<p><strong>ಟೆಹ್ರಾನ್</strong>: ಆನ್ಲೈನ್ ಮೂಲಕ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಒಮ್ಮೆ ಗಡಿಪಾರು ಮಾಡಲಾಗಿದ್ದ ಪತ್ರಕರ್ತನೊಬ್ಬನನ್ನು ಇರಾನ್ ಸರ್ಕಾರ ಶನಿವಾರ ಗಲ್ಲಿಗೇರಿಸಿದೆ.</p>.<p>2017ರಲ್ಲಿ ದೇಶದ ಆರ್ಥಿಕತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರವ್ಯಾಪಿ ನಡೆದ ಪ್ರತಿಭಟನೆಯನ್ನು ತನ್ನ ಆನ್ಲೈನ್ ಚಾನಲ್ ಮೂಲಕ ಪ್ರಚಾರ ಮಾಡಿ, ಜನರನ್ನು ಪ್ರಚೋದಿಸಿದ್ದರು ಎಂಬ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ ಪತ್ರಕರ್ತ ರುಹೊಲ್ಲಾಹ್ ಝಾಮ್ ಅವರನ್ನು ಶನಿವಾರ ಮುಂಜಾನೆ ಗಲ್ಲಿಗೇರಿಸಲಾಯಿತು.</p>.<p>ಕಳೆದ ಜೂನ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ‘ಇದು ಭೂಮಿ ಮೇಲಿನ ಭ್ರಷ್ಟಾಚಾರ‘ ಎಂದು ಉಲ್ಲೇಖಿಸಿ ಝಾಮ್ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಇದನ್ನು ಗೂಢಚರ್ಯೆ ಅಥವಾ ಇರಾನ್ ಸರ್ಕಾರವನ್ನು ಉರುಳಿಸುವಂತಹ ಪ್ರಯತ್ನಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.</p>.<p>ಝಾಮ್ನ ವೆಬ್ಸೈಟ್ ಮತ್ತು ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ನಿಂದ ಟೆಲಿಗ್ರಾಂ ಚಾನಲ್ ಮೂಲಕ, ಇರಾನ್ನ ಶಿಯಾ ಪ್ರಜಾಪ್ರಭುತ್ವವನ್ನು ನೇರವಾಗಿ ಪ್ರಶ್ನಿಸಿದ ಅಧಿಕಾರಿಗಳ ಬಗ್ಗೆ ಮುಜುಗರದ ಪ್ರಚಾರ ಮಾಡಿ, ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆಯ ಸಮಯವನ್ನು ಪ್ರಕಟಿಸಿದ್ದರು.</p>.<p>2017ರ ಕೊನೆಯಲ್ಲಿ ಪ್ರಾರಂಭವಾದ ಆ ಪ್ರತಿಭಟನೆಗಳು, 2009 ರ ಹಸಿರು ಆಂದೋಲನದ ನಂತರ ಇರಾನ್ಗೆ ದೊಡ್ಡ ಸವಾಲನ್ನು ತಂದೊಡ್ಡಿದ್ದವು ಮತ್ತು ಕಳೆದ ವರ್ಷದ ನವೆಂಬರ್ನಲ್ಲಿ ಇದೇ ರೀತಿಯ ಸಾಮೂಹಿಕ ಅಶಾಂತಿ ಸೃಷ್ಟಿಸಲು ಪ್ರತಿಭಟನೆಗಳು ವೇದಿಕೆ ಕಲ್ಪಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೆಹ್ರಾನ್</strong>: ಆನ್ಲೈನ್ ಮೂಲಕ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಒಮ್ಮೆ ಗಡಿಪಾರು ಮಾಡಲಾಗಿದ್ದ ಪತ್ರಕರ್ತನೊಬ್ಬನನ್ನು ಇರಾನ್ ಸರ್ಕಾರ ಶನಿವಾರ ಗಲ್ಲಿಗೇರಿಸಿದೆ.</p>.<p>2017ರಲ್ಲಿ ದೇಶದ ಆರ್ಥಿಕತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರವ್ಯಾಪಿ ನಡೆದ ಪ್ರತಿಭಟನೆಯನ್ನು ತನ್ನ ಆನ್ಲೈನ್ ಚಾನಲ್ ಮೂಲಕ ಪ್ರಚಾರ ಮಾಡಿ, ಜನರನ್ನು ಪ್ರಚೋದಿಸಿದ್ದರು ಎಂಬ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ ಪತ್ರಕರ್ತ ರುಹೊಲ್ಲಾಹ್ ಝಾಮ್ ಅವರನ್ನು ಶನಿವಾರ ಮುಂಜಾನೆ ಗಲ್ಲಿಗೇರಿಸಲಾಯಿತು.</p>.<p>ಕಳೆದ ಜೂನ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ‘ಇದು ಭೂಮಿ ಮೇಲಿನ ಭ್ರಷ್ಟಾಚಾರ‘ ಎಂದು ಉಲ್ಲೇಖಿಸಿ ಝಾಮ್ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಇದನ್ನು ಗೂಢಚರ್ಯೆ ಅಥವಾ ಇರಾನ್ ಸರ್ಕಾರವನ್ನು ಉರುಳಿಸುವಂತಹ ಪ್ರಯತ್ನಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.</p>.<p>ಝಾಮ್ನ ವೆಬ್ಸೈಟ್ ಮತ್ತು ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ನಿಂದ ಟೆಲಿಗ್ರಾಂ ಚಾನಲ್ ಮೂಲಕ, ಇರಾನ್ನ ಶಿಯಾ ಪ್ರಜಾಪ್ರಭುತ್ವವನ್ನು ನೇರವಾಗಿ ಪ್ರಶ್ನಿಸಿದ ಅಧಿಕಾರಿಗಳ ಬಗ್ಗೆ ಮುಜುಗರದ ಪ್ರಚಾರ ಮಾಡಿ, ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆಯ ಸಮಯವನ್ನು ಪ್ರಕಟಿಸಿದ್ದರು.</p>.<p>2017ರ ಕೊನೆಯಲ್ಲಿ ಪ್ರಾರಂಭವಾದ ಆ ಪ್ರತಿಭಟನೆಗಳು, 2009 ರ ಹಸಿರು ಆಂದೋಲನದ ನಂತರ ಇರಾನ್ಗೆ ದೊಡ್ಡ ಸವಾಲನ್ನು ತಂದೊಡ್ಡಿದ್ದವು ಮತ್ತು ಕಳೆದ ವರ್ಷದ ನವೆಂಬರ್ನಲ್ಲಿ ಇದೇ ರೀತಿಯ ಸಾಮೂಹಿಕ ಅಶಾಂತಿ ಸೃಷ್ಟಿಸಲು ಪ್ರತಿಭಟನೆಗಳು ವೇದಿಕೆ ಕಲ್ಪಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>