ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಅವರು, ಸಭೆಯಲ್ಲಿನ ತಮ್ಮ ಹೇಳಿಕೆಯನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ. ‘ಮ್ಯಾನ್ಮಾರ್ನಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ, ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಲಾಯಿತು. ಗರಿಷ್ಠ ಸಂಯಮ, ಪ್ರಜಾಪ್ರಭುತ್ವ ಮರು ಸ್ಥಾಪನೆಯತ್ತ ದೃಢವಾದ ಬದ್ಧತೆ ಪ್ರದರ್ಶಿಸಲಾಯಿತು. ಬಂಧಿತ ನಾಯಕರ ಬಿಡುಗಡೆಗೆ ಒತ್ತಾಯಿಸುವುದರ ಜತೆಗೆ, ಈ ನಿಟ್ಟಿನಲ್ಲಿ ‘ಆಸಿಯಾನ್’ ದೇಶಗಳ ಪ್ರಯತ್ನವನ್ನು ಸ್ವಾಗತಿಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.