<p><strong>ಬಲೂಚಿಸ್ತಾನ</strong>: ಪಾಕಿಸ್ತಾನದ ಖುಜ್ದಾರ್ ಜಿಲ್ಲೆಯ ವಾಧ್ ಮಾರುಕಟ್ಟೆಯಲ್ಲಿ ಉದ್ಯಮಿ ಅಶೋಕ್ ಕುಮಾರ್ ಎಂಬುವವರನ್ನು ಕಳೆದವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬಳಿಕ ಇದೀಗ ಬಲೂಚಿಸ್ತಾನ ಪ್ರಾಂತ್ಯದಲ್ಲಿರುವ ಹಿಂದೂ ವರ್ತಕರು ಮತ್ತು ಅಂಗಡಿ ಮಾಲೀಕರಿಗೆ ಅಪರಿಚಿತ ವ್ಯಕ್ತಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.</p>.<p>ಮಾರುಕಟ್ಟೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೂಚನಾ ಫಲಕಗಳಲ್ಲಿ ಅಪರಿಚಿತರು ಶನಿವಾರ ಕರಪತ್ರಗಳನ್ನು ಅಂಟಿಸಿದ್ದಾರೆ. ಕರಪತ್ರದಲ್ಲಿ, ʼಮಹಿಳಾ ಗ್ರಾಹಕರು ತಮ್ಮ ಅಂಗಡಿಗಳಿಗೆ ಪ್ರವೇಶಿಸಲು ಅವಕಾಶ ನೀಡಿದರೆ, ಸ್ಥಳೀಯ ಹಿಂದೂ ವ್ಯಾಪಾರಿಗಳುಗಂಭೀರ ಪರಿಣಾಮಗಳನ್ನು ಎದುರಿಸಲಿದ್ದಾರೆʼ ಎಂದು ಬೆದರಿಕೆಯೊಡ್ಡಲಾಗಿದೆ ಎಂದುಪಾಕಿಸ್ತಾನದ ಕೆಲ ಪ್ರತಿಕೆಗಳಲ್ಲಿ ವರದಿಯಾಗಿದೆ.</p>.<p>ಅಶೋಕ್ ಕುಮಾರ್ ಹತ್ಯೆಯ ವಿರುದ್ಧಪಾಕಿಸ್ತಾನದ ವರ್ತಕರು ಪ್ರತಿಭಟನೆಗಳನ್ನು ನಡೆಸಿದ್ದರು.ಅದಾದನಂತರ ಪಟ್ಟಣದಲ್ಲಿ ಕರಪತ್ರಗಳನ್ನು ಅಂಟಿಸಲಾಗಿದೆ. ಇದನ್ನು ವಿರೋಧಿಸಿ ಹಾಗೂತನಿಖೆಯನ್ನು ಚುರುಕುಗೊಳಿಸುವಂತೆ ಆಗ್ರಹಿಸಿ ವರ್ತಕರ ಸಂಘದ ಸದಸ್ಯರು ಹಾಗೂ ಬಲೂಚಿಸ್ತಾನ ರಾಷ್ಟ್ರೀಯ ಪಕ್ಷ-ಮೆಂಗಲ್ (ಬಿಎನ್ಪಿ-ಎಂ) ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಶನಿವಾರವೇ ಪ್ರತಿಭಟನೆ ನಡೆಸಿದ್ದಾರೆ.</p>.<p>ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಹಿಂದೂಗಳು ಸೇರಿದಂತೆಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ, ತಾರತಮ್ಯ ಮತ್ತು ಕಿರುಕುಳ ನಿರಂತರವಾಗಿ ಮುಂದುವರಿದಿದೆ. ಅಲ್ಪಸಂಖ್ಯಾತ ಸಮುದಾಯದವರ ಧಾರ್ಮಿಕ ಕೇಂದ್ರಗಳ ಮೇಲೆ ಆಗಾಗ್ಗೆ ದಾಳಿ ಆಗುತ್ತಿರುವುದರಿಂದ ಅವರ ಧಾರ್ಮಿಕ ಸ್ವಾತಂತ್ಯ್ರಕ್ಕೆ ಧಕ್ಕೆಯಾದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲೂಚಿಸ್ತಾನ</strong>: