<p><strong>ಸ್ಕೊಪ್ಜೆ(ಉತ್ತರ ಮೆಸಿಡೊನಿಯಾ ಗಣರಾಜ್ಯ):</strong> ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಉತ್ತರ ಮೆಸಿಡೋನಿಯಾದ ಕೋವಿಡ್ ಆರೈಕೆ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಬಾಲ್ಕನ್ ದೇಶದ ವಾಯವ್ಯದಲ್ಲಿರುವ ಟೆಟೊವೊ ಪಟ್ಟಣದ ಕೋವಿಡ್ ಕೇಂದ್ರದಲ್ಲಿ ಬುಧವಾರ ರಾತ್ರಿ ಬಹುದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಸ್ಫೋಟದಿಂದ ಸಂಭವಿಸಿರುವ ಈ ಅವಘಡದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ‘ ಎಂದು ಪ್ರಧಾನಿ ಜೊರನ್ ಝಯೇವ್ ಟ್ವೀಟ್ ಮಾಡಿದ್ದಾರೆ.</p>.<p>‘ಈ ಅಗ್ನಿ ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ‘ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಬೆಂಕಿ ಅವಘಡದಲ್ಲಿ ಮೃತಪಟ್ಟವರ ಗುರುತು ಪತ್ತೆಗಾಗಿ ಶವಪರೀಕ್ಷೆ ನಡೆಸುವಂತೆ ಆದೇಶಿಸಲಾಗಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವ ವೆಂಕೊ ಫಿಲಿಪ್ಸ್ ಸಂತ್ರಸ್ತ ಕುಟುಂಬಗಳಿಗೆ ಟ್ವೀಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.</p>.<p>ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಆಸ್ಪತ್ರೆಯ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಮಾಡ್ಯುಲಾರ್ ಘಟಕಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ.</p>.<p><a href="https://www.prajavani.net/world-news/pakistan-duplicity-on-islamist-terror-exposed-after-harbouring-osama-fm-shah-mahmood-qureshi-865265.html" itemprop="url">ಅಲ್-ಖೈದಾ ಭೀತಿ: ಲಾಡೆನ್ಗೆ ಆಶ್ರಯಕೊಟ್ಟಿದ್ದ ಪಾಕ್ನ ವಿದೇಶಾಂಗ ಸಚಿವ ಖುರೇಷಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸ್ಕೊಪ್ಜೆ(ಉತ್ತರ ಮೆಸಿಡೊನಿಯಾ ಗಣರಾಜ್ಯ):</strong> ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಉತ್ತರ ಮೆಸಿಡೋನಿಯಾದ ಕೋವಿಡ್ ಆರೈಕೆ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಬಾಲ್ಕನ್ ದೇಶದ ವಾಯವ್ಯದಲ್ಲಿರುವ ಟೆಟೊವೊ ಪಟ್ಟಣದ ಕೋವಿಡ್ ಕೇಂದ್ರದಲ್ಲಿ ಬುಧವಾರ ರಾತ್ರಿ ಬಹುದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಸ್ಫೋಟದಿಂದ ಸಂಭವಿಸಿರುವ ಈ ಅವಘಡದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ‘ ಎಂದು ಪ್ರಧಾನಿ ಜೊರನ್ ಝಯೇವ್ ಟ್ವೀಟ್ ಮಾಡಿದ್ದಾರೆ.</p>.<p>‘ಈ ಅಗ್ನಿ ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ‘ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಬೆಂಕಿ ಅವಘಡದಲ್ಲಿ ಮೃತಪಟ್ಟವರ ಗುರುತು ಪತ್ತೆಗಾಗಿ ಶವಪರೀಕ್ಷೆ ನಡೆಸುವಂತೆ ಆದೇಶಿಸಲಾಗಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವ ವೆಂಕೊ ಫಿಲಿಪ್ಸ್ ಸಂತ್ರಸ್ತ ಕುಟುಂಬಗಳಿಗೆ ಟ್ವೀಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.</p>.<p>ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಆಸ್ಪತ್ರೆಯ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಮಾಡ್ಯುಲಾರ್ ಘಟಕಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ.</p>.<p><a href="https://www.prajavani.net/world-news/pakistan-duplicity-on-islamist-terror-exposed-after-harbouring-osama-fm-shah-mahmood-qureshi-865265.html" itemprop="url">ಅಲ್-ಖೈದಾ ಭೀತಿ: ಲಾಡೆನ್ಗೆ ಆಶ್ರಯಕೊಟ್ಟಿದ್ದ ಪಾಕ್ನ ವಿದೇಶಾಂಗ ಸಚಿವ ಖುರೇಷಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>