ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಸಚಿವ ಜೈಶಂಕರ್ ಶ್ರೀಲಂಕಾ ಪ್ರವಾಸ

Last Updated 4 ಜನವರಿ 2021, 14:11 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರದಿಂದ ಮೂರು ದಿನಗಳ ಕಾಲ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ.

ಶ್ರೀಲಂಕಾ ಭೇಟಿಯ ಸಂದರ್ಭದಲ್ಲಿ ಜೈಶಂಕರ್ ಅವರು ಭಾರತ ಮತ್ತು ಶ್ರೀಲಂಕಾದ ದ್ವಿಪಕ್ಷೀಯ ಸಂಬಂಧಗಳ ಕುರಿತು ಅಲ್ಲಿನ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

‘ಶ್ರೀಲಂಕಾದ ವಿದೇಶಾಂಗ ಸಚಿವ ದಿನೇಶ್ ಗುಣವರ್ಧೆನ ಅವರ ಆಹ್ವಾನದ ಮೇರೆಗೆ ಜೈಶಂಕರ್ ಅವರು ಜ. 5ರಿಂದ 7ರವರೆಗೆ ಪ್ರವಾಸ ಕೈಗೊಂಡಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

‘2021ರಲ್ಲಿ ವಿದೇಶಾಂಗ ಸಚಿವರ ಮೊದಲ ವಿದೇಶ ಪ್ರವಾಸ ಇದಾಗಿದ್ದು, ಹೊಸ ವರ್ಷಲ್ಲಿ ಶ್ರೀಲಂಕಾಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ವಿದೇಶಿ ಗಣ್ಯರ ಭೇಟಿ ಇದಾಗಿದೆ. ಉಭಯ ದೇಶಗಳ ನಡುವೆ ಎಲ್ಲಾ ಕ್ಷೇತ್ರಗಳಲ್ಲೂ ನಿಕಟ ಮತ್ತು ಸೌಹಾರ್ದಯುತವಾಗಿ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆಗಳು’ ಎಂದೂ ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT