‘ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಆಡಳಿತದ ಬಗ್ಗೆ ಜನ ನಂಬಿಕೆಯಿಟ್ಟಿರುವುದನ್ನು ದೃಢಪಡಿಸುತ್ತದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಬಡವರು, ರೈತರು ಮತ್ತು ಅಭಿವೃದ್ಧಿ ಪರವಾದ ನೀತಿಗಳಿಗೆ ಹಿಡಿದ ಕನ್ನಡಿಯಾಗಿದೆ. ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ಮೇಲಿನ ಜನರನಂಬಿಕೆಯಿಂದ ನಾವು ಸೆಮಿಫೈನಲ್ ಗೆದ್ದಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಇದಕ್ಕಿಂತಲೂ ದೊಡ್ಡ ಮಟ್ಟದ ಗೆಲುವು ಸಿಗಲಿದೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.