ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ ಅವರು, ‘ಭಾರತ–ಜಪಾನ್ನ ಪಾಲುದಾರಿಕೆಯು ಎರಡೂ ದೇಶಗಳಿಗೆ ಮಾತ್ರ ಮುಖ್ಯವಾದುದಲ್ಲ. ಬದಲಿಗೆ ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ನೆಲೆಸುವಲ್ಲಿಯೂ ನಮ್ಮ ಸಂಬಂಧ ಮುಖ್ಯ ಪಾತ್ರವಹಿಸುತ್ತದೆ’ ಎಂದಿದ್ದರು.
ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾದ ಆಕ್ರಮಣಕಾರಿ ವರ್ತನೆಯನ್ನು ತಡೆಯಲು ಈ ದೇಶಗಳ ಜೊತೆಗೆ ಸ್ನೇಹವನ್ನು ಗಟ್ಟಿ ಮಾಡಿಕೊಳ್ಳುವ ಉದ್ದೇಶದಿಂದ ಕಿಶಿದಾ ಅವರು ಈ ಯೋಜನೆಯ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.