ಶನಿವಾರ, ಏಪ್ರಿಲ್ 1, 2023
23 °C

ಕೋವಿಡ್‌ ಉಲ್ಬಣ, ಆಮ್ಲಜನಕ ಕೊರತೆಯಿಂದ ಇಂಡೊನೇಷ್ಯಾ ತತ್ತರ

ಎಪಿ Updated:

ಅಕ್ಷರ ಗಾತ್ರ : | |

Prajavani

ಜಕಾರ್ತ: ಇಂಡೊನೇಷ್ಯಾದಲ್ಲಿ ಕೋವಿಡ್‌ ಸೋಂಕು ತೀವ್ರವಾಗಿ ಹರಡುತ್ತಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗಿದೆ. ಆಮ್ಲಜನಕ ಕೊರತೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಒಂದೆಡೆ ಲಸಿಕೆ ನೀಡುವ ಕಾರ್ಯಕ್ರಮ ನಿಧಾನಗತಿಯಲ್ಲಿ ಸಾಗಿದೆ. ಇನ್ನೊಂದೆಡೆ ಪ್ರಕರಣಗಳು ಹೆಚ್ಚುತ್ತಿದ್ದು, ಆಮ್ಲಜನಕ ಕೊರತೆಯೂ ಉಂಟಾಗಿದೆ. ಆಮ್ಲಜನಕ ಸಿಲಿಂಡರ್‌ಗಳನ್ನು ರೋಗಿಗಳ ಕುಟುಂಬಗಳೇ ತರಬೇಕು ಎಂದು ಕೆಲವು ಆಸ್ಪತ್ರೆಗಳು ತಾಕೀತು ಮಾಡುತ್ತಿವೆ ಎಂದು ಮೂಲಗಳು ಹೇಳಿವೆ.

ಜಾಗತಿಕ ಮಟ್ಟದಲ್ಲಿ ಲಸಿಕೆ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ಮತ್ತು ಲಸಿಕೆ ಪಡೆಯಲು ಜನರು ಹಿಂಜರಿಯುತ್ತಿರುವುದು ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲು ಕಾರಣ ಎನ್ನಲಾಗಿದೆ. ಮೇ ತಿಂಗಳಲ್ಲಿ ಈದ್‌ ರಜಾದಿನಗಳಲ್ಲಿ ಕೆಲವರು ಇತರ ದೇಶಗಳಿಗೆ ಪ್ರವಾಸ ಕೈಗೊಂಡಿರುವುದು, ಡೆಲ್ಟಾ ತಳಿ ಸೋಂಕು ಪ್ರಸರಣ ಕೂಡ ಏಕಾಏಕಿ ಕೋವಿಡ್‌ ಪ್ರಕರಣಗಳು ಹೆಚ್ಚಲು ಮತ್ತೊಂದು ಕಾರಣ ಎನ್ನಲಾಗಿದೆ.

ಇದನ್ನೂ ಓದಿ... ಡೆಲ್ಟಾ ಭೀತಿ: ಲಸಿಕೆ ಕಾರ್ಯಕ್ರಮಕ್ಕೆ ವೇಗ ನೀಡಲು ಮುಂದಾದ ಯೂರೋಪ್‌ ರಾಷ್ಟ್ರಗಳು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು