ಢಾಕಾ: ‘ಭಾರತ ಮತ್ತು ಬಾಂಗ್ಲಾದೇಶ ಅಭಿವೃದ್ಧಿಯಲ್ಲಿ ಪಾಲುದಾರರಾಗಿದ್ದು, ಉಭಯ ದೇಶಗಳ ನಡುವಿನಸಂಬಂಧ ಪರಸ್ಪರ ವಿಶ್ವಾಸ ಮತ್ತು ಗೌರವದ ಮೇಲೆ ನಿರ್ಮಾಣವಾಗಿದೆ’ ಎಂದು ಭಾರತದ ರಾಯಭಾರಿ ತಿಳಿಸಿದ್ದಾರೆ.
ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ‘ಮಹಾತ್ಮ ಗಾಂಧಿಯ ಸ್ಮರಣೆ’ ಕಾರ್ಯಕ್ರಮದಲ್ಲಿ ಭಾರತದ ಹೈ ಕಮಿಷನರ್ ರಿವಾ ಗಂಗೂಲಿ ದಾಸ್ ಮಾತನಾಡಿದರು.
‘ವಿಮೋಚನಾ ಯುದ್ಧದ 50 ನೇ ವಾರ್ಷಿಕೋತ್ಸವ ಮತ್ತು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವರ್ಷಾಚರಣೆಯ ಜಂಟಿ ಸ್ಮರಣಾರ್ಥಕ್ಕಾಗಿ ಭಾರತ ಎದುರು ನೋಡುತ್ತಿದೆ.ಉಭಯ ದೇಶಗಳ ನಡುವಿನ ಐತಿಹಾಸಿಕ ಸ್ನೇಹ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು ಒಟ್ಟಾಗಿ ಕಾರ್ಯಪ್ರವೃತ್ತವಾಗಬೇಕು’ ಎಂದು ತಿಳಿಸಿದರು.