ಬೆಂಗಳೂರು: ಉಕ್ರೇನ್ ವಾಯುಪ್ರದೇಶ ಸಂಪೂರ್ಣವಾಗಿ ಮುಚ್ಚಿರುವ ಹಿನ್ನೆಲೆಯಲ್ಲಿ ಕೀವ್ಗೆ ವಿಶೇಷ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.
ಯುದ್ಧ ಪರಿಸ್ಥಿತಿ ನೆಲೆಗೊಂಡಿರುವ ಉಕ್ರೇನ್ನಿಂದ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ರಾಯಭಾರಿ ಕಚೇರಿಯು ಟ್ವೀಟ್ ಮೂಲಕ ತಿಳಿಸಿದೆ.