<p><strong>A</strong>ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಚುನಾವಣೋತ್ತರ ಹಿಂಸಾಚಾರವನ್ನು ಖಂಡಿಸಿ ಬಂಗಾಳದ ವಲಸಿಗರು ಸೇರಿದಂತೆ ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರು ಅಮೆರಿಕದ 30ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆ ನಡೆಸಿದರು.</p>.<p>ಹಿಂಸಾಚಾರ ಮತ್ತು ಹತ್ಯೆಗಳ ಬಗ್ಗೆ ಜನರ ಗಮನ ಸೆಳೆಯಲು ಪ್ರತಿಭಟನಾಕಾರರು ‘ಹಿಂದೂಗಳ ಜೀವನದ ವಿಷಯ‘, ‘ ಹಿಂದೂ ಜನಾಂಗೀಯ ಹತ್ಯೆಯ ವಿರುದ್ಧ ಪ್ರತಿಭಟನೆ‘ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಜತೆ ನಿರಂತರ ಸಂಪರ್ಕ ಹೊಂದಿರುವ ಸಿಲಿಕಾನ್ ವ್ಯಾಲಿಯ ಉದ್ಯಮಿ ಜುಧಜಿತ್ ಸೇನ್ ಮಜುಂದಾರ್, ‘ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಹತ್ಯೆಯಿಂದ ಇಲ್ಲಿನ ವಲಸಿಗರಿಗೆ ತೀವ್ರ ದುಃಖವಾಗಿದೆ‘ ಎಂದರು.</p>.<p>‘ಫಲಿತಾಂಶ ಪ್ರಕಟವಾದ ನಂತರ ನಡೆದ ದಾಳಿಯಲ್ಲಿ ಸಿಲುಕಿದ್ದ ಕೆಲವು ಸ್ನೇಹಿತರು ನನಗೆ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿ ಸಹಾಯ ಕೇಳಿದರು. ಅಂಗಡಿಗಳನ್ನು ಲೂಟಿ ಮಾಡುತ್ತಿದ್ದಾರೆ, ಮನೆಗಳ ಮೇಲೆ ಬಾಂಬ್ ಎಸೆಯುತ್ತಿದ್ದಾರೆ‘ ಎಂದು ಹೇಳಿದರು‘ ಎಂದು ಮಜುಂದಾರ್ ತಿಳಿಸಿದರು.</p>.<p>‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ವ್ಯವಸ್ಥಿತವಾಗಿ ಸರ್ವನಾಶ ಮಾಡುವುದರ ವಿರುದ್ಧ ಬಂಗಾಳಿ ವಲಸಿಗರು ಮಮತಾ ಬ್ಯಾನರ್ಜಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅಮೆರಿಕ, ಕೆನಡಾ, ಬ್ರಿಟನ್, ನೈಜೀರಿಯಾ, ಥಾಯ್ಲೆಂಡ್ ಇತರೆ ದೇಶಗಳಲ್ಲಿ ಸಾಮಾಜಿಕ ಜಾಲತಾಣದ ಮೂಲಕ #ಮಮತಾಸ್ಟಾಪ್ವಾಯ್ಲೆನ್ಸ್‘ ಹ್ಯಾಷ್ ಟ್ಯಾಗ್ನೊಂದಿಗೆ ಪ್ರತಿಭಟನೆಗೆ ಇಳಿದಿದ್ದಾರೆ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಉಸ್ತುವಾರಿ ಅಮಿತ್ ಮಾಳವಿಯಾ ಭಾನುವಾರ ಟ್ವೀಟ್ ಮಾಡಿದ್ದರು.</p>.