ಶ್ರೀಂಗ್ಲಾ ಅವರು ಇಂದು (ಗುರುವಾರ) ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮತ್ತು ಅಧ್ಯಕ್ಷ ವಿದ್ಯಾದೇವಿ ಭಂಡಾರಿ ಅವರನ್ನು ಭೇಟಿ ಮಾಡಲಿದ್ದಾರೆ. ಶುಕ್ರವಾರ ಕಠ್ಮಂಡುವಿನಲ್ಲಿ ಉಪನ್ಯಾಸ ನೀಡಲಿದ್ದು, 2015ರ ಭೂಕಂಪದ ಕೇಂದ್ರ ಬಿಂದುವಾಗಿದ್ದ ಗೂರ್ಖಾದಲ್ಲಿ ಭಾರತೀಯ ನೆರವಿನಡಿಯಲ್ಲಿ ನಿರ್ಮಿಸಲಾದ ಮೂರು ಶಾಲೆಗಳನ್ನು ಪರಿಶೀಲಿಸಲಿದ್ದಾರೆ ಎಂದು ನೇಪಾಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.