<p><strong>ನ್ಯೂಯಾರ್ಕ್: </strong>ಭಯೋತ್ಪಾದನೆ, ಹವಾಮಾನ ವೈಪರೀತ್ಯ, ಭಾರತ– ಪೆಸಿಫಿಕ್ ಮತ್ತು ವಿಶ್ವಸಂಸ್ಥೆ ಸುಧಾರಣೆಯಂತಹ ಜಾಗತಿಕ ವಿಷಯಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಚರ್ಚೆಗೆ ತೆಗೆದುಕೊಳ್ಳುವಂತೆ ಭಾರತವು ಒತ್ತಾಯಿಸಲಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿಹೇಳಿದರು.</p>.<p>ಸಾಮಾನ್ಯ ಸಭೆಯ 76ನೇ ಅಧಿವೇಶನದಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳು ಪ್ರಮುಖ ವಿಷಯವಾಗುವ ನಿರೀಕ್ಷೆ ಇದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>ಜಾಗತಿಕ ಅರ್ಥವ್ಯವಸ್ಥೆಯ ಮಂದಗತಿ, ಭಯೋತ್ಪಾದನೆ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳು, ಮಧ್ಯ ಏಷ್ಯಾ ಮತ್ತು ಆಫ್ರಿಕಾದಲ್ಲಿನ ಸಂಘರ್ಷಗಳು ಕೂಡ ಸಭೆಯಲ್ಲಿ ಚರ್ಚೆಗೆ ಬರಲಿವೆ ಎಂದರು.</p>.<p><strong>ಇದನ್ನೂ:</strong> <a href="https://www.prajavani.net/world-news/united-nations-chief-antonio-guterres-requests-sco-cooperation-on-afghanistan-867737.html" target="_blank">ಅಫ್ಗಾನಿಸ್ತಾನದಲ್ಲಿ ಅಸ್ಥಿರತೆ; ಎಸ್ಸಿಒ ಸಹಕಾರ ಕೋರಿದ ಅಂಟೊನಿಯೊ ಗುಟೆರಸ್</a></p>.<p>ಅಬ್ದುಲ್ಲಾ ಸಾಹಿದ್ ಅವರ ಅಧ್ಯಕ್ಷತೆಯಲ್ಲಿ ಈ ವರ್ಷದ ಯುಎನ್ಜಿಎ ಅಧಿವೇಶನವು ಈ ತಿಂಗಳ 14ರಿಂದ ಆರಂಭವಾಗಿದೆ. ಈ ತಿಂಗಳ 21ರಿಂದ ಉನ್ನತ ಮಟ್ಟದ ಸಭೆ ಆರಂಭವಾಗಲಿದ್ದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಂಗಳವಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 25ರಂದು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್: </strong>ಭಯೋತ್ಪಾದನೆ, ಹವಾಮಾನ ವೈಪರೀತ್ಯ, ಭಾರತ– ಪೆಸಿಫಿಕ್ ಮತ್ತು ವಿಶ್ವಸಂಸ್ಥೆ ಸುಧಾರಣೆಯಂತಹ ಜಾಗತಿಕ ವಿಷಯಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಚರ್ಚೆಗೆ ತೆಗೆದುಕೊಳ್ಳುವಂತೆ ಭಾರತವು ಒತ್ತಾಯಿಸಲಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿಹೇಳಿದರು.</p>.<p>ಸಾಮಾನ್ಯ ಸಭೆಯ 76ನೇ ಅಧಿವೇಶನದಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳು ಪ್ರಮುಖ ವಿಷಯವಾಗುವ ನಿರೀಕ್ಷೆ ಇದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>ಜಾಗತಿಕ ಅರ್ಥವ್ಯವಸ್ಥೆಯ ಮಂದಗತಿ, ಭಯೋತ್ಪಾದನೆ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳು, ಮಧ್ಯ ಏಷ್ಯಾ ಮತ್ತು ಆಫ್ರಿಕಾದಲ್ಲಿನ ಸಂಘರ್ಷಗಳು ಕೂಡ ಸಭೆಯಲ್ಲಿ ಚರ್ಚೆಗೆ ಬರಲಿವೆ ಎಂದರು.</p>.<p><strong>ಇದನ್ನೂ:</strong> <a href="https://www.prajavani.net/world-news/united-nations-chief-antonio-guterres-requests-sco-cooperation-on-afghanistan-867737.html" target="_blank">ಅಫ್ಗಾನಿಸ್ತಾನದಲ್ಲಿ ಅಸ್ಥಿರತೆ; ಎಸ್ಸಿಒ ಸಹಕಾರ ಕೋರಿದ ಅಂಟೊನಿಯೊ ಗುಟೆರಸ್</a></p>.<p>ಅಬ್ದುಲ್ಲಾ ಸಾಹಿದ್ ಅವರ ಅಧ್ಯಕ್ಷತೆಯಲ್ಲಿ ಈ ವರ್ಷದ ಯುಎನ್ಜಿಎ ಅಧಿವೇಶನವು ಈ ತಿಂಗಳ 14ರಿಂದ ಆರಂಭವಾಗಿದೆ. ಈ ತಿಂಗಳ 21ರಿಂದ ಉನ್ನತ ಮಟ್ಟದ ಸಭೆ ಆರಂಭವಾಗಲಿದ್ದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಂಗಳವಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 25ರಂದು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>