<p>ಮೇ 2 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಪಶ್ಚಿಮ ಬಂಗಾಳದ ಹಲವು ಕಡೆಗಳಲ್ಲಿ ಹಿಂಸಾಚಾರ ನಡೆದಿತ್ತು. ಈ ಗಲಭೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>A</strong>ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಚುನಾವಣೋತ್ತರ ಹಿಂಸಾಚಾರವನ್ನು ಖಂಡಿಸಿ ಬಂಗಾಳದ ವಲಸಿಗರು ಸೇರಿದಂತೆ ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರು ಅಮೆರಿಕದ 30ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆ ನಡೆಸಿದರು.</p>.<p>ಹಿಂಸಾಚಾರ ಮತ್ತು ಹತ್ಯೆಗಳ ಬಗ್ಗೆ ಜನರ ಗಮನ ಸೆಳೆಯಲು ಪ್ರತಿಭಟನಾಕಾರರು ‘ಹಿಂದೂಗಳ ಜೀವನದ ವಿಷಯ‘, ‘ ಹಿಂದೂ ಜನಾಂಗೀಯ ಹತ್ಯೆಯ ವಿರುದ್ಧ ಪ್ರತಿಭಟನೆ‘ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಜತೆ ನಿರಂತರ ಸಂಪರ್ಕ ಹೊಂದಿರುವ ಸಿಲಿಕಾನ್ ವ್ಯಾಲಿಯ ಉದ್ಯಮಿ ಜುಧಜಿತ್ ಸೇನ್ ಮಜುಂದಾರ್, ‘ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಹತ್ಯೆಯಿಂದ ಇಲ್ಲಿನ ವಲಸಿಗರಿಗೆ ತೀವ್ರ ದುಃಖವಾಗಿದೆ‘ ಎಂದರು.</p>.<p>‘ಫಲಿತಾಂಶ ಪ್ರಕಟವಾದ ನಂತರ ನಡೆದ ದಾಳಿಯಲ್ಲಿ ಸಿಲುಕಿದ್ದ ಕೆಲವು ಸ್ನೇಹಿತರು ನನಗೆ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿ ಸಹಾಯ ಕೇಳಿದರು. ಅಂಗಡಿಗಳನ್ನು ಲೂಟಿ ಮಾಡುತ್ತಿದ್ದಾರೆ, ಮನೆಗಳ ಮೇಲೆ ಬಾಂಬ್ ಎಸೆಯುತ್ತಿದ್ದಾರೆ‘ ಎಂದು ಹೇಳಿದರು‘ ಎಂದು ಮಜುಂದಾರ್ ತಿಳಿಸಿದರು.</p>.<p>‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ವ್ಯವಸ್ಥಿತವಾಗಿ ಸರ್ವನಾಶ ಮಾಡುವುದರ ವಿರುದ್ಧ ಬಂಗಾಳಿ ವಲಸಿಗರು ಮಮತಾ ಬ್ಯಾನರ್ಜಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅಮೆರಿಕ, ಕೆನಡಾ, ಬ್ರಿಟನ್, ನೈಜೀರಿಯಾ, ಥಾಯ್ಲೆಂಡ್ ಇತರೆ ದೇಶಗಳಲ್ಲಿ ಸಾಮಾಜಿಕ ಜಾಲತಾಣದ ಮೂಲಕ #ಮಮತಾಸ್ಟಾಪ್ವಾಯ್ಲೆನ್ಸ್‘ ಹ್ಯಾಷ್ ಟ್ಯಾಗ್ನೊಂದಿಗೆ ಪ್ರತಿಭಟನೆಗೆ ಇಳಿದಿದ್ದಾರೆ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಉಸ್ತುವಾರಿ ಅಮಿತ್ ಮಾಳವಿಯಾ ಭಾನುವಾರ ಟ್ವೀಟ್ ಮಾಡಿದ್ದರು.</p>.<p>ಮೇ 2 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಪಶ್ಚಿಮ ಬಂಗಾಳದ ಹಲವು ಕಡೆಗಳಲ್ಲಿ ಹಿಂಸಾಚಾರ ನಡೆದಿತ್ತು. ಈ ಗಲಭೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>