‘ತೀವ್ರ ನಿರ್ಬಂಧಗಳ ಹೊರತಗಾಗಿಯೂ, ತಮ್ಮದೇ ಆದ ಸೀಮಿತ ಸಂಪನ್ಮೂಲಗಳೊಂದಿಗೆ ಭಾರತ ಬೇರೆ ಬೇರೆ ದೇಶಗಳಿಗೆ ಲಸಿಕೆ ಹಂಚಿಕೆ ಮಾಡಿದೆ. 150ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಜೀವ ರಕ್ಷಕ ಪರಿಕರಗಳು, ಔಷಧಗಳು ಮತ್ತು ಆರೋಗ್ಯ ರಕ್ಷಣಾ ಪರಿಕರಗಳನ್ನು ಒದಗಿಸಿದ್ದೇವೆ. ಆರೋಗ್ಯ ಸುರಕ್ಷತೆಯ ವಿಚಾರದಲ್ಲಿ ನಾವೆಲ್ಲರೂ ಒಟ್ಟಾಗಿ ಹೆಜ್ಜೆ ಹಾಕಿದರೆ ಮಾತ್ರ ಸಾಂಕ್ರಾಮಿಕ ರೋಗವನ್ನು ನಿರ್ಮೂಲನೆ ಮಾಡಲು ಸಾಧ್ಯ‘ ಎಂದು ಅಮರನಾಥ್ ಹೇಳಿದರು.