<p class="title"><strong>ಜೆರುಸಲೆಂ</strong>: ಆಧುನಿಕ ಕೃಷಿ ತಂತ್ರಗಳನ್ನು ಅಧ್ಯಯನ ಮಾಡಲು ಕೇರಳದಿಂದ ಇಸ್ರೇಲ್ಗೆ ತೆರಳಿದ್ದ 48 ವರ್ಷದ ರೈತ ನಾಪತ್ತೆಯಾಗಿದ್ದು, ಇಸ್ರೇಲ್ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ.</p>.<p class="title">ಹೈಡ್ರೋಪೋನಿಕ್ಸ್ ಮತ್ತು ನಿಖರ ಕೃಷಿಯ ಬಗ್ಗೆ ಮಾಹಿತಿ ಪಡೆಯಲು ಕೇರಳ ಸರ್ಕಾರ 28 ಜನರನ್ನು ಇಸ್ರೇಲ್ಗೆ ಕಳುಹಿಸಿತ್ತು. ಈ ಪೈಕಿ ಕಣ್ಣೂರು ಜಿಲ್ಲೆಯ ಉಲಿಕ್ಕಲ ಪಂಚಾಯತ್ನ ರೈತ ಬಿಜು ಕುರಿಯನ್ ಫೆ.17ರಂದು ನಾಪತ್ತೆಯಾಗಿದ್ದಾರೆ.</p>.<p class="title">ಇಸ್ರೇಲ್ನ ಕಾನೂನು ಜಾರಿ ಸಂಸ್ಥೆ ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಿದರೂ ಅವರು ಎಲ್ಲಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಕುರಿಯನ್ ವಿರುದ್ಧ ದೂರು ದಾಖಲು ಮಾಡಿದ್ದು, ಅವರು ಸಿಕ್ಕಿದ ನಂತರ ಗಡಿಪಾರು ಮಾಡಲಾಗುವುದು ಎಂದು ಅಲ್ಲಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ. ಅಶೋಕ್ ನೇತೃತ್ವದ ನಿಯೋಗ ಇದೇ 11ರಂದು ಇಸ್ರೇಲ್ಗೆ ತೆರಳಿತ್ತು. ಕುರಿಯನ್ ಬಿಟ್ಟು ಉಳಿದವರ ತಂಡ ಭಾನುವಾರ ಇಸ್ರೇಲ್ನಿಂದ ನಿರ್ಗಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಕಣ್ಣೂರಿನಲ್ಲಿರುವ ಕುರಿಯನ್ ಕುಟುಂಬಕ್ಕೂ ಕೂಡ ಅವರ ನಿಗೂಢ ನಾಪತ್ತೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೆರುಸಲೆಂ</strong>: ಆಧುನಿಕ ಕೃಷಿ ತಂತ್ರಗಳನ್ನು ಅಧ್ಯಯನ ಮಾಡಲು ಕೇರಳದಿಂದ ಇಸ್ರೇಲ್ಗೆ ತೆರಳಿದ್ದ 48 ವರ್ಷದ ರೈತ ನಾಪತ್ತೆಯಾಗಿದ್ದು, ಇಸ್ರೇಲ್ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ.</p>.<p class="title">ಹೈಡ್ರೋಪೋನಿಕ್ಸ್ ಮತ್ತು ನಿಖರ ಕೃಷಿಯ ಬಗ್ಗೆ ಮಾಹಿತಿ ಪಡೆಯಲು ಕೇರಳ ಸರ್ಕಾರ 28 ಜನರನ್ನು ಇಸ್ರೇಲ್ಗೆ ಕಳುಹಿಸಿತ್ತು. ಈ ಪೈಕಿ ಕಣ್ಣೂರು ಜಿಲ್ಲೆಯ ಉಲಿಕ್ಕಲ ಪಂಚಾಯತ್ನ ರೈತ ಬಿಜು ಕುರಿಯನ್ ಫೆ.17ರಂದು ನಾಪತ್ತೆಯಾಗಿದ್ದಾರೆ.</p>.<p class="title">ಇಸ್ರೇಲ್ನ ಕಾನೂನು ಜಾರಿ ಸಂಸ್ಥೆ ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಿದರೂ ಅವರು ಎಲ್ಲಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಕುರಿಯನ್ ವಿರುದ್ಧ ದೂರು ದಾಖಲು ಮಾಡಿದ್ದು, ಅವರು ಸಿಕ್ಕಿದ ನಂತರ ಗಡಿಪಾರು ಮಾಡಲಾಗುವುದು ಎಂದು ಅಲ್ಲಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ. ಅಶೋಕ್ ನೇತೃತ್ವದ ನಿಯೋಗ ಇದೇ 11ರಂದು ಇಸ್ರೇಲ್ಗೆ ತೆರಳಿತ್ತು. ಕುರಿಯನ್ ಬಿಟ್ಟು ಉಳಿದವರ ತಂಡ ಭಾನುವಾರ ಇಸ್ರೇಲ್ನಿಂದ ನಿರ್ಗಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಕಣ್ಣೂರಿನಲ್ಲಿರುವ ಕುರಿಯನ್ ಕುಟುಂಬಕ್ಕೂ ಕೂಡ ಅವರ ನಿಗೂಢ ನಾಪತ್ತೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>