ಈ ಕುರಿತು ಪ್ರಕಟಣೆ ನೀಡಿರುವ ಹೈ ಕಮಿಷನರ್, ‘ಕೆಲವು ಟಿ.ವಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಶ್ರೀಲಂಕಾ ನಿರ್ಗಮಿತಪ್ರಧಾನಿ, ಅವರ ಕುಟುಂಬದವರು ಹಾಗೂ ಕೆಲ ಸ್ನೇಹಿತರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ವದಂತಿ ಹಬ್ಬಿಸಲಾಗುತ್ತಿದೆ. ಇದು ಸಂಪೂರ್ಣ ಸುಳ್ಳು ಅವರಿಗೆ ಭಾರತದಲ್ಲಿ ಯಾವುದೇ ರೀತಿಯ ಆಶ್ರಯ ನೀಡಿಲ್ಲ’ ಎಂದು ತಿಳಿಸಿದ್ದಾರೆ.