ರಾಮಾಯಣ ಸರ್ಕ್ಯೂಟ್ ಅಭಿವೃದ್ಧಿ ಮತ್ತು ಶ್ರೀರಾಮ ಹಾಗೂ ಸೀತೆಗೆ ಸಂಬಂಧಿಸಿದ ಮುಖ್ಯ ಸ್ಥಳಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು ಈ ರೈಲು ಸೇವೆ ಆರಂಭಿಸಿತ್ತು. ರಾಮಾಯಣಕ್ಕೆ ಸಂಬಂಧಿಸಿದ ಅಯೋಧ್ಯೆ, ನಂದಿಗ್ರಾಮ, ವಾರಾಣಸಿ, ಪ್ರಯಾಗ್ರಾಜ್, ಚಿತ್ರಕೂಟ, ಪಂಚವತಿ, ಕರ್ನಾಟಕದ ಹಂಪಿ ಸೇರಿದಂತೆ ಹಲವು ಯಾತ್ರಿಕರ ಸ್ಥಳಗಳಿಗೆ ತೆರಳುವ ಈ ರೈಲು ಇದೇ ಮೊದಲ ಬಾರಿಗೆ ನೇಪಾಳದ ಜನಕಪುರಕ್ಕೆ ಬಂದಿದೆ.