<p class="title"><strong>ರಾಮೇಶ್ವರ</strong>: ಒಡಿಶಾ ಮೂಲದ ಆರು ವಲಸೆ ಕಾರ್ಮಿಕರು 45 ವರ್ಷದ ಮೀನುಗಾರ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಕೊಲೆಗೈದ ಘಟನೆ ತಮಿಳುನಾಡಿನ ರಾಮೇಶ್ವರ ಸಮೀಪದ ವಡಕಾಡು ಮೀನುಗಾರಿಕೆ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಮಂಗಳವಾರ ಬೆಳಿಗ್ಗೆ ಸೀವೀಡ್ಸ್ (ಕಡರ್ಪಾಸಿ) ಸಂಗ್ರಹಿಸಲು ತೆರಳಿದ್ದಸಂತ್ರಸ್ತ ಮಹಿಳೆ ವಾಪಸ್ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಡುವೆ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಇಲ್ಲಿನ ಸೀಗಡಿ ಫಾರ್ಮ್ನಲ್ಲಿ ಪತ್ತೆಯಾಗಿದೆ.</p>.<p>ಬಳಿಕ 6 ವಲಸೆ ಕಾರ್ಮಿಕರು ಈ ಕೃತ್ಯ ನಡೆಸಿದ್ದಾರೆಂದು ತಿಳಿದ ಗ್ರಾಮಸ್ಥರು ಆರೋಪಿಗಳನ್ನು ತೀವ್ರವಾಗಿ ಥಳಿಸಿದ್ದಾರೆ. ಸದ್ಯ ಪ್ರಕರಣದ ಆರು ಮಂದಿ ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಬೆನ್ನಲ್ಲೇ ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಗ್ರಾಮಸ್ಥರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ರಾಮೇಶ್ವರ</strong>: ಒಡಿಶಾ ಮೂಲದ ಆರು ವಲಸೆ ಕಾರ್ಮಿಕರು 45 ವರ್ಷದ ಮೀನುಗಾರ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಕೊಲೆಗೈದ ಘಟನೆ ತಮಿಳುನಾಡಿನ ರಾಮೇಶ್ವರ ಸಮೀಪದ ವಡಕಾಡು ಮೀನುಗಾರಿಕೆ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಮಂಗಳವಾರ ಬೆಳಿಗ್ಗೆ ಸೀವೀಡ್ಸ್ (ಕಡರ್ಪಾಸಿ) ಸಂಗ್ರಹಿಸಲು ತೆರಳಿದ್ದಸಂತ್ರಸ್ತ ಮಹಿಳೆ ವಾಪಸ್ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಡುವೆ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಇಲ್ಲಿನ ಸೀಗಡಿ ಫಾರ್ಮ್ನಲ್ಲಿ ಪತ್ತೆಯಾಗಿದೆ.</p>.<p>ಬಳಿಕ 6 ವಲಸೆ ಕಾರ್ಮಿಕರು ಈ ಕೃತ್ಯ ನಡೆಸಿದ್ದಾರೆಂದು ತಿಳಿದ ಗ್ರಾಮಸ್ಥರು ಆರೋಪಿಗಳನ್ನು ತೀವ್ರವಾಗಿ ಥಳಿಸಿದ್ದಾರೆ. ಸದ್ಯ ಪ್ರಕರಣದ ಆರು ಮಂದಿ ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಬೆನ್ನಲ್ಲೇ ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಗ್ರಾಮಸ್ಥರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>