<p><strong>ವಾಷಿಂಗ್ಟನ್</strong>: ಭಾರತ ಮತ್ತು ಅಮೆರಿಕದ ಹಲವು ನಾಗರಿಕ ಹಕ್ಕುಗಳ ಸಂಘಟನೆಗಳು ಮತ್ತು ಕಾರ್ಯಕರ್ತರು ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ಗೆ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ಗೆ ಸೋಮವಾರ ಮನವಿ ಮಾಡಿದ್ದಾರೆ.</p>.<p>ಭಾರತೀಯ ಅಮೆರಿಕನ್ ಮುಸ್ಲಿಂ ಕೌನ್ಸಿಲ್ (ಐಎಎಂಸಿ), ಹಿಂದೂ ಮಾನವ ಹಕ್ಕುಗಳ ಸಂಘಟನೆ ಮತ್ತು ಅದರ ಕಾರ್ಯಕರ್ತರು ವರ್ಚುವಲ್ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಮಾತನಾಡಿದ ಅವರು,‘ ಕೊಲೆ ಪ್ರಕರಣದಲ್ಲಿ ನಕಲಿ ಸಾಕ್ಷ್ಯಗಳ ಆಧಾರದ ಮೇರೆಗೆ ಸಂಜೀವ್ ಭಟ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಇದು ಸರಿಯಲ್ಲ’ ಎಂದು ದೂರಿದ್ದಾರೆ.</p>.<p>ಸುಪ್ರೀಂಕೋರ್ಟ್ ಜನವರಿ 20 ರಂದುಸಂಜೀವ್ ಭಟ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.</p>.<p>ಸಮಾಜದ ಉಳಿತಿಗಾಗಿ ಭಟ್ ಅವರು ಸೇವೆ ಸಲ್ಲಿಸಿದ್ದಾರೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿದ್ದ ಅವರು ಅಧಿಕಾರದಲ್ಲಿ ಇದ್ದರೂ ಸತ್ಯವನ್ನು ಹೇಳುವ ಸಾಮರ್ಥ್ಯ ಹೊಂದಿದ್ದರು. ಅಂತಹ ವ್ಯಕ್ತಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಂಜೀವ್ ಭಟ್ ಪ್ರಕರಣದಿಂದ ಭಾರತೀಯರು ಎಚ್ಚೆತ್ತುಕೊಂಡು ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅವರಿಗೆ ನ್ಯಾಯಕೊಡಿಸಲು ಮುಂದಾಗಬೇಕು. ಭಾರತೀಯ ಸಂವಿಧಾನವು ಸಾಂವಿಧಾನಿಕ ಮೌಲ್ಯಗಳು ಮತ್ತು ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ ಹೆಚ್ಚಿನ ಪ್ರಕರಣಗಳಲ್ಲಿ ಈ ಮೂಲಭೂತ ಹಕ್ಕುಗಳನ್ನು ದುರ್ಬಲಗೊಳಿಸಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘2002ರಲ್ಲಿ ನಡೆದ ಹತ್ಯಾಕಾಂಡವನ್ನು ವಿರೋಧಿಸಿದಕ್ಕಾಗಿ ಸಂಜೀವ್ ಭಟ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ನಾವು ಸಂಜೀವ್ ಭಟ್ ಅವರನ್ನು ಹೊರ ತರಲು ಚಳವಳಿಯನ್ನು ನಡೆಸಬೇಕು’ ಎಂದು ಖ್ಯಾತ ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಆನಂದ್ ಪಟ್ವರ್ಧನ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಭಾರತ ಮತ್ತು ಅಮೆರಿಕದ ಹಲವು ನಾಗರಿಕ ಹಕ್ಕುಗಳ ಸಂಘಟನೆಗಳು ಮತ್ತು ಕಾರ್ಯಕರ್ತರು ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ಗೆ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ಗೆ ಸೋಮವಾರ ಮನವಿ ಮಾಡಿದ್ದಾರೆ.</p>.<p>ಭಾರತೀಯ ಅಮೆರಿಕನ್ ಮುಸ್ಲಿಂ ಕೌನ್ಸಿಲ್ (ಐಎಎಂಸಿ), ಹಿಂದೂ ಮಾನವ ಹಕ್ಕುಗಳ ಸಂಘಟನೆ ಮತ್ತು ಅದರ ಕಾರ್ಯಕರ್ತರು ವರ್ಚುವಲ್ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಮಾತನಾಡಿದ ಅವರು,‘ ಕೊಲೆ ಪ್ರಕರಣದಲ್ಲಿ ನಕಲಿ ಸಾಕ್ಷ್ಯಗಳ ಆಧಾರದ ಮೇರೆಗೆ ಸಂಜೀವ್ ಭಟ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಇದು ಸರಿಯಲ್ಲ’ ಎಂದು ದೂರಿದ್ದಾರೆ.</p>.<p>ಸುಪ್ರೀಂಕೋರ್ಟ್ ಜನವರಿ 20 ರಂದುಸಂಜೀವ್ ಭಟ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.</p>.<p>ಸಮಾಜದ ಉಳಿತಿಗಾಗಿ ಭಟ್ ಅವರು ಸೇವೆ ಸಲ್ಲಿಸಿದ್ದಾರೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿದ್ದ ಅವರು ಅಧಿಕಾರದಲ್ಲಿ ಇದ್ದರೂ ಸತ್ಯವನ್ನು ಹೇಳುವ ಸಾಮರ್ಥ್ಯ ಹೊಂದಿದ್ದರು. ಅಂತಹ ವ್ಯಕ್ತಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಂಜೀವ್ ಭಟ್ ಪ್ರಕರಣದಿಂದ ಭಾರತೀಯರು ಎಚ್ಚೆತ್ತುಕೊಂಡು ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅವರಿಗೆ ನ್ಯಾಯಕೊಡಿಸಲು ಮುಂದಾಗಬೇಕು. ಭಾರತೀಯ ಸಂವಿಧಾನವು ಸಾಂವಿಧಾನಿಕ ಮೌಲ್ಯಗಳು ಮತ್ತು ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ ಹೆಚ್ಚಿನ ಪ್ರಕರಣಗಳಲ್ಲಿ ಈ ಮೂಲಭೂತ ಹಕ್ಕುಗಳನ್ನು ದುರ್ಬಲಗೊಳಿಸಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘2002ರಲ್ಲಿ ನಡೆದ ಹತ್ಯಾಕಾಂಡವನ್ನು ವಿರೋಧಿಸಿದಕ್ಕಾಗಿ ಸಂಜೀವ್ ಭಟ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ನಾವು ಸಂಜೀವ್ ಭಟ್ ಅವರನ್ನು ಹೊರ ತರಲು ಚಳವಳಿಯನ್ನು ನಡೆಸಬೇಕು’ ಎಂದು ಖ್ಯಾತ ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಆನಂದ್ ಪಟ್ವರ್ಧನ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>