<p><strong>ನ್ಯೂಯಾರ್ಕ್</strong> (ಪಿಟಿಐ): ‘ಶಾಶ್ವತ ಹಾಗೂ ಶಾಶ್ವತವಲ್ಲದ ಸದಸ್ಯ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವುದು ಸೇರಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರಚನೆಯಲ್ಲಿ ಸುಧಾರಣೆ ತರುವುದು ಅಗತ್ಯ’ ಎಂದು ಜಿ–4 ರಾಷ್ಟ್ರಗಳು ಪ್ರತಿಪಾದಿಸಿವೆ.</p>.<p>‘ಜಾಗತಿಕ ಶಾಂತಿ ಹಾಗೂ ಸುರಕ್ಷತೆ ಬಹಳ ಸಂಕೀರ್ಣವಾದ ವಿಷಯವಾಗಿದೆ. ಇದಕ್ಕೆ ಹೊಸ ಸವಾಲುಗಳೂ ಎದುರಾಗುತ್ತಿವೆ. ಇಂಥ ವಿಷಯಗಳನ್ನು ವಿಶ್ವಸಂಸ್ಥೆ ಸಮರ್ಥವಾಗಿ ಎದುರಿಸಬೇಕು ಎಂದಾದರೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ಅಗತ್ಯ’ ಎಂದು ಈ ರಾಷ್ಟ್ರಗಳು ಹೇಳಿವೆ.</p>.<p>ಭಾರತ, ಬ್ರೆಜಿಲ್, ಜರ್ಮನಿ ಹಾಗೂ ಜಪಾನ್, ಜಿ–4 ಸಂಘಟನೆಯ ಸದಸ್ಯ ರಾಷ್ಟ್ರಗಳಾಗಿವೆ. ವಿಶ್ವಸಂಸ್ಥೆಯ ಸಾಮಾನ್ಯಸಭೆಯ 76ನೇ ಅಧಿವೇಶನದ ಹಿನ್ನೆಲೆಯಲ್ಲಿ ವರ್ಚುವಲ್ ವಿಧಾನದ ಮೂಲಕ ಆಯೋಜಿಸಿದ್ದ ಸಂಘಟನೆಯ ಸಭೆಯಲ್ಲಿ, ಈ ರಾಷ್ಟ್ರಗಳ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್, ಕಾರ್ಲೋಸ್ ಅಲ್ಬರ್ಟೊ ಫ್ರಾಂಕೊ ಫ್ರಾಂಕಾ, ಹೈಕೊ ಮಾಸ್ ಹಾಗೂ ಮೊಟೆಗಿ ತೊಷಿಮಿತ್ಸು ಅವರು ಪಾಲ್ಗೊಂಡಿದ್ದರು.</p>.<p>‘ಭದ್ರತಾ ಮಂಡಳಿಯು ಹೆಚ್ಚು ನ್ಯಾಯಸಮ್ಮತವಾಗಿ, ಪರಿಣಾಮಕಾರಿ ಹಾಗೂ ಪ್ರಾತಿನಿಧಿಕವಾಗಿ ಕಾರ್ಯನಿರ್ವಹಿಸಬೇಕು. ಅದು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವಂತಾಗಬೇಕು’ ಎಂದು ಅವರು ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್</strong> (ಪಿಟಿಐ): ‘ಶಾಶ್ವತ ಹಾಗೂ ಶಾಶ್ವತವಲ್ಲದ ಸದಸ್ಯ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವುದು ಸೇರಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರಚನೆಯಲ್ಲಿ ಸುಧಾರಣೆ ತರುವುದು ಅಗತ್ಯ’ ಎಂದು ಜಿ–4 ರಾಷ್ಟ್ರಗಳು ಪ್ರತಿಪಾದಿಸಿವೆ.</p>.<p>‘ಜಾಗತಿಕ ಶಾಂತಿ ಹಾಗೂ ಸುರಕ್ಷತೆ ಬಹಳ ಸಂಕೀರ್ಣವಾದ ವಿಷಯವಾಗಿದೆ. ಇದಕ್ಕೆ ಹೊಸ ಸವಾಲುಗಳೂ ಎದುರಾಗುತ್ತಿವೆ. ಇಂಥ ವಿಷಯಗಳನ್ನು ವಿಶ್ವಸಂಸ್ಥೆ ಸಮರ್ಥವಾಗಿ ಎದುರಿಸಬೇಕು ಎಂದಾದರೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ಅಗತ್ಯ’ ಎಂದು ಈ ರಾಷ್ಟ್ರಗಳು ಹೇಳಿವೆ.</p>.<p>ಭಾರತ, ಬ್ರೆಜಿಲ್, ಜರ್ಮನಿ ಹಾಗೂ ಜಪಾನ್, ಜಿ–4 ಸಂಘಟನೆಯ ಸದಸ್ಯ ರಾಷ್ಟ್ರಗಳಾಗಿವೆ. ವಿಶ್ವಸಂಸ್ಥೆಯ ಸಾಮಾನ್ಯಸಭೆಯ 76ನೇ ಅಧಿವೇಶನದ ಹಿನ್ನೆಲೆಯಲ್ಲಿ ವರ್ಚುವಲ್ ವಿಧಾನದ ಮೂಲಕ ಆಯೋಜಿಸಿದ್ದ ಸಂಘಟನೆಯ ಸಭೆಯಲ್ಲಿ, ಈ ರಾಷ್ಟ್ರಗಳ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್, ಕಾರ್ಲೋಸ್ ಅಲ್ಬರ್ಟೊ ಫ್ರಾಂಕೊ ಫ್ರಾಂಕಾ, ಹೈಕೊ ಮಾಸ್ ಹಾಗೂ ಮೊಟೆಗಿ ತೊಷಿಮಿತ್ಸು ಅವರು ಪಾಲ್ಗೊಂಡಿದ್ದರು.</p>.<p>‘ಭದ್ರತಾ ಮಂಡಳಿಯು ಹೆಚ್ಚು ನ್ಯಾಯಸಮ್ಮತವಾಗಿ, ಪರಿಣಾಮಕಾರಿ ಹಾಗೂ ಪ್ರಾತಿನಿಧಿಕವಾಗಿ ಕಾರ್ಯನಿರ್ವಹಿಸಬೇಕು. ಅದು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವಂತಾಗಬೇಕು’ ಎಂದು ಅವರು ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>