ಕಠ್ಮಂಡು: ನೇಪಾಳದ ದಕ್ಷಿಣ ಭಾಗದ ರೌತಹತ್ ಜಿಲ್ಲೆಯಲ್ಲಿ ಶನಿವಾರ ಕಾರೊಂದು ಕೆರೆಗೆ ಉರುಳಿಬಿದ್ದುದರಿಂದ ಅದರಲ್ಲಿದ್ದ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ.
ಮೃತರೆಲ್ಲರೂ ಬಿಹಾರ ರಾಜ್ಯದ 27ರಿಂದ 30 ವರ್ಷದೊಳಗಿನ ಯುವಕರು. ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ್ದರಿಂದಲೇ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.