‘ಪಾಕಿಸ್ತಾನದ ಪ್ರಧಾನಿ ಹೇಳಿಕೆಯು ಕೀಳುಮಟ್ಟದ್ದಾಗಿದ್ದು ಕೆಟ್ಟ ಸುಳ್ಳುಗಳು, ವೈಯಕ್ತಿಕ ನಿಂದನೆ, ಆಕ್ರಮಣಶೀಲತೆಯಿಂದ ಕೂಡಿವೆ. ಪಾಕಿಸ್ತಾನದ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಗಡಿಯಾಚೆಗಿನ ಭಯೋತ್ಪಾದನೆ ವಿಷಯವನ್ನು ಮುಚ್ಚಿಡಲಾಗಿದೆ. ಇದಕ್ಕೆ ತಕ್ಕ ತಿರುಗೇಟು ನೀಡುವ ಹಕ್ಕು ಭಾರತಕ್ಕಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಟ್ವೀಟ್ ಮಾಡಿದ್ದಾರೆ.