನಂತರ, ತಾಲಿಬಾನಿಗಳು ವೇಗವಾಗಿ ಆಫ್ಗನ್ನ ಹೆಚ್ಚಿನ ಪ್ರದೇಶಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿರುವ ಕಾರಣ, ಅಲ್ಲೀಗ ಅಭದ್ರತೆಯ ವಾತಾವರಣ ಸೃಷ್ಟಿಯಾಗುತ್ತಿದೆ.</p>.<p>’ಸಂಘರ್ಷಗಳು ಹೆಚ್ಚಾಗುತ್ತಿರುವ ಕಾರಣ ನಾಗರಿಕರು ಸಂಕಷ್ಟ ಎದುರಿಸುತ್ತಿದ್ದು, ನಾಗರಿಕರ ಸ್ಥಳಾಂತರವೂ ಹೆಚ್ಚುತ್ತಿದೆ. ಇದು ಆಫ್ಗಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ತೀವ್ರವಾಗುತ್ತಿರುವುದರ ಎಚ್ಚರಿಕೆಯ ಗಂಟೆಯಾಗಿದೆ’ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆಯ ಹೈ ಕಮಿಷನರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ: </strong>ಅಭದ್ರತೆ ಮತ್ತು ಹಿಂಸಾಚಾರದ ಕಾರಣದಿಂದಾಗಿ ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಹೊಸದಾಗಿ 2.70 ಲಕ್ಷ ಆಫ್ಗನ್ನರು ದೇಶದಿಂದ ಸ್ಥಳಾಂತರಗೊಂಡಿರುವುದಾಗಿ ಹೇಳಿರುವ ವಿಶ್ವಸಂಸ್ಥೆಯ ನಿರಾಶ್ರಿತರ ಆಯೋಗ(ಯುಎನ್ಎಚ್ಸಿಆರ್), ಅಭದ್ರತೆಯ ಕಾರಣದ ಆಫ್ಗಾನಿಸ್ತಾನದಲ್ಲಿ ಮಾನವೀಯತೆಯ ಬಿಕ್ಕಟ್ಟು ತೀವ್ರವಾಗುವ ಸಾಧ್ಯತೆ ಕುರಿತು ಎಚ್ಚರಿಕೆ ನೀಡಿದೆ.</p>.<p>ಅಫ್ಗಾನಿಸ್ತಾನದಿಂದ ಅಮೆರಿಕ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಆರಂಭಿಸಿದ ನಂತರ, ತಾಲಿಬಾನಿಗಳು ವೇಗವಾಗಿ ಆಫ್ಗನ್ನ ಹೆಚ್ಚಿನ ಪ್ರದೇಶಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿರುವ ಕಾರಣ, ಅಲ್ಲೀಗ ಅಭದ್ರತೆಯ ವಾತಾವರಣ ಸೃಷ್ಟಿಯಾಗುತ್ತಿದೆ.</p>.<p>’ಸಂಘರ್ಷಗಳು ಹೆಚ್ಚಾಗುತ್ತಿರುವ ಕಾರಣ ನಾಗರಿಕರು ಸಂಕಷ್ಟ ಎದುರಿಸುತ್ತಿದ್ದು, ನಾಗರಿಕರ ಸ್ಥಳಾಂತರವೂ ಹೆಚ್ಚುತ್ತಿದೆ. ಇದು ಆಫ್ಗಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ತೀವ್ರವಾಗುತ್ತಿರುವುದರ ಎಚ್ಚರಿಕೆಯ ಗಂಟೆಯಾಗಿದೆ’ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆಯ ಹೈ ಕಮಿಷನರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>