<p><strong>ಕೊಲಂಬೊ: </strong>ಶ್ರೀಲಂಕಾ ಸಂಸತ್ತಿನ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಆರಂಭವಾಗಿದೆ.</p>.<p>ಶ್ರೀಲಂಕಾ ಪೀಪಲ್ಸ್ ಪಾರ್ಟಿಯು (ಎಸ್ಎಲ್ಪಿಪಿ) ಮತ್ತೊಮ್ಮೆ ಸಿಂಹಳೀಯ ನಾಡಿನಲ್ಲಿ ಅಧಿಕಾರದ ಗದ್ದುಗೆಗೆ ಏರುವ ಹುಮ್ಮಸ್ಸಿನಲ್ಲಿದೆ.</p>.<p>‘ಕೊರೊನಾ ಸಂದರ್ಭದಲ್ಲಿ ಶಾಂತಿಯುತವಾಗಿ ನಡೆದ ಚುನಾವಣೆಯಲ್ಲಿ ಶೇಕಡ 70ಕ್ಕಿಂತಲೂ ಅಧಿಕ ಮತದಾನವಾಗಿದೆ’ ಎಂದು ರಾಷ್ಟ್ರೀಯ ಚುನಾವಣಾ ಆಯೋಗದ ಮುಖ್ಯಸ್ಥ ಮಹಿಂದಾ ದೇಶಪ್ರಿಯ ಬುಧವಾರ ಹೇಳಿದ್ದರು.</p>.<p>ಸುದ್ದಿವಾಹಿನಿಯೊಂದರ ಜೊತೆಗುರುವಾರ ಮಾತನಾಡಿದಎಸ್ಎಲ್ಪಿಪಿ ಸಂಸ್ಥಾಪಕ ಮತ್ತು ಪಕ್ಷದ ರಾಷ್ಟ್ರೀಯ ಸಂಘಟಕ ಬಾಸಿಲ್ ರಾಜಪಕ್ಸೆ ‘ನಮ್ಮ ಪಕ್ಷವು ಮತ್ತೊಮ್ಮೆ ಆಡಳಿತ ನಡೆಸಲಿದೆ. ನಾವು ಮೂರನೇ ಎರಡರಷ್ಟು ಬಹುಮತ ಪಡೆದು ಇತಿಹಾಸ ನಿರ್ಮಿಸಲಿದ್ದೇವೆ’ ಎಂದಿದ್ದಾರೆ.</p>.<p>ಬಾಸಿಲ್ ಅವರು ಶ್ರೀಲಂಕಾದ ಹಾಲಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹಾಗೂ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸೆ ಅವರ ಸಹೋದರ.</p>.<p>‘ಹಿಂದಿನ ಬಾರಿ ಗೋಟಬಯ ಅವರು ಅತಿ ಹೆಚ್ಚು ಮತಗಳನ್ನು ಪಡೆದಿದ್ದರು. ಈ ಬಾರಿಯೂ ಜನ ಅವರನ್ನು ಬೆಂಬಲಿಸಲಿದ್ದಾರೆ. ಅವರು ಮತ್ತೊಂದು ಅವಧಿಗೆ ಶ್ರೀಲಂಕಾದ ಅಧ್ಯಕ್ಷ ಗಾದಿಗೆ ಏರಲಿದ್ದಾರೆ. ನಮ್ಮ ಪಕ್ಷವು ಮೂರನೇ ಎರಡರಷ್ಟು ಬಹುಮತ ಪಡೆದು ಅಧಿಕಾರಕ್ಕೇರಲಿದೆ’ ಎಂದು 74 ವರ್ಷ ವಯಸ್ಸಿನ ಮಹಿಂದಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಕೋವಿಡ್ 19ನಿಂದಾಗಿ ಆರ್ಥಿಕತೆಯು ಪಾತಾಳಕ್ಕಿಳಿದಿದೆ. ಅದನ್ನು ಮೇಲಕ್ಕೆತ್ತುವ ಸಾಮರ್ಥ್ಯ ನಮ್ಮ ಪಕ್ಷಕ್ಕಿದೆ’ ಎಂದು ಮಾಜಿ ಪ್ರಧಾನಿ ಹಾಗೂ ಯುನೈಟೆಡ್ ನ್ಯಾಷನಲ್ ಪಾರ್ಟಿಯ ರಾನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ.</p>.<p>225 ಸದಸ್ಯ ಬಲದ ಲೋಕಸಭೆ ಚುನಾವಣೆಯ ಫಲಿತಾಂಶವು ಗುರುವಾರ ಸಂಜೆ ಪ್ರಕಟವಾಗುತ್ತದೆ ಎಂದು ಹೇಳಲಾಗಿದೆ.