ಶ್ರೀಲಂಕಾದಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿಗೆ ಗೊಟಬಯ ಅವರೇ ಕಾರಣ ಎಂದು ಆರೋಪಿಸಿದ್ದ ಜನರು, ಜುಲೈ 9ರಂದು ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ನುಗ್ಗಿ ಪ್ರತಿಭಟಿಸಿದ್ದರು. ಪ್ರತಿಭಟನೆಗೆ ಬೆದರಿ ಮೊದಲು ಮಾಲ್ಡೀವ್ಸ್ಗೆ ತೆರಳಿದ್ದ ಗೊಟಬಯ ಅವರು, ಬಳಿಕ ಸಿಂಗಪುರಕ್ಕೆ ಪಲಾಯನ ಮಾಡಿದ್ದರು. ಸಿಂಗಪುರವು ಅವರಿಗೆ14 ದಿನಗಳ ತಾತ್ಕಾಲಿಕ ಭೇಟಿಗೆ ಪಾಸ್ ನೀಡಿದೆ.