<p><strong>ಕೊಲಂಬೊ:</strong>ಸಂಪೂರ್ಣ ಸಾವಯವ ಕೃಷಿ ಸಾಧಿಸುವ ನಿಟ್ಟಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆಯನ್ನು ನಿಷೇಧಿಸುವ ಶ್ರೀಲಂಕಾ ಸರ್ಕಾರದ ಹಠಾತ್ ನಿರ್ಧಾರದಿಂದ ಅಲ್ಲಿ ರಸಗೊಬ್ಬರಕ್ಕಾಗಿ ರೈತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಭಾರತವು ವಾಯುಪಡೆಯ ಎರಡು ವಿಮಾನಗಳ ಮೂಲಕ ಶ್ರೀಲಂಕಾಕ್ಕೆ ನ್ಯಾನೋ ಸಾರಜನಕ ಗೊಬ್ಬರವನ್ನು ರವಾನಿಸಿದೆ.</p>.<p>‘ಶ್ರೀಲಂಕಾ ಸರ್ಕಾರದ ಕೋರಿಕೆಯ ಮೇರೆಗೆ ಎರಡು ಐಎಎಫ್ ಸಿ-17 ಗ್ಲೋಬ್ಮಾಸ್ಟರ್ ವಿಮಾನಗಳು 1,00,000 ಕೆಜಿ ನ್ಯಾನೊ ಸಾರಜನಕದೊಂದಿಗೆ ಬಂಡಾರನಾಯಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದವು. ಈ ಬೆಳವಣಿಗೆಯು, ಶ್ರೀಲಂಕಾ ಸರ್ಕಾರದ ಸಾವಯವ ಕೃಷಿ ಉಪಕ್ರಮವನ್ನು ಬೆಂಬಲಿಸುತ್ತದೆ. ಅಲ್ಲದೆ, ಶ್ರೀಲಂಕಾ ರೈತರಿಗೆ ನ್ಯಾನೋ ಸಾರಜನಕ ಲಭ್ಯತೆಯನ್ನು ತ್ವರಿತಗೊಳಿಸುತ್ತದೆ’ ಎಂದು ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ.</p>.<p>ದ್ವೀಪ ರಾಷ್ಟ್ರದಲ್ಲಿ ಸೆಪ್ಟೆಂಬರ್/ಅಕ್ಟೋಬರ್ನಲ್ಲಿ ಆರಂಭವಾಗುವ ಮನ್ಸೂನ್ ಆಥವಾ ಮಹಾ ಋತುವಿನಲ್ಲಿ ಭತ್ತವನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ. ಭತ್ತದ ಕೃಷಿಗೆ ಗೊಬ್ಬರ ಒದಗಿಸಬೇಕೆಂದು ಒತ್ತಾಯಿಸಿ ಜೂನ್ನಿಂದ ಸಾವಿರಾರು ರೈತರು ಪ್ರತಿದಿನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.</p>.<p>ಪ್ರತಿ ವರ್ಷ ಸಾವಿರಾರು ಸಾವುಗಳಿಗೆ ಕಾರಣವಾಗುವ ನಿಗೂಢ ಮೂತ್ರಪಿಂಡ ಕಾಯಿಲೆ ಸೇರಿದಂತೆ ಕೃಷಿ ರಾಸಾಯನಿಕವು ತೀವ್ರ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂಬ ಕಾರಣ ನೀಡಿ ರಾಸಾಯನಿಕ ಗೊಬ್ಬರದ ಆಮದನ್ನು ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಏಪ್ರಿಲ್ನಲ್ಲಿ ಹಠಾತ್ ನಿಷೇಧಿಸಿ ನಿರ್ಧಾರ ಕೈಗೊಂಡಿದ್ದರು.</p>.<p>ಆದರೆ, ಹಣಕಾಸು ಸಮಸ್ಯೆ, ವಿದೇಶಿ ವಿನಿಮಯ ಕುಸಿತದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ರಸಗೊಬ್ಬರ ನಿಷೇಧಕ್ಕೆ ನಿಜವಾದ ಕಾರಣ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ರಸಗೊಬ್ಬರ ಆಮದಿಗಾಗಿ ಶ್ರೀಲಂಕಾ ವಾರ್ಷಿಕ 400 ಮಿಲಿಯನ್ ಡಾಲರ್ (₹2,980 ಕೋಟಿ) ಗಳನ್ನು ವ್ಯಯಿಸುತ್ತಿದೆ.</p>.<p>2019 ರಲ್ಲಿ ಈಸ್ಟರ್ ಹಬ್ಬದಂದು ಶ್ರೀಲಂಕಾದ ಚರ್ಚ್ನಲ್ಲಿ ನಡೆದ ಭಯೋತ್ಪಾದನಾ ದಾಳಿ, ಕೋವಿಡ್ -19 ಕಾರಾಣದಿಂದಾಗಿ ಶ್ರೀಲಂಕಾ ತನ್ನ ಇತಿಹಾಸದಲ್ಲಿ ಅತಿದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಭಯೋತ್ಪಾದಕ ದಾಳಿ ಮತ್ತು ಸಾಂಕ್ರಾಮಿಕ ರೋಗವು ಪ್ರವಾಸೋದ್ಯಮದಂಥ ಪ್ರಮುಖ ವಿದೇಶಿ ಆದಾಯಕ್ಕೆ ಹೊಡೆತ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong>ಸಂಪೂರ್ಣ ಸಾವಯವ ಕೃಷಿ ಸಾಧಿಸುವ ನಿಟ್ಟಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆಯನ್ನು ನಿಷೇಧಿಸುವ ಶ್ರೀಲಂಕಾ ಸರ್ಕಾರದ ಹಠಾತ್ ನಿರ್ಧಾರದಿಂದ ಅಲ್ಲಿ ರಸಗೊಬ್ಬರಕ್ಕಾಗಿ ರೈತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಭಾರತವು ವಾಯುಪಡೆಯ ಎರಡು ವಿಮಾನಗಳ ಮೂಲಕ ಶ್ರೀಲಂಕಾಕ್ಕೆ ನ್ಯಾನೋ ಸಾರಜನಕ ಗೊಬ್ಬರವನ್ನು ರವಾನಿಸಿದೆ.</p>.<p>‘ಶ್ರೀಲಂಕಾ ಸರ್ಕಾರದ ಕೋರಿಕೆಯ ಮೇರೆಗೆ ಎರಡು ಐಎಎಫ್ ಸಿ-17 ಗ್ಲೋಬ್ಮಾಸ್ಟರ್ ವಿಮಾನಗಳು 1,00,000 ಕೆಜಿ ನ್ಯಾನೊ ಸಾರಜನಕದೊಂದಿಗೆ ಬಂಡಾರನಾಯಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದವು. ಈ ಬೆಳವಣಿಗೆಯು, ಶ್ರೀಲಂಕಾ ಸರ್ಕಾರದ ಸಾವಯವ ಕೃಷಿ ಉಪಕ್ರಮವನ್ನು ಬೆಂಬಲಿಸುತ್ತದೆ. ಅಲ್ಲದೆ, ಶ್ರೀಲಂಕಾ ರೈತರಿಗೆ ನ್ಯಾನೋ ಸಾರಜನಕ ಲಭ್ಯತೆಯನ್ನು ತ್ವರಿತಗೊಳಿಸುತ್ತದೆ’ ಎಂದು ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ.</p>.<p>ದ್ವೀಪ ರಾಷ್ಟ್ರದಲ್ಲಿ ಸೆಪ್ಟೆಂಬರ್/ಅಕ್ಟೋಬರ್ನಲ್ಲಿ ಆರಂಭವಾಗುವ ಮನ್ಸೂನ್ ಆಥವಾ ಮಹಾ ಋತುವಿನಲ್ಲಿ ಭತ್ತವನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ. ಭತ್ತದ ಕೃಷಿಗೆ ಗೊಬ್ಬರ ಒದಗಿಸಬೇಕೆಂದು ಒತ್ತಾಯಿಸಿ ಜೂನ್ನಿಂದ ಸಾವಿರಾರು ರೈತರು ಪ್ರತಿದಿನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.</p>.<p>ಪ್ರತಿ ವರ್ಷ ಸಾವಿರಾರು ಸಾವುಗಳಿಗೆ ಕಾರಣವಾಗುವ ನಿಗೂಢ ಮೂತ್ರಪಿಂಡ ಕಾಯಿಲೆ ಸೇರಿದಂತೆ ಕೃಷಿ ರಾಸಾಯನಿಕವು ತೀವ್ರ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂಬ ಕಾರಣ ನೀಡಿ ರಾಸಾಯನಿಕ ಗೊಬ್ಬರದ ಆಮದನ್ನು ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಏಪ್ರಿಲ್ನಲ್ಲಿ ಹಠಾತ್ ನಿಷೇಧಿಸಿ ನಿರ್ಧಾರ ಕೈಗೊಂಡಿದ್ದರು.</p>.<p>ಆದರೆ, ಹಣಕಾಸು ಸಮಸ್ಯೆ, ವಿದೇಶಿ ವಿನಿಮಯ ಕುಸಿತದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ರಸಗೊಬ್ಬರ ನಿಷೇಧಕ್ಕೆ ನಿಜವಾದ ಕಾರಣ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ರಸಗೊಬ್ಬರ ಆಮದಿಗಾಗಿ ಶ್ರೀಲಂಕಾ ವಾರ್ಷಿಕ 400 ಮಿಲಿಯನ್ ಡಾಲರ್ (₹2,980 ಕೋಟಿ) ಗಳನ್ನು ವ್ಯಯಿಸುತ್ತಿದೆ.</p>.<p>2019 ರಲ್ಲಿ ಈಸ್ಟರ್ ಹಬ್ಬದಂದು ಶ್ರೀಲಂಕಾದ ಚರ್ಚ್ನಲ್ಲಿ ನಡೆದ ಭಯೋತ್ಪಾದನಾ ದಾಳಿ, ಕೋವಿಡ್ -19 ಕಾರಾಣದಿಂದಾಗಿ ಶ್ರೀಲಂಕಾ ತನ್ನ ಇತಿಹಾಸದಲ್ಲಿ ಅತಿದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಭಯೋತ್ಪಾದಕ ದಾಳಿ ಮತ್ತು ಸಾಂಕ್ರಾಮಿಕ ರೋಗವು ಪ್ರವಾಸೋದ್ಯಮದಂಥ ಪ್ರಮುಖ ವಿದೇಶಿ ಆದಾಯಕ್ಕೆ ಹೊಡೆತ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>