ಕೊಲಂಬೊ: ಶ್ರೀಲಂಕಾದ ಮಾಜಿ ಸ್ಪೀಕರ್ ಕರು ಜಯಸೂರ್ಯ ಅವರು ವಿರೋಧಪಕ್ಷ ಯುನೈಟೆಡ್ ನ್ಯಾಷನಲ್ ಪಾರ್ಟಿಯ (ಯುಎನ್ಪಿ) ನೇತೃತ್ವ ವಹಿಸಲು ಸಿದ್ಧನಿದ್ದೇನೆ ಎಂದಿದ್ದಾರೆ. ಈಚೆಗೆ ಮುಕ್ತಾಯವಾದ ಸಂಸತ್ ಚುನಾವಣೆಯಲ್ಲಿ ಯುಎನ್ಪಿ ಹೀನಾಯವಾಗಿ ಪರಾಭವಗೊಂಡಿತ್ತು.
ಮುಂದಿನ ತಿಂಗಳು 80ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಜಯಸೂರ್ಯ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಪಕ್ಷ ಮುನ್ನಡೆಸಲು ನಾನು ಸಮರ್ಥನಿದ್ದೇನೆ ಎಂಬುದನ್ನು ಪಕ್ಷದ ಮುಖಂಡರ ಗಮನಕ್ಕೂ ತಂದಿದ್ದೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
1946ರಲ್ಲಿ ಸ್ಥಾಪನೆಯಾದ, ಶ್ರೀಲಂಕಾದ ಹಳೆಯ ಪಕ್ಷವಾದ ಯುಎನ್ಪಿ ಈಚೆಗೆ ನಡೆದ ಚುನಾವಣೆಯಲ್ಲಿ ಶೇ 2ರಷ್ಟು ಮಗಳನ್ನಷ್ಟೇ ಗಳಿಸಲು ಶಕ್ತವಾಗಿತ್ತು.