<div dir="ltr"><strong>ನವದೆಹಲಿ</strong>: ತಾಲಿಬಾನ್ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ದಾಳಿಯ ಕಾರಣ ಅಫ್ಗಾನಿಸ್ತಾನದ ಉತ್ತರ ಭಾಗದಲ್ಲಿರುವ ಮಜರ್–ಇ–ಷರೀಫ್ ನಗರ ಮತ್ತು ಸುತ್ತಮುತ್ತಲು ವಾಸವಿದ್ದ ಸುಮಾರು 50 ಅಧಿಕಾರಿಗಳು ಹಾಗೂ ನಾಗರಿಕರನ್ನು ವಿಶೇಷ ವಿಮಾನದ ಮೂಲಕ ಬುಧವಾರ ಭಾರತವು ವಾಪಸ್ ಕರೆಸಿಕೊಂಡಿದೆ.<p>ಬುಧವಾರ ಮುಂಜಾನೆ ವಿಶೇಷ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.</p><p>ಮಜರ್–ಇ–ಷರೀಫ್ ನಗರದಲ್ಲಿರುವ ಭಾರತೀಯ ದೂತಾವಾಸ ಕಚೇರಿಯ ರಾಜತಾಂತ್ರಿಕ ಸಿಬ್ಬಂದಿ ಮತ್ತು ಭಾರತೀಯ ನಾಗರಿಕರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ವಿಶೇಷ ವಿಮಾನವು ಮಂಗಳವಾರ ತಡರಾತ್ರಿಯೇ ಹೊರಡಬೇಕಾಗಿತ್ತು. ಆದರೆ, ಭದ್ರತೆಯ ಕಾರಣಕ್ಕಾಗಿ ಕೆಲ ತಾಸುಗಳ ವಿಳಂಬದ ನಂತರ ಪ್ರಯಾಣ ಬೆಳೆಸಿತು. ಈ ನಿಟ್ಟಿನಲ್ಲಿ ಭಾರತವು ಅಫ್ಗನ್ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಸಾಧಿಸಿತ್ತು.</p><p>ಈ ನಡುವೆ ಮಜರ್–ಇ–ಷರೀಫ್ ನಗರದಲ್ಲಿರುವ ಭಾರತೀಯ ದೂತಾವಾಸ ಕಚೇರಿಯನ್ನು ಮುಚ್ಚುವುದಿಲ್ಲ ಎಂದು ಭಾರತ ಸರ್ಕಾರವು ಸ್ಪಷ್ಟಪಡಿಸಿದ್ದು, ಸ್ಥಳೀಯ ಉದ್ಯೋಗಿಗಳೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ.</p><p>ಭಾರತ ಮಾತ್ರವಲ್ಲ, ವಿಶ್ವಸಂಸ್ಥೆಯು ತನ್ನ ಅಧಿಕಾರಿಗಳನ್ನು ಮಜರ್-ಇ-ಷರೀಫ್ನಿಂದ ಸ್ಥಳಾಂತರಿಸಲು ಮುಂದಾಗಿದೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div dir="ltr"><strong>ನವದೆಹಲಿ</strong>: ತಾಲಿಬಾನ್ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ದಾಳಿಯ ಕಾರಣ ಅಫ್ಗಾನಿಸ್ತಾನದ ಉತ್ತರ ಭಾಗದಲ್ಲಿರುವ ಮಜರ್–ಇ–ಷರೀಫ್ ನಗರ ಮತ್ತು ಸುತ್ತಮುತ್ತಲು ವಾಸವಿದ್ದ ಸುಮಾರು 50 ಅಧಿಕಾರಿಗಳು ಹಾಗೂ ನಾಗರಿಕರನ್ನು ವಿಶೇಷ ವಿಮಾನದ ಮೂಲಕ ಬುಧವಾರ ಭಾರತವು ವಾಪಸ್ ಕರೆಸಿಕೊಂಡಿದೆ.<p>ಬುಧವಾರ ಮುಂಜಾನೆ ವಿಶೇಷ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.</p><p>ಮಜರ್–ಇ–ಷರೀಫ್ ನಗರದಲ್ಲಿರುವ ಭಾರತೀಯ ದೂತಾವಾಸ ಕಚೇರಿಯ ರಾಜತಾಂತ್ರಿಕ ಸಿಬ್ಬಂದಿ ಮತ್ತು ಭಾರತೀಯ ನಾಗರಿಕರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ವಿಶೇಷ ವಿಮಾನವು ಮಂಗಳವಾರ ತಡರಾತ್ರಿಯೇ ಹೊರಡಬೇಕಾಗಿತ್ತು. ಆದರೆ, ಭದ್ರತೆಯ ಕಾರಣಕ್ಕಾಗಿ ಕೆಲ ತಾಸುಗಳ ವಿಳಂಬದ ನಂತರ ಪ್ರಯಾಣ ಬೆಳೆಸಿತು. ಈ ನಿಟ್ಟಿನಲ್ಲಿ ಭಾರತವು ಅಫ್ಗನ್ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಸಾಧಿಸಿತ್ತು.</p><p>ಈ ನಡುವೆ ಮಜರ್–ಇ–ಷರೀಫ್ ನಗರದಲ್ಲಿರುವ ಭಾರತೀಯ ದೂತಾವಾಸ ಕಚೇರಿಯನ್ನು ಮುಚ್ಚುವುದಿಲ್ಲ ಎಂದು ಭಾರತ ಸರ್ಕಾರವು ಸ್ಪಷ್ಟಪಡಿಸಿದ್ದು, ಸ್ಥಳೀಯ ಉದ್ಯೋಗಿಗಳೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ.</p><p>ಭಾರತ ಮಾತ್ರವಲ್ಲ, ವಿಶ್ವಸಂಸ್ಥೆಯು ತನ್ನ ಅಧಿಕಾರಿಗಳನ್ನು ಮಜರ್-ಇ-ಷರೀಫ್ನಿಂದ ಸ್ಥಳಾಂತರಿಸಲು ಮುಂದಾಗಿದೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>