<p><strong>ಕಾಬೂಲ್: </strong>ಕಳೆದ 20 ದಿನಗಳಿಂದ ಅಫ್ಗಾನಿಸ್ತಾನದ 15 ಪ್ರಾಂತ್ಯಗಳಲ್ಲಿ ಭಾರೀ ಹಿಮಪಾತದಿಂದಾಗಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಮತ್ತು 118 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಮಧ್ಯೆ, 2,000ಕ್ಕೂ ಹೆಚ್ಚು ಮನೆಗಳು ಸಹ ನಾಶವಾಗಿವೆ ಎಂದು ವಿಪತ್ತು ನಿರ್ವಹಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಜನರಿಗೆ ತುರ್ತು ನೆರವು ನೀಡಲಾಗುತ್ತಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.</p>.<p>ಭಾರೀ ಹಿಮಪಾತದಿಂದಾಗಿ ಹಲವಾರು ಹೆದ್ದಾರಿಗಳಲ್ಲಿ ಸಿಲುಕಿಕೊಂಡಿದ್ದ ನೂರಾರು ಜನರನ್ನು ರಕ್ಷಿಸಲಾಗಿದೆ ಮತ್ತು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಸಚಿವಾಲಯದ ಅಧಿಕಾರಿ ಇನಾಯತುಲ್ಲಾ ಶುಜಾ ಹೇಳಿದ್ದಾರೆ.</p>.<p>ಸಂತ್ರಸ್ತರಿಗೆ ತುರ್ತು ನೆರವನ್ನು ತಲುಪಿಸಲು ವಿವಿಧ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿರುವುದಾಗಿ ಶುಜಾ ಹೇಳಿದರು.</p>.<p>ರಕ್ತ ಹೆಪ್ಪುಗಟ್ಟುವ ಚಳಿಗಾಲ ಮತ್ತು ಭಾರೀ ಹಿಮಪಾತವು ಅಫ್ಗಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟಿಗೆ ಕಾರಣವಾಗಿದೆ.</p>.<p>ವಿಶ್ವಸಂಸ್ಥೆಯ ಅಂಕಿಅಂಶಗಳ ಆಧಾರದ ಮೇಲೆ, ಅಫ್ಗಾನ್ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಅಂದರೆ 2.4 ಕೋಟಿಗೂ ಹೆಚ್ಚು ಜನರಿಗೆ ಜೀವ ಉಳಿಸಿಕೊಳ್ಳಲು ಸಹಾಯದ ಅಗತ್ಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಬೂಲ್: </strong>ಕಳೆದ 20 ದಿನಗಳಿಂದ ಅಫ್ಗಾನಿಸ್ತಾನದ 15 ಪ್ರಾಂತ್ಯಗಳಲ್ಲಿ ಭಾರೀ ಹಿಮಪಾತದಿಂದಾಗಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಮತ್ತು 118 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಮಧ್ಯೆ, 2,000ಕ್ಕೂ ಹೆಚ್ಚು ಮನೆಗಳು ಸಹ ನಾಶವಾಗಿವೆ ಎಂದು ವಿಪತ್ತು ನಿರ್ವಹಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಜನರಿಗೆ ತುರ್ತು ನೆರವು ನೀಡಲಾಗುತ್ತಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.</p>.<p>ಭಾರೀ ಹಿಮಪಾತದಿಂದಾಗಿ ಹಲವಾರು ಹೆದ್ದಾರಿಗಳಲ್ಲಿ ಸಿಲುಕಿಕೊಂಡಿದ್ದ ನೂರಾರು ಜನರನ್ನು ರಕ್ಷಿಸಲಾಗಿದೆ ಮತ್ತು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಸಚಿವಾಲಯದ ಅಧಿಕಾರಿ ಇನಾಯತುಲ್ಲಾ ಶುಜಾ ಹೇಳಿದ್ದಾರೆ.</p>.<p>ಸಂತ್ರಸ್ತರಿಗೆ ತುರ್ತು ನೆರವನ್ನು ತಲುಪಿಸಲು ವಿವಿಧ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿರುವುದಾಗಿ ಶುಜಾ ಹೇಳಿದರು.</p>.<p>ರಕ್ತ ಹೆಪ್ಪುಗಟ್ಟುವ ಚಳಿಗಾಲ ಮತ್ತು ಭಾರೀ ಹಿಮಪಾತವು ಅಫ್ಗಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟಿಗೆ ಕಾರಣವಾಗಿದೆ.</p>.<p>ವಿಶ್ವಸಂಸ್ಥೆಯ ಅಂಕಿಅಂಶಗಳ ಆಧಾರದ ಮೇಲೆ, ಅಫ್ಗಾನ್ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಅಂದರೆ 2.4 ಕೋಟಿಗೂ ಹೆಚ್ಚು ಜನರಿಗೆ ಜೀವ ಉಳಿಸಿಕೊಳ್ಳಲು ಸಹಾಯದ ಅಗತ್ಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>