<p><strong>ವಿಶ್ವಸಂಸ್ಥೆ:</strong> ಅಫ್ಗಾನಿಸ್ತಾನವು ತಾಲಿಬಾನ್ ಉಗ್ರರ ಕೈವಾಶವಾಗಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರೊಂದಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚರ್ಚೆ ನಡೆಸಿದರು.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಫ್ಗನ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆದಿರುವ ಹಿನ್ನೆಲೆಯಲ್ಲಿ ಜೈಶಂಕರ್ ಅವರು ಸೋಮವಾರ ನ್ಯೂಯಾರ್ಕ್ಗೆ ತೆರಳಿದ್ದರು. ಭಾರತದ ಅಧ್ಯಕ್ಷತೆಯಲ್ಲಿ ಭದ್ರತಾ ಮಂಡಳಿಯು 10 ದಿನಗಳಲ್ಲಿ ಎರಡನೇ ಬಾರಿ ಸಭೆ ಸೇರಿತ್ತು.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ‘ಗುಟೆರಸ್ ಅವರನ್ನು ಭೇಟಿಯಾದೆ. ಭದ್ರತಾ ಮಂಡಳಿ ಸಭೆ ಬಳಿಕ ಅಫ್ಗಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಅವರೊಂದಿಗೆ ಚರ್ಚಿಸಿದೆ’ ಎಂದು ಹೇಳಿದ್ದಾರೆ.</p>.<p>ಜೈ ಶಂಕರ್ ಅವರು ಎಸ್ಟೋನಿಯಾದ ವಿದೇಶಾಂಗ ವ್ಯವಹಾರಗಳ ಸಚಿವೆ ಇವಾ-ಮರಿಯಾ ಲೈಮೆಟ್ಸ್ ಅವರನ್ನೂ ಭೇಟಿಯಾದರು.</p>.<p>‘ಸಮುದ್ರ, ಸೈಬರ್ ಭದ್ರತೆ ಮತ್ತು ಇತರ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ಉಭಯ ರಾಷ್ಟ್ರಗಳು ಜೊತೆಯಾಗಿ ಕೆಲಸ ಮಾಡುವುದರ ಕುರಿತು ಇವಾ ಅವರೊಂದಿಗೆ ಚರ್ಚಿಸಿದೆ. ಅಫ್ಗಾನಿಸ್ತಾನದ ಪರಿಸ್ಥಿತಿ ಬಗ್ಗೆ ಉಭಯ ರಾಷ್ಟ್ರಗಳ ದೃಷ್ಟಿಕೋನವನ್ನೂ ನಾವು ಹಂಚಿಕೊಂಡೆವು’ ಎಂದು ಜೈಶಂಕರ್ ಹೇಳಿದ್ದಾರೆ.</p>.<p>ಜೈಶಂಕರ್ ಆಗಸ್ಟ್ 19ರಂದು ಭಯೋತ್ಪಾದನೆ ನಿಗ್ರಹದ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಅಫ್ಗಾನಿಸ್ತಾನವು ತಾಲಿಬಾನ್ ಉಗ್ರರ ಕೈವಾಶವಾಗಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರೊಂದಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚರ್ಚೆ ನಡೆಸಿದರು.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಫ್ಗನ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆದಿರುವ ಹಿನ್ನೆಲೆಯಲ್ಲಿ ಜೈಶಂಕರ್ ಅವರು ಸೋಮವಾರ ನ್ಯೂಯಾರ್ಕ್ಗೆ ತೆರಳಿದ್ದರು. ಭಾರತದ ಅಧ್ಯಕ್ಷತೆಯಲ್ಲಿ ಭದ್ರತಾ ಮಂಡಳಿಯು 10 ದಿನಗಳಲ್ಲಿ ಎರಡನೇ ಬಾರಿ ಸಭೆ ಸೇರಿತ್ತು.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ‘ಗುಟೆರಸ್ ಅವರನ್ನು ಭೇಟಿಯಾದೆ. ಭದ್ರತಾ ಮಂಡಳಿ ಸಭೆ ಬಳಿಕ ಅಫ್ಗಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಅವರೊಂದಿಗೆ ಚರ್ಚಿಸಿದೆ’ ಎಂದು ಹೇಳಿದ್ದಾರೆ.</p>.<p>ಜೈ ಶಂಕರ್ ಅವರು ಎಸ್ಟೋನಿಯಾದ ವಿದೇಶಾಂಗ ವ್ಯವಹಾರಗಳ ಸಚಿವೆ ಇವಾ-ಮರಿಯಾ ಲೈಮೆಟ್ಸ್ ಅವರನ್ನೂ ಭೇಟಿಯಾದರು.</p>.<p>‘ಸಮುದ್ರ, ಸೈಬರ್ ಭದ್ರತೆ ಮತ್ತು ಇತರ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ಉಭಯ ರಾಷ್ಟ್ರಗಳು ಜೊತೆಯಾಗಿ ಕೆಲಸ ಮಾಡುವುದರ ಕುರಿತು ಇವಾ ಅವರೊಂದಿಗೆ ಚರ್ಚಿಸಿದೆ. ಅಫ್ಗಾನಿಸ್ತಾನದ ಪರಿಸ್ಥಿತಿ ಬಗ್ಗೆ ಉಭಯ ರಾಷ್ಟ್ರಗಳ ದೃಷ್ಟಿಕೋನವನ್ನೂ ನಾವು ಹಂಚಿಕೊಂಡೆವು’ ಎಂದು ಜೈಶಂಕರ್ ಹೇಳಿದ್ದಾರೆ.</p>.<p>ಜೈಶಂಕರ್ ಆಗಸ್ಟ್ 19ರಂದು ಭಯೋತ್ಪಾದನೆ ನಿಗ್ರಹದ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>