<p><strong>ನವದೆಹಲಿ: </strong>ಭಾರತ ಮತ್ತು ಚೀನಾ ನಡುವಿನ ಮುಂದಿನ ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆ ಶುಕ್ರವಾರ ನಡೆಯುವ ಸಾಧ್ಯತೆ ಇದೆ. ಪೂರ್ವ ಲಡಾಕ್ನ ವಿವಾದಿತ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಚೀನಾದ ಸೈನಿಕರನ್ನು ಹಿಂಪಡೆಯುವ ಕುರಿತಂತೆ ಈ ಮಾತುಕತೆ ಕೇಂದ್ರೀಕೃತವಾಗಿರಲಿದೆ ಎಂದು ಈ ಬೆಳವಣಿಗೆ ಬಗ್ಗೆ ಅರಿವಿರುವ ಮೂಲಗಳು ಪಿಟಿಐಗೆ ತಿಳಿಸಿವೆ.</p>.<p>ಗೋಗ್ರಾ ಮತ್ತು ಹಾಟ್ ಸ್ಪ್ರಿಂಗ್ಸ್ನಲ್ಲಿ ಸೇನೆಯನ್ನು ಶೀಘ್ರ ವಿಸರ್ಜಿಸಲು ಮತ್ತು ಡೆಪ್ಸಾಂಗ್ ಬಯಲು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಭಾರತ ಒತ್ತಾಯಿಸುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಶುಕ್ರವಾರ 11 ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆಸುವ ಬಗ್ಗೆ ಎರಡು ಕಡೆಯಿಂದ ಮಾಹಿತಿ ವಿನಿಮಯ ಸಹ ಆಗಿದೆ ಎಂದು ಮೂಲಗಳು ಹೇಳುತ್ತವೆ.</p>.<p>ಕಳೆದ ವರ್ಷ ಮೇ 5 ರಂದು ಪ್ಯಾಂಗೊಂಗ್ ಸರೋವರ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಭಾರತ ಮತ್ತು ಚೀನಾದ ಮಿಲಿಟಿರಿ ನಡುವಿನ ಗಡಿರೇಖೆ ಸಂಘರ್ಷ ಸ್ಫೋಟಗೊಂಡಿತು. ಬಳಿಕ, ಎರಡೂ ಕಡೆಯಿಂದ ಗಡಿಯಲ್ಲಿ ಸಾವಿರಾರು ಸೈನಿಕರ ಮತ್ತು ಭಾರೀ ಶಸ್ತ್ರಾಸ್ತ್ರಗಳ ಜಮಾವಣೆ ಆರಂಭವಾಗಿತ್ತು.</p>.<p>ನಂತರ, ನಡೆದ ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಸರಣಿಯ ಪರಿಣಾಮವಾಗಿ, ಭಾರತ ಮತ್ತು ಚೀನಾ ಪಡೆಗಳು ಫೆಬ್ರವರಿಯಲ್ಲಿ ಪ್ಯಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯಿಂದ ಸೇನೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂತೆಗೆದುಕೊಳ್ಳುವುದನ್ನು ಪೂರ್ಣಗೊಳಿಸಿದವು.</p>.<p>ಫೆಬ್ರವರಿ 20 ರಂದು ನಡೆದ ಮಿಲಿಟರಿ ಮಾತುಕತೆಯಲ್ಲಿ, ಡೆಪ್ಸಾಂಗ್, ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾ ಸೇರಿದಂತೆ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಭಾರತ ಒತ್ತಾಯಿಸಿತು.</p>.<p>ಉಭಯ ದೇಶಗಳ ನಡುವಿನ ಉತ್ತಮ ಸಂಬಂಧಗಳಿಗೆ ಗಡಿಯುದ್ದಕ್ಕೂ ಶಾಂತಿಯುತ ವಾತಾವರಣದ ಅಗತ್ಯವಿದೆ ಎಂದು ಭಾರತ ಹಿಂದಿನಿಂದಲೂ ಒತ್ತಾಯಿಸುತ್ತಿದೆ.</p>.<p>ಕಳೆದ ವಾರ, ಪೂರ್ವ ಲಡಾಖ್ನ ಉಳಿದ ಪ್ರದೇಶಗಳಲ್ಲಿರುವ ಸೇನೆಯನ್ನು ಚೀನಾ ಶೀಘ್ರವಾಗಿ ಹಿಂಪಡೆಯುತ್ತದೆ ಎಂದು ಭಾರತ ಆಶಿಸಿತ್ತು.</p>.<p>ಸೇನೆ ಹಿಂತೆಗೆತ ಪ್ರಕ್ರಿಯೆಯು ಗಡಿ ಪ್ರದೇಶಗಳಲ್ಲಿ ಶಾಂತಿಯುತ ವಾತಾವರಣ ಪುನಃಸ್ಥಾಪಿಸಲು ಕಾರಣವಾಗುತ್ತದೆ ಮತ್ತು ದ್ವಿಪಕ್ಷೀಯ ಸಂಬಂಧಗಳ ವೃದ್ಧಿಗೆ ಅಗತ್ಯ ಪರಿಸ್ಥಿತಿಗಳನ್ನು ಒದಗಿಸುತ್ತದೆ ಎಂದು ಭಾರತ ಹೇಳಿದೆ.</p>.<p>ಪ್ಯಾಂಗೊಂಗ್ ಸರೋವರ ಪ್ರದೇಶಗಳಲ್ಲಿನ ಸೇನೆ ಹಿಂಪಡೆದ ಬಳಿಕ ಭಾರತದ ಆತಂಕ ಕಡಿಮೆಯಾಗಿದೆ. ಆದರೆ, ಅದು ಸಂಪೂರ್ಣವಾಗಿ ಹೋಗಿಲ್ಲ ಎಂದು ಮಾರ್ಚ್ ಅಂತ್ಯದಲ್ಲಿ, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತ ಮತ್ತು ಚೀನಾ ನಡುವಿನ ಮುಂದಿನ ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆ ಶುಕ್ರವಾರ ನಡೆಯುವ ಸಾಧ್ಯತೆ ಇದೆ. ಪೂರ್ವ ಲಡಾಕ್ನ ವಿವಾದಿತ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಚೀನಾದ ಸೈನಿಕರನ್ನು ಹಿಂಪಡೆಯುವ ಕುರಿತಂತೆ ಈ ಮಾತುಕತೆ ಕೇಂದ್ರೀಕೃತವಾಗಿರಲಿದೆ ಎಂದು ಈ ಬೆಳವಣಿಗೆ ಬಗ್ಗೆ ಅರಿವಿರುವ ಮೂಲಗಳು ಪಿಟಿಐಗೆ ತಿಳಿಸಿವೆ.</p>.<p>ಗೋಗ್ರಾ ಮತ್ತು ಹಾಟ್ ಸ್ಪ್ರಿಂಗ್ಸ್ನಲ್ಲಿ ಸೇನೆಯನ್ನು ಶೀಘ್ರ ವಿಸರ್ಜಿಸಲು ಮತ್ತು ಡೆಪ್ಸಾಂಗ್ ಬಯಲು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಭಾರತ ಒತ್ತಾಯಿಸುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಶುಕ್ರವಾರ 11 ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆಸುವ ಬಗ್ಗೆ ಎರಡು ಕಡೆಯಿಂದ ಮಾಹಿತಿ ವಿನಿಮಯ ಸಹ ಆಗಿದೆ ಎಂದು ಮೂಲಗಳು ಹೇಳುತ್ತವೆ.</p>.<p>ಕಳೆದ ವರ್ಷ ಮೇ 5 ರಂದು ಪ್ಯಾಂಗೊಂಗ್ ಸರೋವರ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಭಾರತ ಮತ್ತು ಚೀನಾದ ಮಿಲಿಟಿರಿ ನಡುವಿನ ಗಡಿರೇಖೆ ಸಂಘರ್ಷ ಸ್ಫೋಟಗೊಂಡಿತು. ಬಳಿಕ, ಎರಡೂ ಕಡೆಯಿಂದ ಗಡಿಯಲ್ಲಿ ಸಾವಿರಾರು ಸೈನಿಕರ ಮತ್ತು ಭಾರೀ ಶಸ್ತ್ರಾಸ್ತ್ರಗಳ ಜಮಾವಣೆ ಆರಂಭವಾಗಿತ್ತು.</p>.<p>ನಂತರ, ನಡೆದ ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಸರಣಿಯ ಪರಿಣಾಮವಾಗಿ, ಭಾರತ ಮತ್ತು ಚೀನಾ ಪಡೆಗಳು ಫೆಬ್ರವರಿಯಲ್ಲಿ ಪ್ಯಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯಿಂದ ಸೇನೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂತೆಗೆದುಕೊಳ್ಳುವುದನ್ನು ಪೂರ್ಣಗೊಳಿಸಿದವು.</p>.<p>ಫೆಬ್ರವರಿ 20 ರಂದು ನಡೆದ ಮಿಲಿಟರಿ ಮಾತುಕತೆಯಲ್ಲಿ, ಡೆಪ್ಸಾಂಗ್, ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾ ಸೇರಿದಂತೆ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಭಾರತ ಒತ್ತಾಯಿಸಿತು.</p>.<p>ಉಭಯ ದೇಶಗಳ ನಡುವಿನ ಉತ್ತಮ ಸಂಬಂಧಗಳಿಗೆ ಗಡಿಯುದ್ದಕ್ಕೂ ಶಾಂತಿಯುತ ವಾತಾವರಣದ ಅಗತ್ಯವಿದೆ ಎಂದು ಭಾರತ ಹಿಂದಿನಿಂದಲೂ ಒತ್ತಾಯಿಸುತ್ತಿದೆ.</p>.<p>ಕಳೆದ ವಾರ, ಪೂರ್ವ ಲಡಾಖ್ನ ಉಳಿದ ಪ್ರದೇಶಗಳಲ್ಲಿರುವ ಸೇನೆಯನ್ನು ಚೀನಾ ಶೀಘ್ರವಾಗಿ ಹಿಂಪಡೆಯುತ್ತದೆ ಎಂದು ಭಾರತ ಆಶಿಸಿತ್ತು.</p>.<p>ಸೇನೆ ಹಿಂತೆಗೆತ ಪ್ರಕ್ರಿಯೆಯು ಗಡಿ ಪ್ರದೇಶಗಳಲ್ಲಿ ಶಾಂತಿಯುತ ವಾತಾವರಣ ಪುನಃಸ್ಥಾಪಿಸಲು ಕಾರಣವಾಗುತ್ತದೆ ಮತ್ತು ದ್ವಿಪಕ್ಷೀಯ ಸಂಬಂಧಗಳ ವೃದ್ಧಿಗೆ ಅಗತ್ಯ ಪರಿಸ್ಥಿತಿಗಳನ್ನು ಒದಗಿಸುತ್ತದೆ ಎಂದು ಭಾರತ ಹೇಳಿದೆ.</p>.<p>ಪ್ಯಾಂಗೊಂಗ್ ಸರೋವರ ಪ್ರದೇಶಗಳಲ್ಲಿನ ಸೇನೆ ಹಿಂಪಡೆದ ಬಳಿಕ ಭಾರತದ ಆತಂಕ ಕಡಿಮೆಯಾಗಿದೆ. ಆದರೆ, ಅದು ಸಂಪೂರ್ಣವಾಗಿ ಹೋಗಿಲ್ಲ ಎಂದು ಮಾರ್ಚ್ ಅಂತ್ಯದಲ್ಲಿ, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>