<p><strong>ಇಸ್ಲಾಮಾಬಾದ್: </strong>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಮಸೀದಿಯೊಂದರಿಂದ ಕುಡಿಯುವ ನೀರು ತಂದಿದ್ದಕ್ಕಾಗಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಬಡ ರೈತ ಕುಟುಂಬ ತೊಂದರೆಗೆ ಸಿಲುಕಿದೆ.</p>.<p>ಧಾರ್ಮಿಕ ಸ್ಥಳದ ಪಾವಿತ್ರ್ಯ ಹಾಳು ಮಾಡಲಾಗಿದೆ ಎಂದು ಆರೋಪಿಸಿ ಕೆಲವರು ಕುಟುಂಬ ಸದಸ್ಯರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡು ಕಿರುಕುಳ ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ.</p>.<p>ಕುಟುಂಬದ ಸದಸ್ಯರು ಸಮೀಪದ ಮಸೀದಿಯ ನೆಲ್ಲಿಯಿಂದ ನೀರು ತರಲು ಹೋದಾಗ ಸ್ಥಳೀಯರು ಅವರ ಮೇಲೆ ಹಲ್ಲೆ ಮಾಡಿರುವುದಾಗಿ ಅಲಾಂ ರಾಮ್ ಭೀಲ್ ಅವರು ಹೇಳಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.</p>.<p>ಹೊಲದಲ್ಲಿ ಕೆಲಸ ಮುಗಿಸಿ ಬರುವಾಗಲೂ ಕುಟುಂಬ ಸದಸ್ಯರನ್ನು ಅಡ್ಡಗಟ್ಟಿದ ಕೆಲವರು ಅವರನ್ನು ತಮ್ಮ ಮನೆ ಬಳಿ ಕರೆದುಕೊಂಡು ಹೋಗಿ ಒತ್ತೆಯಾಗಿರಿಸಿಕೊಂಡು ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.</p>.<p>ಹಲ್ಲೆ ಮಾಡಿದವರು ಆಡಳಿತಾರೂಢ ಪಿಟಿಐ ಪಕ್ಷಕ್ಕೆ ಸೇರಿದ್ದರಿಂದ ಅವರ ವಿರುದ್ಧ ಪೊಲೀಸರೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಭೀಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್: </strong>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಮಸೀದಿಯೊಂದರಿಂದ ಕುಡಿಯುವ ನೀರು ತಂದಿದ್ದಕ್ಕಾಗಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಬಡ ರೈತ ಕುಟುಂಬ ತೊಂದರೆಗೆ ಸಿಲುಕಿದೆ.</p>.<p>ಧಾರ್ಮಿಕ ಸ್ಥಳದ ಪಾವಿತ್ರ್ಯ ಹಾಳು ಮಾಡಲಾಗಿದೆ ಎಂದು ಆರೋಪಿಸಿ ಕೆಲವರು ಕುಟುಂಬ ಸದಸ್ಯರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡು ಕಿರುಕುಳ ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ.</p>.<p>ಕುಟುಂಬದ ಸದಸ್ಯರು ಸಮೀಪದ ಮಸೀದಿಯ ನೆಲ್ಲಿಯಿಂದ ನೀರು ತರಲು ಹೋದಾಗ ಸ್ಥಳೀಯರು ಅವರ ಮೇಲೆ ಹಲ್ಲೆ ಮಾಡಿರುವುದಾಗಿ ಅಲಾಂ ರಾಮ್ ಭೀಲ್ ಅವರು ಹೇಳಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.</p>.<p>ಹೊಲದಲ್ಲಿ ಕೆಲಸ ಮುಗಿಸಿ ಬರುವಾಗಲೂ ಕುಟುಂಬ ಸದಸ್ಯರನ್ನು ಅಡ್ಡಗಟ್ಟಿದ ಕೆಲವರು ಅವರನ್ನು ತಮ್ಮ ಮನೆ ಬಳಿ ಕರೆದುಕೊಂಡು ಹೋಗಿ ಒತ್ತೆಯಾಗಿರಿಸಿಕೊಂಡು ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.</p>.<p>ಹಲ್ಲೆ ಮಾಡಿದವರು ಆಡಳಿತಾರೂಢ ಪಿಟಿಐ ಪಕ್ಷಕ್ಕೆ ಸೇರಿದ್ದರಿಂದ ಅವರ ವಿರುದ್ಧ ಪೊಲೀಸರೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಭೀಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>