<p><strong>ವಿಶ್ವಸಂಸ್ಥೆ</strong>: ’ಸ್ವತಂತ್ರವಾದ ವಿದೇಶಾಂಗ ನೀತಿ ಹೊಂದಿರುವ ಭಾರತದಂತಹ ಅತಿ ದೊಡ್ಡ ರಾಷ್ಟ್ರವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಸ್ವಾಗತಿಸಲಾಗುತ್ತಿದೆ. ಈ ಮೂಲಕ ಮಂಡಳಿಯಲ್ಲೂ ಸಮತೋಲನ ಕಾಪಾಡಲಾಗಿದೆ. ಇದು ಅಗತ್ಯವಿತ್ತು’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿಹೇಳಿದ್ದಾರೆ.</p>.<p>ಸರದಿ ಪ್ರಕಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಭಾರತ ಆಗಸ್ಟ್ 1ರಂದು ವಹಿಸಿಕೊಳ್ಳಲಿದೆ. 15 ರಾಷ್ಟ್ರಗಳ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ, ಕಾಯಂ ಸದಸ್ಯತ್ವವಲ್ಲದ ರಾಷ್ಟ್ರವಾಗಿ 2021–22ರ ಅವಧಿಯಲ್ಲಿ ಭಾರತ ಮೊದಲ ಬಾರಿ ಈ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ.</p>.<p>ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಹಿನ್ನೆಲೆಯಲ್ಲಿ ತಿರುಮೂರ್ತಿ ಅವರು ಭಾರತದ ನಿಲುವುಗಳು ಮತ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರಗಳಾದ ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಮತ್ತು ಅಮೆರಿಕ ಹೊಂದಿರುವ ವಿಟೊ ಅಧಿಕಾರವನ್ನು ಪ್ರಸ್ತಾಪಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.</p>.<p>‘ಮಹತ್ವದ ಸನ್ನಿವೇಶ ಮತ್ತು ಸಂದರ್ಭದಲ್ಲಿ ಭಾರತ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿದೆ. ಕೋವಿಡ್ ಸಾಂಕ್ರಾಮಿಕ ಕಾಯಿಲೆಯ ಸಂಕಷ್ಟದ ಜತೆಗೆ ಹಲವು ಬಿಕ್ಕಟ್ಟುಗಳನ್ನು ಎದುರಿಸಲಾಗುತ್ತಿದೆ. ಒಗ್ಗಟ್ಟಿನಿಂದ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯವಿದೆ’ ಎಂದು ಅವರು ತಿರುಮೂರ್ತಿ ಹೇಳಿದ್ದಾರೆ.</p>.<p>‘ಭಾರತ ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದರಿಂದ ಹಿಂದೆ ಸರಿದಿಲ್ಲ ಮತ್ತು ಭಯಪಟ್ಟಿಲ್ಲ. ಭಾರತ ಸದಾ ತನ್ನ ನಿಲುವುಗಳನ್ನು ನಿರ್ಭೀತಿಯಿಂದ ವ್ಯಕ್ತಪಡಿಸಿದೆ’ ಎಂದು ಹೇಳಿದ್ದಾರೆ.</p>.<p>ಮ್ಯಾನ್ಮಾರ್ ಮತ್ತು ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳನ್ನು ಪ್ರಸ್ತಾಪಿಸಿದ ಅವರು, ’ಈ ದೇಶಗಳಲ್ಲಿ ಪದೇ ಪದೇ ಸಂಭವಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಂಡಳಿಯಲ್ಲಿ ಚರ್ಚೆಯಾಗುವಂತೆ ಭಾರತ ಒತ್ತಾಯಿಸಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ’ಸ್ವತಂತ್ರವಾದ ವಿದೇಶಾಂಗ ನೀತಿ ಹೊಂದಿರುವ ಭಾರತದಂತಹ ಅತಿ ದೊಡ್ಡ ರಾಷ್ಟ್ರವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಸ್ವಾಗತಿಸಲಾಗುತ್ತಿದೆ. ಈ ಮೂಲಕ ಮಂಡಳಿಯಲ್ಲೂ ಸಮತೋಲನ ಕಾಪಾಡಲಾಗಿದೆ. ಇದು ಅಗತ್ಯವಿತ್ತು’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿಹೇಳಿದ್ದಾರೆ.</p>.<p>ಸರದಿ ಪ್ರಕಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಭಾರತ ಆಗಸ್ಟ್ 1ರಂದು ವಹಿಸಿಕೊಳ್ಳಲಿದೆ. 15 ರಾಷ್ಟ್ರಗಳ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ, ಕಾಯಂ ಸದಸ್ಯತ್ವವಲ್ಲದ ರಾಷ್ಟ್ರವಾಗಿ 2021–22ರ ಅವಧಿಯಲ್ಲಿ ಭಾರತ ಮೊದಲ ಬಾರಿ ಈ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ.</p>.<p>ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಹಿನ್ನೆಲೆಯಲ್ಲಿ ತಿರುಮೂರ್ತಿ ಅವರು ಭಾರತದ ನಿಲುವುಗಳು ಮತ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರಗಳಾದ ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಮತ್ತು ಅಮೆರಿಕ ಹೊಂದಿರುವ ವಿಟೊ ಅಧಿಕಾರವನ್ನು ಪ್ರಸ್ತಾಪಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.</p>.<p>‘ಮಹತ್ವದ ಸನ್ನಿವೇಶ ಮತ್ತು ಸಂದರ್ಭದಲ್ಲಿ ಭಾರತ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿದೆ. ಕೋವಿಡ್ ಸಾಂಕ್ರಾಮಿಕ ಕಾಯಿಲೆಯ ಸಂಕಷ್ಟದ ಜತೆಗೆ ಹಲವು ಬಿಕ್ಕಟ್ಟುಗಳನ್ನು ಎದುರಿಸಲಾಗುತ್ತಿದೆ. ಒಗ್ಗಟ್ಟಿನಿಂದ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯವಿದೆ’ ಎಂದು ಅವರು ತಿರುಮೂರ್ತಿ ಹೇಳಿದ್ದಾರೆ.</p>.<p>‘ಭಾರತ ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದರಿಂದ ಹಿಂದೆ ಸರಿದಿಲ್ಲ ಮತ್ತು ಭಯಪಟ್ಟಿಲ್ಲ. ಭಾರತ ಸದಾ ತನ್ನ ನಿಲುವುಗಳನ್ನು ನಿರ್ಭೀತಿಯಿಂದ ವ್ಯಕ್ತಪಡಿಸಿದೆ’ ಎಂದು ಹೇಳಿದ್ದಾರೆ.</p>.<p>ಮ್ಯಾನ್ಮಾರ್ ಮತ್ತು ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳನ್ನು ಪ್ರಸ್ತಾಪಿಸಿದ ಅವರು, ’ಈ ದೇಶಗಳಲ್ಲಿ ಪದೇ ಪದೇ ಸಂಭವಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಂಡಳಿಯಲ್ಲಿ ಚರ್ಚೆಯಾಗುವಂತೆ ಭಾರತ ಒತ್ತಾಯಿಸಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>