<p><strong>ವಾಷಿಂಗ್ಟನ್: </strong>ಭಾರತ ಮೂಲದ ಅಮೆರಿಕನ್ ಉದ್ಯಮಿ ಎಂ.ಆರ್ ರಂಗಸ್ವಾಮಿ ಅವರಿಗೆ ಕೆನಡಾ–ಭಾರತ ವ್ಯಾಪಾರ ಸಮಿತಿಯು 2020ನೇ ಸಾಲಿನ ‘ಜಾಗತಿಕ ಸೇವಾ ಪ್ರಶಸ್ತಿ‘ಯನ್ನು ನೀಡಿ ಗೌರವಿಸಿದೆ.</p>.<p>ಈ ಸಮಿತಿಯು ತನ್ನ ವಾರ್ಷಿಕ ದೀಪಾವಳಿ ಪ್ರಶಸ್ತಿ ಪುರಸ್ಕಾರ ಸಮಾರಂಭದ ಭಾಗವಾಗಿ ವರ್ಚುವಲ್ ವೇದಿಕೆ ಮೂಲಕ ಗುರುವಾರ ಜಾಗತಿಕ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿತು.</p>.<p>ಕೆನಡಾ ಮತ್ತು ಭಾರತ ದೇಶಗಳಲ್ಲಿ ಸಲ್ಲಿಸಿರುವ ಅಸಾಧಾರಣ, ನಿಸ್ವಾರ್ಥ, ಸಮರ್ಪಣಾ ಮನೋಭಾವದ ಸೇವೆ ಸಲ್ಲಿಸುವ ವ್ಯಕ್ತಿಗಳನ್ನು ಗುರುತಿಸಿ ಜಾಗತಿಕ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.</p>.<p>‘ಈ ಪ್ರಶಸ್ತಿಗೆ ಭಾಜನಾರಾಗಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಕೆನಡಾದ ಪ್ರಜೆಗಳು ಇಂಡಿಯಾಸ್ಪೊರಾ ಫೌಂಡೇಶನ್ನ ಪ್ರಮುಖ ಭಾಗವಾಗಿದ್ದಾರೆ. ಈ ಫೌಂಡೇಶನ್ ಮೂಲಕ ಸಮಾಜದಲ್ಲಿ ದೊಡ್ಡ ಬದಲಾವಣೆ ತರಲು ಇಚ್ಛಿಸುತ್ತೇನೆ‘ ಎಂದು ಇಂಡಿಯಾಸ್ಪೊರಾ ಫೌಂಡೇಶನ್ ಅಧ್ಯಕ್ಷ ಹಾಗೂ ಸಿಲಿಕಾನ್ ವ್ಯಾಲಿ ಸಾಫ್ಟ್ವೇರ್ ಎಕ್ಸಿಕ್ಯೂಟಿವ್ ಆಗಿರುವ ಉದ್ಯಮಿ ರಂಗಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>ಭಾರತ ಮೂಲದ ಅಮೆರಿಕನ್ ಉದ್ಯಮಿ ಎಂ.ಆರ್ ರಂಗಸ್ವಾಮಿ ಅವರಿಗೆ ಕೆನಡಾ–ಭಾರತ ವ್ಯಾಪಾರ ಸಮಿತಿಯು 2020ನೇ ಸಾಲಿನ ‘ಜಾಗತಿಕ ಸೇವಾ ಪ್ರಶಸ್ತಿ‘ಯನ್ನು ನೀಡಿ ಗೌರವಿಸಿದೆ.</p>.<p>ಈ ಸಮಿತಿಯು ತನ್ನ ವಾರ್ಷಿಕ ದೀಪಾವಳಿ ಪ್ರಶಸ್ತಿ ಪುರಸ್ಕಾರ ಸಮಾರಂಭದ ಭಾಗವಾಗಿ ವರ್ಚುವಲ್ ವೇದಿಕೆ ಮೂಲಕ ಗುರುವಾರ ಜಾಗತಿಕ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿತು.</p>.<p>ಕೆನಡಾ ಮತ್ತು ಭಾರತ ದೇಶಗಳಲ್ಲಿ ಸಲ್ಲಿಸಿರುವ ಅಸಾಧಾರಣ, ನಿಸ್ವಾರ್ಥ, ಸಮರ್ಪಣಾ ಮನೋಭಾವದ ಸೇವೆ ಸಲ್ಲಿಸುವ ವ್ಯಕ್ತಿಗಳನ್ನು ಗುರುತಿಸಿ ಜಾಗತಿಕ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.</p>.<p>‘ಈ ಪ್ರಶಸ್ತಿಗೆ ಭಾಜನಾರಾಗಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಕೆನಡಾದ ಪ್ರಜೆಗಳು ಇಂಡಿಯಾಸ್ಪೊರಾ ಫೌಂಡೇಶನ್ನ ಪ್ರಮುಖ ಭಾಗವಾಗಿದ್ದಾರೆ. ಈ ಫೌಂಡೇಶನ್ ಮೂಲಕ ಸಮಾಜದಲ್ಲಿ ದೊಡ್ಡ ಬದಲಾವಣೆ ತರಲು ಇಚ್ಛಿಸುತ್ತೇನೆ‘ ಎಂದು ಇಂಡಿಯಾಸ್ಪೊರಾ ಫೌಂಡೇಶನ್ ಅಧ್ಯಕ್ಷ ಹಾಗೂ ಸಿಲಿಕಾನ್ ವ್ಯಾಲಿ ಸಾಫ್ಟ್ವೇರ್ ಎಕ್ಸಿಕ್ಯೂಟಿವ್ ಆಗಿರುವ ಉದ್ಯಮಿ ರಂಗಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>