ಪಾಕಿಸ್ತಾನದ ಖುಜ್ದಾರ್ ಜಿಲ್ಲೆಯ ವಾಧ್ ಮಾರುಕಟ್ಟೆಯಲ್ಲಿ ಉದ್ಯಮಿ ಅಶೋಕ್ ಕುಮಾರ್ ಎಂಬುವವರನ್ನು ಕಳೆದವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬಳಿಕ ಇದೀಗ ಬಲೂಚಿಸ್ತಾನ ಪ್ರಾಂತ್ಯದಲ್ಲಿರುವ ಹಿಂದೂ ವರ್ತಕರು ಮತ್ತು ಅಂಗಡಿ ಮಾಲೀಕರಿಗೆ ಅಪರಿಚಿತ ವ್ಯಕ್ತಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.</p>.<p>ಮಾರುಕಟ್ಟೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೂಚನಾ ಫಲಕಗಳಲ್ಲಿ ಅಪರಿಚಿತರು ಶನಿವಾರ ಕರಪತ್ರಗಳನ್ನು ಅಂಟಿಸಿದ್ದಾರೆ. ಕರಪತ್ರದಲ್ಲಿ, ʼಮಹಿಳಾ ಗ್ರಾಹಕರು ತಮ್ಮ ಅಂಗಡಿಗಳಿಗೆ ಪ್ರವೇಶಿಸಲು ಅವಕಾಶ ನೀಡಿದರೆ, ಸ್ಥಳೀಯ ಹಿಂದೂ ವ್ಯಾಪಾರಿಗಳುಗಂಭೀರ ಪರಿಣಾಮಗಳನ್ನು ಎದುರಿಸಲಿದ್ದಾರೆʼ ಎಂದು ಬೆದರಿಕೆಯೊಡ್ಡಲಾಗಿದೆ ಎಂದುಪಾಕಿಸ್ತಾನದ ಕೆಲ ಪ್ರತಿಕೆಗಳಲ್ಲಿ ವರದಿಯಾಗಿದೆ.</p>.<p>ಅಶೋಕ್ ಕುಮಾರ್ ಹತ್ಯೆಯ ವಿರುದ್ಧಪಾಕಿಸ್ತಾನದ ವರ್ತಕರು ಪ್ರತಿಭಟನೆಗಳನ್ನು ನಡೆಸಿದ್ದರು.ಅದಾದನಂತರ ಪಟ್ಟಣದಲ್ಲಿ ಕರಪತ್ರಗಳನ್ನು ಅಂಟಿಸಲಾಗಿದೆ. ಇದನ್ನು ವಿರೋಧಿಸಿ ಹಾಗೂತನಿಖೆಯನ್ನು ಚುರುಕುಗೊಳಿಸುವಂತೆ ಆಗ್ರಹಿಸಿ ವರ್ತಕರ ಸಂಘದ ಸದಸ್ಯರು ಹಾಗೂ ಬಲೂಚಿಸ್ತಾನ ರಾಷ್ಟ್ರೀಯ ಪಕ್ಷ-ಮೆಂಗಲ್ (ಬಿಎನ್ಪಿ-ಎಂ) ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಶನಿವಾರವೇ ಪ್ರತಿಭಟನೆ ನಡೆಸಿದ್ದಾರೆ.</p>.<p>ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಹಿಂದೂಗಳು ಸೇರಿದಂತೆಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ, ತಾರತಮ್ಯ ಮತ್ತು ಕಿರುಕುಳ ನಿರಂತರವಾಗಿ ಮುಂದುವರಿದಿದೆ. ಅಲ್ಪಸಂಖ್ಯಾತ ಸಮುದಾಯದವರ ಧಾರ್ಮಿಕ ಕೇಂದ್ರಗಳ ಮೇಲೆ ಆಗಾಗ್ಗೆ ದಾಳಿ ಆಗುತ್ತಿರುವುದರಿಂದ ಅವರ ಧಾರ್ಮಿಕ ಸ್ವಾತಂತ್ಯ್ರಕ್ಕೆ ಧಕ್ಕೆಯಾದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>