<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯ ಸಾಧಿಸಿದೆ.</p>.<p>ಈ ಹಿಂದೆ ಬಿಜೆಪಿ ವಶದಲ್ಲಿದ್ದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಗೆಲುವು ಸಾಧಿಸಿದ್ದಾರೆ.</p>.<p>ಬಿಜೆಪಿಯ ಖುಷಾಲ್ ಠಾಕೂರ್ ಅವರನ್ನು 7,490 ಮತಗಳ ಅಂತರದಿಂದ ಪ್ರತಿಭಾ ಸಿಂಗ್ ಸೋಲಿಸಿದ್ದಾರೆ.</p>.<p>ಚುನಾವಣಾ ಆಯೋಗವು ಪ್ರಕಟಿಸಿದ ಫಲಿತಾಂಶಗಳ ಪ್ರಕಾರ, ಕಾಂಗ್ರೆಸ್ ಪಕ್ಷವು ಫತೇಪುರ್ ಮತ್ತು ಅರ್ಕಿ ವಿಧಾನಸಭೆ ಕ್ಷೇತ್ರಗಳನ್ನು ಉಳಿಸಿಕೊಂಡಿದೆ. ಜುಬ್ಬಲ್- ಕೋಟ್ಖಾಯ್ ಕ್ಷೇತ್ರವನ್ನು ಬಿಜೆಪಿಯಿಂದ ಕಿತ್ತುಕೊಂಡಿದೆ.</p>.<p>ಜುಬ್ಬಲ್- ಕೋಟ್ಖಾಯ್ನಲ್ಲಿ ಠೇವಣಿ ಉಳಿಸಿಕೊಳ್ಳಲು ಬಿಜೆಪಿ ವಿಫಲವಾಗಿದೆ.</p>.<p>ಮಂಡಿಯಲ್ಲಿ ಪ್ರತಿಭಾ ಸಿಂಗ್ 3,69,565 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ 3,62,075 ಮತಗಳನ್ನು ಗಳಿಸುವಲ್ಲಿ ಸಫಲರಾಗಿದ್ದಾರೆ.</p>.<p>ಫತೇಪುರದಲ್ಲಿ ಕಾಂಗ್ರೆಸ್ನ ಭವಾನಿ ಸಿಂಗ್ ಪಠಾನಿಯಾ ಅವರು ಬಿಜೆಪಿಯ ಬಲದೇವ್ ಠಾಕೂರ್ ಅವರನ್ನು 5,789 ಮತಗಳ ಅಂತರದಿಂದ ಸೋಲಿಸಿದ್ದಾರೆ.</p>.<p>ಅರ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಂಜಯ್ ಅವರು ಬಿಜೆಪಿಯ ರತ್ತನ್ ಸಿಂಗ್ ಪಾಲ್ ಅವರನ್ನು 3,219 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.</p>.<p>ಜುಬ್ಬಲ್-ಕೋಟ್ಖಾಯ್ನಲ್ಲಿ ಕಾಂಗ್ರೆಸ್ನ ರೋಹಿತ್ ಠಾಕೂರ್ ಅವರು 6,293 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.</p>.<p>'ಬಿಜೆಪಿಯ ಸೋಲಿಗೆ ನೈತಿಕ ಹೊತ್ತು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಕುಲದೀಪ್ ಸಿಂಗ್ ರಾಥೋಡ್ ಒತ್ತಾಯಿಸಿದ್ದಾರೆ.</p>.<p>ಮತ್ತೊಂದೆಡೆ, ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯ ಸಾಧಿಸಿದೆ.</p>.<p>ಈ ಹಿಂದೆ ಬಿಜೆಪಿ ವಶದಲ್ಲಿದ್ದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಗೆಲುವು ಸಾಧಿಸಿದ್ದಾರೆ.</p>.<p>ಬಿಜೆಪಿಯ ಖುಷಾಲ್ ಠಾಕೂರ್ ಅವರನ್ನು 7,490 ಮತಗಳ ಅಂತರದಿಂದ ಪ್ರತಿಭಾ ಸಿಂಗ್ ಸೋಲಿಸಿದ್ದಾರೆ.</p>.<p>ಚುನಾವಣಾ ಆಯೋಗವು ಪ್ರಕಟಿಸಿದ ಫಲಿತಾಂಶಗಳ ಪ್ರಕಾರ, ಕಾಂಗ್ರೆಸ್ ಪಕ್ಷವು ಫತೇಪುರ್ ಮತ್ತು ಅರ್ಕಿ ವಿಧಾನಸಭೆ ಕ್ಷೇತ್ರಗಳನ್ನು ಉಳಿಸಿಕೊಂಡಿದೆ. ಜುಬ್ಬಲ್- ಕೋಟ್ಖಾಯ್ ಕ್ಷೇತ್ರವನ್ನು ಬಿಜೆಪಿಯಿಂದ ಕಿತ್ತುಕೊಂಡಿದೆ.</p>.<p>ಜುಬ್ಬಲ್- ಕೋಟ್ಖಾಯ್ನಲ್ಲಿ ಠೇವಣಿ ಉಳಿಸಿಕೊಳ್ಳಲು ಬಿಜೆಪಿ ವಿಫಲವಾಗಿದೆ.</p>.<p>ಮಂಡಿಯಲ್ಲಿ ಪ್ರತಿಭಾ ಸಿಂಗ್ 3,69,565 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ 3,62,075 ಮತಗಳನ್ನು ಗಳಿಸುವಲ್ಲಿ ಸಫಲರಾಗಿದ್ದಾರೆ.</p>.<p>ಫತೇಪುರದಲ್ಲಿ ಕಾಂಗ್ರೆಸ್ನ ಭವಾನಿ ಸಿಂಗ್ ಪಠಾನಿಯಾ ಅವರು ಬಿಜೆಪಿಯ ಬಲದೇವ್ ಠಾಕೂರ್ ಅವರನ್ನು 5,789 ಮತಗಳ ಅಂತರದಿಂದ ಸೋಲಿಸಿದ್ದಾರೆ.</p>.<p>ಅರ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಂಜಯ್ ಅವರು ಬಿಜೆಪಿಯ ರತ್ತನ್ ಸಿಂಗ್ ಪಾಲ್ ಅವರನ್ನು 3,219 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.</p>.<p>ಜುಬ್ಬಲ್-ಕೋಟ್ಖಾಯ್ನಲ್ಲಿ ಕಾಂಗ್ರೆಸ್ನ ರೋಹಿತ್ ಠಾಕೂರ್ ಅವರು 6,293 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.</p>.<p>'ಬಿಜೆಪಿಯ ಸೋಲಿಗೆ ನೈತಿಕ ಹೊತ್ತು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಕುಲದೀಪ್ ಸಿಂಗ್ ರಾಥೋಡ್ ಒತ್ತಾಯಿಸಿದ್ದಾರೆ.</p>.<p>ಮತ್ತೊಂದೆಡೆ, ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>