<p><strong>ಜಕಾರ್ತ:</strong> ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿದ್ದು, 39 ಜನರು ಗಾಯಗೊಂಡಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.</p>.<p>ಮಾದಕ ದ್ರವ್ಯ ಅಪರಾಧಿಗಳಿಗಾಗಿ ಇರುವ ಜಕಾರ್ತದ ಹೊರವಲಯದಲ್ಲಿರುವ ತಂಗೇರಂಗ್ ಜೈಲಿನ ಬ್ಲಾಕ್ ಸಿ ಯಲ್ಲಿ ಉಂಟಾದ ಬೆಂಕಿ ಅವಘಡಕ್ಕೆ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.</p>.<p>1,225 ಕೈದಿಗಳನ್ನು ಇಡುವಷ್ಟು ಸಾಮರ್ಥ್ಯವಿರುವ ತಂಗೇರಂಗ ಜೈಲಿನಲ್ಲಿ 2,000ಕ್ಕಿಂತಲೂ ಹೆಚ್ಚು ಜನರಿದ್ದಾರೆ. ಬೆಂಕಿ ಸಂಭವಿಸಿದಾಗ ಬ್ಲಾಕ್ ಸಿನಲ್ಲಿ 122 ಅಪರಾಧಿಗಳಿದ್ದರು. ಬೆಂಕಿ ನಿಯಂತ್ರಿಸಲು ನೂರಾರು ಪೋಲಿಸರು ಮತ್ತು ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಅಪ್ರಿಯಂತಿ ತಿಳಿಸಿದ್ದಾರೆ.</p>.<p>ಕೆಲವು ಗಂಟೆಗಳ ನಂತರ ಬೆಂಕಿಯನ್ನು ನಂದಿಸಲಾಗಿದೆ ಮತ್ತು ಎಲ್ಲಾ ಸಂತ್ರಸ್ತರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.</p>.<p>ಇಂಡೋನೇಷ್ಯಾದಲ್ಲಿ ಗಲಭೆಗಳು ಸಾಮಾನ್ಯವಾಗಿದ್ದು, ಕಡಿಮೆ ವ್ಯವಸ್ಥೆಗಳಿರುವ ಜೈಲಿನಲ್ಲಿ ಅತಿಯಾದ ಕೈದಿಗಳಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಕಾನೂನುಬಾಹಿರ ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತ:</strong> ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿದ್ದು, 39 ಜನರು ಗಾಯಗೊಂಡಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.</p>.<p>ಮಾದಕ ದ್ರವ್ಯ ಅಪರಾಧಿಗಳಿಗಾಗಿ ಇರುವ ಜಕಾರ್ತದ ಹೊರವಲಯದಲ್ಲಿರುವ ತಂಗೇರಂಗ್ ಜೈಲಿನ ಬ್ಲಾಕ್ ಸಿ ಯಲ್ಲಿ ಉಂಟಾದ ಬೆಂಕಿ ಅವಘಡಕ್ಕೆ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.</p>.<p>1,225 ಕೈದಿಗಳನ್ನು ಇಡುವಷ್ಟು ಸಾಮರ್ಥ್ಯವಿರುವ ತಂಗೇರಂಗ ಜೈಲಿನಲ್ಲಿ 2,000ಕ್ಕಿಂತಲೂ ಹೆಚ್ಚು ಜನರಿದ್ದಾರೆ. ಬೆಂಕಿ ಸಂಭವಿಸಿದಾಗ ಬ್ಲಾಕ್ ಸಿನಲ್ಲಿ 122 ಅಪರಾಧಿಗಳಿದ್ದರು. ಬೆಂಕಿ ನಿಯಂತ್ರಿಸಲು ನೂರಾರು ಪೋಲಿಸರು ಮತ್ತು ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಅಪ್ರಿಯಂತಿ ತಿಳಿಸಿದ್ದಾರೆ.</p>.<p>ಕೆಲವು ಗಂಟೆಗಳ ನಂತರ ಬೆಂಕಿಯನ್ನು ನಂದಿಸಲಾಗಿದೆ ಮತ್ತು ಎಲ್ಲಾ ಸಂತ್ರಸ್ತರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.</p>.<p>ಇಂಡೋನೇಷ್ಯಾದಲ್ಲಿ ಗಲಭೆಗಳು ಸಾಮಾನ್ಯವಾಗಿದ್ದು, ಕಡಿಮೆ ವ್ಯವಸ್ಥೆಗಳಿರುವ ಜೈಲಿನಲ್ಲಿ ಅತಿಯಾದ ಕೈದಿಗಳಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಕಾನೂನುಬಾಹಿರ ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>