ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26/11ರ ಮುಂಬೈ ದಾಳಿ ಸಂಚುಕೋರರಿಗೆ ಶಿಕ್ಷೆಯಾಗಲಿ: ಭಾರತ–ಅಮೆರಿಕ ಆಗ್ರಹ

Last Updated 25 ಸೆಪ್ಟೆಂಬರ್ 2021, 11:46 IST
ಅಕ್ಷರ ಗಾತ್ರ

ವಾಷಿಂಗ್ಟನ್: 26/11ರ ಮುಂಬೈ ದಾಳಿಯ ಸಂಚುಕೋರರಿಗೆ ಶಿಕ್ಷೆಯಾಗಲಿ ಎಂದು ಭಾರತ ಮತ್ತು ಅಮೆರಿಕ ಆಗ್ರಹಿಸಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ಬಳಿಕ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ವಿಶ್ವಸಂಸ್ಥೆಯು ನಿಷೇಧಿಸಿರುವ ಉಗ್ರ ಸಂಘಟನೆಗಳೂ ಸೇರಿದಂತೆ ಎಲ್ಲ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಸಂಘಟಿತ ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಉಭಯ ದೇಶಗಳು ಖಂಡಿಸಿವೆ.

ಗಡಿಯಾಚಗಿನ ಭಯೋತ್ಪಾದನೆಯನ್ನು ಎರಡೂ ದೇಶಗಳು ಖಂಡಿಸಿದ್ದು, ಮುಂಬೈ ದಾಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿವೆ. ಭಯೋತ್ಪಾದಕ ಸಂಘಟನೆಗಳಿಗೆ ಯಾವುದೇ ರೀತಿಯ ನೆರವು ನೀಡುವುದನ್ನೂ ಖಂಡಿಸಿವೆ.

2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಜಮಾತ್ ಉದ್ ದಾವಾದ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಲಷ್ಕರ್ ಎ ತಯ್ಬಾ ಉಗ್ರ ಸಂಘಟನೆಗಳ ಕೈವಾಡವಿದೆ. ದಾಳಿಯಲ್ಲಿ ಆರು ಮಂದಿ ಅಮೆರಿಕನ್ನರು ಸೇರಿದಂತೆ 166 ಮಂದಿ ಮೃತಪಟ್ಟಿದ್ದರು.

ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಯಲ್ಲಿರುವ ಹಫೀಜ್ ಸಯೀದ್‌ನನ್ನು ಕಳೆದ ವರ್ಷ ಜುಲೈ 17ರಂದು ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ ಪಾಕಿಸ್ತಾನದಲ್ಲಿ ಬಂಧಿಸಲಾಗಿತ್ತು. ಆತನನ್ನು ಲಾಹೋರ್‌ನ ಕೋಟ್ ಲಖ್‌ಪತ್ ಜೈಲಿನಲ್ಲಿ ಇರಿಸಲಾಗಿದೆ.

ಮುಂಬೈ ದಾಳಿಕೋರರ ಮತ್ತು ಉಗ್ರ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ಭಾರತವು ಪಾಕಿಸ್ತಾನವನ್ನು ಪದೇಪದೇ ಆಗ್ರಹಿಸುತ್ತಲೇ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT