ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸವಾಲುಗಳ ಎದುರಿಸಲು ಸಂಘಟಿತ ಯತ್ನ ಅಗತ್ಯ: ಜೈಶಂಕರ್

Last Updated 8 ಸೆಪ್ಟೆಂಬರ್ 2022, 14:11 IST
ಅಕ್ಷರ ಗಾತ್ರ

ಟೋಕಿಯೊ: ಕೋವಿಡ್‌ ಒಡ್ಡಿರುವ ಹೊಸ ಸವಾಲುಗಳು, ತೈವಾನ್‌ ಮೇಲಿನ ಚೀನಾದ ಆಕ್ರಮಣಕಾರಿ ಕ್ರಮಗಳನ್ನು ಭಾರತಮತ್ತುಜಪಾನ್‌ ಸಂಘಟಿತವಾಗಿಎದುರಿಸಬೇಕಿದೆ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಗುರುವಾರ ಕರೆ ನೀಡಿದರು.

ಭದ್ರತೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಉಭಯ ದೇಶಗಳ ಸಹಕಾರ ವೃದ್ಧಿಸುವಕುರಿತು ಭಾರತ ಮತ್ತು ಜಪಾನ್‌ನ ದೇಶಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ಹೇಳಿದರು.

ಜೈಶಂಕರ್‌ ಅವರು ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಸಂತಾಪ ಸೂಚಿಸಿದರು.ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT