<p><strong>ನ್ಯೂಯಾರ್ಕ್: </strong>ಪಾಕಿಸ್ತಾನವು ಮತ್ತೊಮ್ಮೆ ಕೆಟ್ಟ ಸುಳ್ಳಿನ ಕತೆ ಹೆಣೆದಿದ್ದು ವೈಯಕ್ತಿಕ ನಿಂದನೆ ಹಾಗೂ ಆಕ್ರಮಣಶೀಲತೆ ಪ್ರದರ್ಶಿಸಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಸಂದರ್ಭದಲ್ಲಿ ಜಮ್ಮು–ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಯನ್ನು ಭಾರತ ಬಲವಾಗಿ ಖಂಡಿಸಿದೆ. ಜಮ್ಮು–ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದೂ ಪುನರುಚ್ಚರಿಸಿದೆ.</p>.<p>‘ಪಾಕಿಸ್ತಾನದ ಪ್ರಧಾನಿ ಹೇಳಿಕೆಯು ಕೀಳುಮಟ್ಟದ್ದಾಗಿದ್ದು ಕೆಟ್ಟ ಸುಳ್ಳುಗಳು, ವೈಯಕ್ತಿಕ ನಿಂದನೆ, ಆಕ್ರಮಣಶೀಲತೆಯಿಂದ ಕೂಡಿವೆ. ಪಾಕಿಸ್ತಾನದ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಗಡಿಯಾಚೆಗಿನ ಭಯೋತ್ಪಾದನೆ ವಿಷಯವನ್ನು ಮುಚ್ಚಿಡಲಾಗಿದೆ. ಇದಕ್ಕೆ ತಕ್ಕ ತಿರುಗೇಟು ನೀಡುವ ಹಕ್ಕಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/india-pakistan-border-conflict-recent-developments-in-gilgit-baltistan-explainer-765211.html" itemprop="url">ಗಿಲ್ಗಿಟ್–ಬಾಲ್ಟಿಸ್ತಾನದಲ್ಲಿ ಏನಾಗ್ತಿದೆ, ಭಾರತವನ್ನು ಕೆರಳಿಸುತ್ತಿದೆಯೇ ಪಾಕ್?</a></p>.<p>ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಉದ್ದೇಶಿಸಿ ಶುಕ್ರವಾರ ಮಾತನಾಡಿದ್ದ ಇಮ್ರಾನ್ ಖಾನ್, ಜಮ್ಮು–ಕಾಶ್ಮೀರ ವಿಚಾರವೂ ಸೇರಿದಂತೆ ಭಾರತದ ಆಂತರಿಕ ವಿಚಾರಗಳನ್ನು ಪ್ರಸ್ತಾಪಿಸಿದ್ದರು.</p>.<p>ಭಾರತದ ವಿಚಾರಗಳನ್ನು ಖಾನ್ ಪ್ರಸ್ತಾಪಿಸುತ್ತಿರುವುದನ್ನು ಪ್ರತಿಭಟಿಸಿ ವಿಶ್ವಸಂಸ್ಥೆಯಲ್ಲಿ ಭಾರತದ ''ಪರ್ಮನೆಂಟ್ ಮಿಷನ್''ನ ಕಾರ್ಯದರ್ಶಿ ಮಿಜಿಟೊ ವಿನಿಟೊ ಸಭಾತ್ಯಾಗ ಮಾಡಿದ್ದರು.</p>.