<p><strong>ಗಾಜಾ ನಗರ, ಜೆರುಸಲೇಂ</strong>: ಗಾಜಾದಲ್ಲಿ ಬುಧವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ.</p>.<p>ಉಗ್ರರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಯಿತು. ಖಾನ್ ಯುನಿಸ್ ಮತ್ತು ರಫಾಹ್ ನಗರಗಳ ಸುತ್ತಮುತ್ತ 52 ಯುದ್ಧ ವಿಮಾನಗಳ ಮೂಲಕ 40 ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ. ಹಮಸ್ ಉಗ್ರರು ಬಳಸುತ್ತಿದ್ದ ಸುರಂಗಗಳ ಮೇಲೆಯೂ ದಾಳಿ ನಡೆಸಲಾಗಿದೆ.</p>.<p>ಧರ್ಮ ಪ್ರಚಾರಕರು ಸೇರಿದಂತೆ ಸುಮಾರು 40 ಮಂದಿ ವಾಸಿಸುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿ ನಡೆಸುವ ಮುನ್ನ ಎಚ್ಚರಿಕೆ ನೀಡಲು ಕ್ಷಿಪಣಿ ದಾಳಿ ನಡೆಸಲಾಗಿತ್ತು. ಹೀಗಾಗಿ, ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಇದೇ ವೇಳೆ, ಹಮಸ್ ಸಂಘಟನೆ ಸಹ ರಾಕೆಟ್ ದಾಳಿ ನಡೆಸಿದೆ. ದಾಳಿ–ಪ್ರತಿದಾಳಿಯಿಂದ ನಾಗರಿಕರು ತತ್ತರಿಸಿದ್ದಾರೆ.</p>.<p>‘ಇಲ್ಲಿ ಎಲ್ಲವೂ ನಾಶವಾಗುತ್ತಿದೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ. ದೇವರೇ ನಮಗೆ ನೆರವಾಗಬೇಕು’ ಎಂದು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಅಹ್ಮದ್ ಅಲ್–ಅಸ್ತಲ್ ಅಳಲು ತೋಡಿಕೊಂಡಿದ್ದಾರೆ.</p>.<p><strong>ಕದನ ವಿರಾಮಕ್ಕೆ ಯತ್ನ</strong></p>.<p>ಕದನ ವಿರಾಮ ಘೋಷಿಸುವಂತೆ ಅಂತರರಾಷ್ಟ್ರೀಯ ಸಮುದಾಯದ ಒತ್ತಡ ಹೆಚ್ಚುತ್ತಿದೆ. ಕದನವಿರಾಮ ಘೋಷಿಸಲು ತಾತ್ವಿಕವಾಗಿ ಇಸ್ರೇಲ್ ಮತ್ತು ಹಮಸ್ ಸಂಘಟನೆಗಳು ಒಪ್ಪಿಕೊಂಡಿವೆ ಎಂದು ಈಜಿಪ್ಟ್ ತಿಳಿಸಿದೆ.</p>.<p>ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಸಹ ಬುಧವಾರ ಸಂಘರ್ಷ ಅಂತ್ಯಗೊಳಿಸುವ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆ ಮಾತುಕತೆ ನಡೆಸಿದರು ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.</p>.<p>ಪ್ರಸ್ತುತ ಸಂಘರ್ಷವನ್ನು ಅಂತ್ಯಗೊಳಿಸಲು ಯಾವುದೇ ರೀತಿಯ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಇಸ್ರೇಲ್ ತಿಳಿಸಿದೆ.</p>.<p>‘ಹಮಾಸ್ ಸಂಘಟನೆಯನ್ನು ನಿಷ್ಕ್ರಿಯಗೊಳಿಸಲು ದಾಳಿ ಮುಂದುವರಿಸಲಾಗುವುದು. ಹಮಸ್ ವಿರುದ್ಧ ನಾವು ಜಯಗಳಿಸುತ್ತೇವೆ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.</p>.<p>ಸಂಕಷ್ಟಕ್ಕೆ ಸಿಲುಕಿದ ಮಕ್ಕಳು: ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಮಕ್ಕಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ ಹಲವು ಮಕ್ಕಳು ಅನಾಥರಾಗಿದ್ದಾರೆ.</p>.<p>ಮೇ 10ರಿಂದ ಇದುವರೆಗೆ ಸುಮಾರು 63 ಮಕ್ಕಳು ಸಾವಿಗೀಡಾಗಿರಬಹುದು ಎಂದು ಗಾಜಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಾಗರಿಕರ ಮೇಲೆ ದಾಳಿ ನಡೆಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಾ ನಗರ, ಜೆರುಸಲೇಂ</strong>: ಗಾಜಾದಲ್ಲಿ ಬುಧವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ.</p>.<p>ಉಗ್ರರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಯಿತು. ಖಾನ್ ಯುನಿಸ್ ಮತ್ತು ರಫಾಹ್ ನಗರಗಳ ಸುತ್ತಮುತ್ತ 52 ಯುದ್ಧ ವಿಮಾನಗಳ ಮೂಲಕ 40 ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ. ಹಮಸ್ ಉಗ್ರರು ಬಳಸುತ್ತಿದ್ದ ಸುರಂಗಗಳ ಮೇಲೆಯೂ ದಾಳಿ ನಡೆಸಲಾಗಿದೆ.</p>.<p>ಧರ್ಮ ಪ್ರಚಾರಕರು ಸೇರಿದಂತೆ ಸುಮಾರು 40 ಮಂದಿ ವಾಸಿಸುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿ ನಡೆಸುವ ಮುನ್ನ ಎಚ್ಚರಿಕೆ ನೀಡಲು ಕ್ಷಿಪಣಿ ದಾಳಿ ನಡೆಸಲಾಗಿತ್ತು. ಹೀಗಾಗಿ, ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಇದೇ ವೇಳೆ, ಹಮಸ್ ಸಂಘಟನೆ ಸಹ ರಾಕೆಟ್ ದಾಳಿ ನಡೆಸಿದೆ. ದಾಳಿ–ಪ್ರತಿದಾಳಿಯಿಂದ ನಾಗರಿಕರು ತತ್ತರಿಸಿದ್ದಾರೆ.</p>.<p>‘ಇಲ್ಲಿ ಎಲ್ಲವೂ ನಾಶವಾಗುತ್ತಿದೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ. ದೇವರೇ ನಮಗೆ ನೆರವಾಗಬೇಕು’ ಎಂದು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಅಹ್ಮದ್ ಅಲ್–ಅಸ್ತಲ್ ಅಳಲು ತೋಡಿಕೊಂಡಿದ್ದಾರೆ.</p>.<p><strong>ಕದನ ವಿರಾಮಕ್ಕೆ ಯತ್ನ</strong></p>.<p>ಕದನ ವಿರಾಮ ಘೋಷಿಸುವಂತೆ ಅಂತರರಾಷ್ಟ್ರೀಯ ಸಮುದಾಯದ ಒತ್ತಡ ಹೆಚ್ಚುತ್ತಿದೆ. ಕದನವಿರಾಮ ಘೋಷಿಸಲು ತಾತ್ವಿಕವಾಗಿ ಇಸ್ರೇಲ್ ಮತ್ತು ಹಮಸ್ ಸಂಘಟನೆಗಳು ಒಪ್ಪಿಕೊಂಡಿವೆ ಎಂದು ಈಜಿಪ್ಟ್ ತಿಳಿಸಿದೆ.</p>.<p>ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಸಹ ಬುಧವಾರ ಸಂಘರ್ಷ ಅಂತ್ಯಗೊಳಿಸುವ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆ ಮಾತುಕತೆ ನಡೆಸಿದರು ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.</p>.<p>ಪ್ರಸ್ತುತ ಸಂಘರ್ಷವನ್ನು ಅಂತ್ಯಗೊಳಿಸಲು ಯಾವುದೇ ರೀತಿಯ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಇಸ್ರೇಲ್ ತಿಳಿಸಿದೆ.</p>.<p>‘ಹಮಾಸ್ ಸಂಘಟನೆಯನ್ನು ನಿಷ್ಕ್ರಿಯಗೊಳಿಸಲು ದಾಳಿ ಮುಂದುವರಿಸಲಾಗುವುದು. ಹಮಸ್ ವಿರುದ್ಧ ನಾವು ಜಯಗಳಿಸುತ್ತೇವೆ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.</p>.<p>ಸಂಕಷ್ಟಕ್ಕೆ ಸಿಲುಕಿದ ಮಕ್ಕಳು: ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಮಕ್ಕಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ ಹಲವು ಮಕ್ಕಳು ಅನಾಥರಾಗಿದ್ದಾರೆ.</p>.<p>ಮೇ 10ರಿಂದ ಇದುವರೆಗೆ ಸುಮಾರು 63 ಮಕ್ಕಳು ಸಾವಿಗೀಡಾಗಿರಬಹುದು ಎಂದು ಗಾಜಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಾಗರಿಕರ ಮೇಲೆ ದಾಳಿ ನಡೆಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>