<p><strong>ವಾಷಿಂಗ್ಟನ್: </strong>ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಅಫ್ಗನಿಸ್ತಾನದಲ್ಲಿರುವ ಮಹಿಳೆಯರು, ಮಕ್ಕಳು ಮತ್ತು ಅಲ್ಪಸಂಖ್ಯಾತರ ರಕ್ಷಣೆ ಸೇರಿದಂತೆ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ಕುರಿತ ಪ್ರಮುಖ ನಿರ್ಣಯವೊಂದನ್ನು ಅಂಗೀಕರಿಸಲಾಯಿತು.</p>.<p>ಈ ನಿರ್ಣಯವು, ‘ರಾಜಕೀಯ ಚರ್ಚೆ ಸಾಧ್ಯವಿರುವ, ಮಹಿಳೆಯರ ಒಳಗೊಳ್ಳುವಿಕೆಹಾಗೂಸಮಾನತೆಯನ್ನು ಸಾರುವಜೊತೆಗೆಅಫ್ಗಾನಿಸ್ತಾನಜನರಆಶೋತ್ತರಗಳಿಗೆ ಸ್ಪಂದಿಸುವುದಕ್ಕೆ ಎಲ್ಲ ಸದಸ್ಯ ರಾಷ್ಟ್ರಗಳು ಬೆಂಬಲ ಸೂಚಿಸುತ್ತವೆ. ಇದುಕಳೆದ20ವರ್ಷಗಳಅವಧಿಯಲ್ಲಿಅಫ್ಗಾನಿಸ್ತಾನ ಗಳಿಸಿರುವುದನ್ನು ಉಳಿಸಿಕೊಂಡು, ನ್ಯಾಯಬದ್ಧವಾಗಿರಾಷ್ಟ್ರ ನಿರ್ಮಾಣಕ್ಕೂ ಇದು ನೆರವಾಗಲಿದೆ.</p>.<p>ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೃಂಗ್ಲಾ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಅಫ್ಗನ್ ವಿಚಾರವಾಗಿ ಕೈಗೊಂಡ ನಿರ್ಣಯದ ಬಗ್ಗೆ ವಿವರಿಸಿದರು.</p>.<p>ಅಫ್ಗಾನಿಸ್ತಾನದಲ್ಲಿರುವ ಸಿಖ್ ಮತ್ತು ಹಿಂದೂಗಳಂತಹ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತ ಯಾವಾಗಲೂ ಬೆಂಬಲ ನೀಡುತ್ತಿದ್ದು, ಇತ್ತೀಚೆಗೆ ಅಫ್ಗನ್ ಪ್ರಜೆಗಳನ್ನು ಭಾರತಕ್ಕೆ ಸ್ಥಳಾಂತರಿಸಿರುವುದೂ ಅದರ ಒಂದು ಭಾಗ‘ ಎಂದು ಅವರು ಹೇಳಿದರು.</p>.<p>ಈಗ ಮಂಡಳಿ ಕೈಗೊಂಡಿರುವ ನಿರ್ಣಯವು ‘ಕಾಬೂಲ್ ವಿಮಾನ ನಿಲ್ದಾಣ ಹಾಗೂ ಹೊರ ಭಾಗದಲ್ಲಿರುವ ಪ್ರಯಾಣಿಕರಿಗೆ ಸುರಕ್ಷಿತ ವಲಯವನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಸೂಚಿಸುತ್ತದೆ‘ ಎಂದು ಶೃಂಗ್ಲಾ ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಅಫ್ಗನಿಸ್ತಾನದಲ್ಲಿರುವ ಮಹಿಳೆಯರು, ಮಕ್ಕಳು ಮತ್ತು ಅಲ್ಪಸಂಖ್ಯಾತರ ರಕ್ಷಣೆ ಸೇರಿದಂತೆ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ಕುರಿತ ಪ್ರಮುಖ ನಿರ್ಣಯವೊಂದನ್ನು ಅಂಗೀಕರಿಸಲಾಯಿತು.</p>.<p>ಈ ನಿರ್ಣಯವು, ‘ರಾಜಕೀಯ ಚರ್ಚೆ ಸಾಧ್ಯವಿರುವ, ಮಹಿಳೆಯರ ಒಳಗೊಳ್ಳುವಿಕೆಹಾಗೂಸಮಾನತೆಯನ್ನು ಸಾರುವಜೊತೆಗೆಅಫ್ಗಾನಿಸ್ತಾನಜನರಆಶೋತ್ತರಗಳಿಗೆ ಸ್ಪಂದಿಸುವುದಕ್ಕೆ ಎಲ್ಲ ಸದಸ್ಯ ರಾಷ್ಟ್ರಗಳು ಬೆಂಬಲ ಸೂಚಿಸುತ್ತವೆ. ಇದುಕಳೆದ20ವರ್ಷಗಳಅವಧಿಯಲ್ಲಿಅಫ್ಗಾನಿಸ್ತಾನ ಗಳಿಸಿರುವುದನ್ನು ಉಳಿಸಿಕೊಂಡು, ನ್ಯಾಯಬದ್ಧವಾಗಿರಾಷ್ಟ್ರ ನಿರ್ಮಾಣಕ್ಕೂ ಇದು ನೆರವಾಗಲಿದೆ.</p>.<p>ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೃಂಗ್ಲಾ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಅಫ್ಗನ್ ವಿಚಾರವಾಗಿ ಕೈಗೊಂಡ ನಿರ್ಣಯದ ಬಗ್ಗೆ ವಿವರಿಸಿದರು.</p>.<p>ಅಫ್ಗಾನಿಸ್ತಾನದಲ್ಲಿರುವ ಸಿಖ್ ಮತ್ತು ಹಿಂದೂಗಳಂತಹ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತ ಯಾವಾಗಲೂ ಬೆಂಬಲ ನೀಡುತ್ತಿದ್ದು, ಇತ್ತೀಚೆಗೆ ಅಫ್ಗನ್ ಪ್ರಜೆಗಳನ್ನು ಭಾರತಕ್ಕೆ ಸ್ಥಳಾಂತರಿಸಿರುವುದೂ ಅದರ ಒಂದು ಭಾಗ‘ ಎಂದು ಅವರು ಹೇಳಿದರು.</p>.<p>ಈಗ ಮಂಡಳಿ ಕೈಗೊಂಡಿರುವ ನಿರ್ಣಯವು ‘ಕಾಬೂಲ್ ವಿಮಾನ ನಿಲ್ದಾಣ ಹಾಗೂ ಹೊರ ಭಾಗದಲ್ಲಿರುವ ಪ್ರಯಾಣಿಕರಿಗೆ ಸುರಕ್ಷಿತ ವಲಯವನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಸೂಚಿಸುತ್ತದೆ‘ ಎಂದು ಶೃಂಗ್ಲಾ ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>