<p>ಜಮ್ಮು–ಕಾಶ್ಮೀರ ವಿಚಾರವಾಗಿ ವಿಶ್ವ ಸಮುದಾಯದ ಗಮನ ಸೆಳೆಯುವ ಪಾಕಿಸ್ತಾನದ ಯತ್ನವನ್ನು ಭಾರತ ನಿರಂತರವಾಗಿ ವಿಫಲಗೊಳಿಸುತ್ತಲೇ ಬಂದಿದೆ. ಆದರೂ ಪಾಕಿಸ್ತಾನವು ಮತ್ತೆ ಮತ್ತೆ ಆ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್: </strong>ಪಾಕಿಸ್ತಾನವು ಮತ್ತೊಮ್ಮೆ ಕೆಟ್ಟ ಸುಳ್ಳಿನ ಕತೆ ಹೆಣೆದಿದ್ದು ವೈಯಕ್ತಿಕ ನಿಂದನೆ ಹಾಗೂ ಆಕ್ರಮಣಶೀಲತೆ ಪ್ರದರ್ಶಿಸಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಸಂದರ್ಭದಲ್ಲಿ ಜಮ್ಮು–ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಯನ್ನು ಭಾರತ ಬಲವಾಗಿ ಖಂಡಿಸಿದೆ. ಜಮ್ಮು–ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದೂ ಪುನರುಚ್ಚರಿಸಿದೆ.</p>.<p>‘ಪಾಕಿಸ್ತಾನದ ಪ್ರಧಾನಿ ಹೇಳಿಕೆಯು ಕೀಳುಮಟ್ಟದ್ದಾಗಿದ್ದು ಕೆಟ್ಟ ಸುಳ್ಳುಗಳು, ವೈಯಕ್ತಿಕ ನಿಂದನೆ, ಆಕ್ರಮಣಶೀಲತೆಯಿಂದ ಕೂಡಿವೆ. ಪಾಕಿಸ್ತಾನದ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಗಡಿಯಾಚೆಗಿನ ಭಯೋತ್ಪಾದನೆ ವಿಷಯವನ್ನು ಮುಚ್ಚಿಡಲಾಗಿದೆ. ಇದಕ್ಕೆ ತಕ್ಕ ತಿರುಗೇಟು ನೀಡುವ ಹಕ್ಕಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/india-pakistan-border-conflict-recent-developments-in-gilgit-baltistan-explainer-765211.html" itemprop="url">ಗಿಲ್ಗಿಟ್–ಬಾಲ್ಟಿಸ್ತಾನದಲ್ಲಿ ಏನಾಗ್ತಿದೆ, ಭಾರತವನ್ನು ಕೆರಳಿಸುತ್ತಿದೆಯೇ ಪಾಕ್?</a></p>.<p>ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಉದ್ದೇಶಿಸಿ ಶುಕ್ರವಾರ ಮಾತನಾಡಿದ್ದ ಇಮ್ರಾನ್ ಖಾನ್, ಜಮ್ಮು–ಕಾಶ್ಮೀರ ವಿಚಾರವೂ ಸೇರಿದಂತೆ ಭಾರತದ ಆಂತರಿಕ ವಿಚಾರಗಳನ್ನು ಪ್ರಸ್ತಾಪಿಸಿದ್ದರು.</p>.<p>ಭಾರತದ ವಿಚಾರಗಳನ್ನು ಖಾನ್ ಪ್ರಸ್ತಾಪಿಸುತ್ತಿರುವುದನ್ನು ಪ್ರತಿಭಟಿಸಿ ವಿಶ್ವಸಂಸ್ಥೆಯಲ್ಲಿ ಭಾರತದ ''ಪರ್ಮನೆಂಟ್ ಮಿಷನ್''ನ ಕಾರ್ಯದರ್ಶಿ ಮಿಜಿಟೊ ವಿನಿಟೊ ಸಭಾತ್ಯಾಗ ಮಾಡಿದ್ದರು.</p>.<p>ಜಮ್ಮು–ಕಾಶ್ಮೀರ ವಿಚಾರವಾಗಿ ವಿಶ್ವ ಸಮುದಾಯದ ಗಮನ ಸೆಳೆಯುವ ಪಾಕಿಸ್ತಾನದ ಯತ್ನವನ್ನು ಭಾರತ ನಿರಂತರವಾಗಿ ವಿಫಲಗೊಳಿಸುತ್ತಲೇ ಬಂದಿದೆ. ಆದರೂ ಪಾಕಿಸ್ತಾನವು ಮತ್ತೆ ಮತ್ತೆ ಆ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>