<p class="bodytext"><strong>ವಾಷಿಂಗ್ಟನ್: </strong>ಭಾರತವು ಹಿಂದೂ ಮಹಾಸಾಗರ ಪ್ರದೇಶದ ಭದ್ರತಾ ವಿಷಯದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಅದರ ಜತೆಗೆ ಈ ಭಾಗದಲ್ಲಿನ ದೇಶಗಳ ಆರ್ಥಿಕ ಅಭಿವೃದ್ಧಿ ಹಾಗೂ ತನ್ನ ಸ್ನೇಹಿತರು ಮತ್ತು ಪಾಲುದಾರರ ಕಡಲ ಭದ್ರತೆ ಸುಧಾರಿಸಲು ನೆರವಾಗುತ್ತಿದೆ ಎಂದು ಅಮೆರಿಕದಲ್ಲಿನ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ತಿಳಿಸಿದ್ದಾರೆ.</p>.<p class="bodytext">ಮುಂದಿನ ವಾರ ಕ್ವಾಡ್ ಶೃಂಗಸಭೆ ಜರುಗಲಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.</p>.<p class="bodytext">ಇದೇ 24ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ವಾಷಿಂಗ್ಟನ್ಲ್ಲಿ ಕ್ವಾಡ್ ಶೃಂಗಸಭೆ ಆಯೋಜಿಸಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಭಾಗವಹಿಸಲಿದ್ದಾರೆ.</p>.<p class="bodytext">ಇಂಡೊ–ಪೆಸಿಫಿಕ್ನಲ್ಲಿ ಮುಕ್ತ ಸಂಚಾರವನ್ನು ಉತ್ತೇಜಿಸುವುದು, ಹವಾಮಾನ ಬಿಕ್ಕಟ್ಟು ಹಾಗೂ ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ಪರಸ್ಪರ ಸಹಕಾರ ಮುಂದುವರಿಸುವ ಕುರಿತ ವಿಚಾರಗಳನ್ನು ನಾಲ್ವರು ನಾಯಕರು ಚರ್ಚಿಸುವರು.</p>.<p class="bodytext">‘ರಾಷ್ಟ್ರವಾಗಿ ಇಂದು ನಾವು ತುಂಬ ಜಟಿಲ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಅವುಗಳನ್ನು ಏಕಾಂಗಿಯಾಗಿ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ಪರಸ್ಪರ ಅವಲಂಬನೆಯ ಅಗತ್ಯವಿದೆ. ಇದು ದೌರ್ಬಲ್ಯದ ಸಂಕೇತವಲ್ಲ. ಬದಲಿಗೆ ಶಕ್ತಿಯ ಮೂಲ’ ಎಂದು ಸಂಧು ಹೇಳಿದರು.</p>.<p class="bodytext">ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದೂ ಮಹಾಸಾಗರವು ನೆರೆಹೊರೆಯ ರಾಷ್ಟ್ರಗಳೊಂದಿಗಿನ ವಿಸ್ತೃತ ಸೇತುವೆಯಾಗಿದೆ ಎಂದರು.</p>.<p class="bodytext">‘ನಮ್ಮನ್ನು ಬೇರ್ಪಡಿಸಿರುವ ಸಮುದ್ರಗಳೇ ನಮ್ಮನ್ನು ಸಂಪರ್ಕಿಸುವಂತೆ ಮಾಡಿವೆ. ಹಿಂದೂ ಮಹಾಸಾಗರ ಪ್ರದೇಶದ ಭದ್ರತಾ ವಿಚಾರದಲ್ಲಿ ಭಾರತ ಪ್ರಮುಖ ಪಾತ್ರ ನಿಭಾಯಿಸುತ್ತಿದೆ. ನೆರೆ ದೇಶಗಳಲ್ಲಿ ಅವಘಡ, ವಿಪತ್ತುಗಳು ಸಂಭವಿಸಿದಾಗ ಭಾರತವು ತುರ್ತಾಗಿ ಸ್ಪಂದಿಸಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ವಾಷಿಂಗ್ಟನ್: </strong>ಭಾರತವು ಹಿಂದೂ ಮಹಾಸಾಗರ ಪ್ರದೇಶದ ಭದ್ರತಾ ವಿಷಯದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಅದರ ಜತೆಗೆ ಈ ಭಾಗದಲ್ಲಿನ ದೇಶಗಳ ಆರ್ಥಿಕ ಅಭಿವೃದ್ಧಿ ಹಾಗೂ ತನ್ನ ಸ್ನೇಹಿತರು ಮತ್ತು ಪಾಲುದಾರರ ಕಡಲ ಭದ್ರತೆ ಸುಧಾರಿಸಲು ನೆರವಾಗುತ್ತಿದೆ ಎಂದು ಅಮೆರಿಕದಲ್ಲಿನ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ತಿಳಿಸಿದ್ದಾರೆ.</p>.<p class="bodytext">ಮುಂದಿನ ವಾರ ಕ್ವಾಡ್ ಶೃಂಗಸಭೆ ಜರುಗಲಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.</p>.<p class="bodytext">ಇದೇ 24ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ವಾಷಿಂಗ್ಟನ್ಲ್ಲಿ ಕ್ವಾಡ್ ಶೃಂಗಸಭೆ ಆಯೋಜಿಸಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಭಾಗವಹಿಸಲಿದ್ದಾರೆ.</p>.<p class="bodytext">ಇಂಡೊ–ಪೆಸಿಫಿಕ್ನಲ್ಲಿ ಮುಕ್ತ ಸಂಚಾರವನ್ನು ಉತ್ತೇಜಿಸುವುದು, ಹವಾಮಾನ ಬಿಕ್ಕಟ್ಟು ಹಾಗೂ ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ಪರಸ್ಪರ ಸಹಕಾರ ಮುಂದುವರಿಸುವ ಕುರಿತ ವಿಚಾರಗಳನ್ನು ನಾಲ್ವರು ನಾಯಕರು ಚರ್ಚಿಸುವರು.</p>.<p class="bodytext">‘ರಾಷ್ಟ್ರವಾಗಿ ಇಂದು ನಾವು ತುಂಬ ಜಟಿಲ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಅವುಗಳನ್ನು ಏಕಾಂಗಿಯಾಗಿ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ಪರಸ್ಪರ ಅವಲಂಬನೆಯ ಅಗತ್ಯವಿದೆ. ಇದು ದೌರ್ಬಲ್ಯದ ಸಂಕೇತವಲ್ಲ. ಬದಲಿಗೆ ಶಕ್ತಿಯ ಮೂಲ’ ಎಂದು ಸಂಧು ಹೇಳಿದರು.</p>.<p class="bodytext">ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದೂ ಮಹಾಸಾಗರವು ನೆರೆಹೊರೆಯ ರಾಷ್ಟ್ರಗಳೊಂದಿಗಿನ ವಿಸ್ತೃತ ಸೇತುವೆಯಾಗಿದೆ ಎಂದರು.</p>.<p class="bodytext">‘ನಮ್ಮನ್ನು ಬೇರ್ಪಡಿಸಿರುವ ಸಮುದ್ರಗಳೇ ನಮ್ಮನ್ನು ಸಂಪರ್ಕಿಸುವಂತೆ ಮಾಡಿವೆ. ಹಿಂದೂ ಮಹಾಸಾಗರ ಪ್ರದೇಶದ ಭದ್ರತಾ ವಿಚಾರದಲ್ಲಿ ಭಾರತ ಪ್ರಮುಖ ಪಾತ್ರ ನಿಭಾಯಿಸುತ್ತಿದೆ. ನೆರೆ ದೇಶಗಳಲ್ಲಿ ಅವಘಡ, ವಿಪತ್ತುಗಳು ಸಂಭವಿಸಿದಾಗ ಭಾರತವು ತುರ್ತಾಗಿ ಸ್ಪಂದಿಸಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>