</p>.<p>ಕೋವಿಡ್–19 ಕಾರಣದಿಂದಾಗಿ ಈ ಸಲದ ಚುನಾವಣೆಯನ್ನು ಎರಡು ಬಾರಿ ಮುಂದಕ್ಕೆ ಹಾಕಲಾಗಿತ್ತು. ಏಪ್ರಿಲ್ 25ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಜೂನ್ 20ಕ್ಕೆ ಮುಂದೂಡಲಾಗಿತ್ತು. ಆಗಸ್ಟ್ 5ರಂದು ಚುನಾವಣೆ ಪ್ರಕ್ರಿಯೆ ನಡೆಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ: </strong>ಶ್ರೀಲಂಕಾ ಸಂಸತ್ತಿನ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಆರಂಭವಾಗಿದೆ.</p>.<p>ಶ್ರೀಲಂಕಾ ಪೀಪಲ್ಸ್ ಪಾರ್ಟಿಯು (ಎಸ್ಎಲ್ಪಿಪಿ) ಮತ್ತೊಮ್ಮೆ ಸಿಂಹಳೀಯ ನಾಡಿನಲ್ಲಿ ಅಧಿಕಾರದ ಗದ್ದುಗೆಗೆ ಏರುವ ಹುಮ್ಮಸ್ಸಿನಲ್ಲಿದೆ.</p>.<p>‘ಕೊರೊನಾ ಸಂದರ್ಭದಲ್ಲಿ ಶಾಂತಿಯುತವಾಗಿ ನಡೆದ ಚುನಾವಣೆಯಲ್ಲಿ ಶೇಕಡ 70ಕ್ಕಿಂತಲೂ ಅಧಿಕ ಮತದಾನವಾಗಿದೆ’ ಎಂದು ರಾಷ್ಟ್ರೀಯ ಚುನಾವಣಾ ಆಯೋಗದ ಮುಖ್ಯಸ್ಥ ಮಹಿಂದಾ ದೇಶಪ್ರಿಯ ಬುಧವಾರ ಹೇಳಿದ್ದರು.</p>.<p>ಸುದ್ದಿವಾಹಿನಿಯೊಂದರ ಜೊತೆಗುರುವಾರ ಮಾತನಾಡಿದಎಸ್ಎಲ್ಪಿಪಿ ಸಂಸ್ಥಾಪಕ ಮತ್ತು ಪಕ್ಷದ ರಾಷ್ಟ್ರೀಯ ಸಂಘಟಕ ಬಾಸಿಲ್ ರಾಜಪಕ್ಸೆ ‘ನಮ್ಮ ಪಕ್ಷವು ಮತ್ತೊಮ್ಮೆ ಆಡಳಿತ ನಡೆಸಲಿದೆ. ನಾವು ಮೂರನೇ ಎರಡರಷ್ಟು ಬಹುಮತ ಪಡೆದು ಇತಿಹಾಸ ನಿರ್ಮಿಸಲಿದ್ದೇವೆ’ ಎಂದಿದ್ದಾರೆ.</p>.<p>ಬಾಸಿಲ್ ಅವರು ಶ್ರೀಲಂಕಾದ ಹಾಲಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹಾಗೂ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸೆ ಅವರ ಸಹೋದರ.</p>.<p>‘ಹಿಂದಿನ ಬಾರಿ ಗೋಟಬಯ ಅವರು ಅತಿ ಹೆಚ್ಚು ಮತಗಳನ್ನು ಪಡೆದಿದ್ದರು. ಈ ಬಾರಿಯೂ ಜನ ಅವರನ್ನು ಬೆಂಬಲಿಸಲಿದ್ದಾರೆ. ಅವರು ಮತ್ತೊಂದು ಅವಧಿಗೆ ಶ್ರೀಲಂಕಾದ ಅಧ್ಯಕ್ಷ ಗಾದಿಗೆ ಏರಲಿದ್ದಾರೆ. ನಮ್ಮ ಪಕ್ಷವು ಮೂರನೇ ಎರಡರಷ್ಟು ಬಹುಮತ ಪಡೆದು ಅಧಿಕಾರಕ್ಕೇರಲಿದೆ’ ಎಂದು 74 ವರ್ಷ ವಯಸ್ಸಿನ ಮಹಿಂದಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಕೋವಿಡ್ 19ನಿಂದಾಗಿ ಆರ್ಥಿಕತೆಯು ಪಾತಾಳಕ್ಕಿಳಿದಿದೆ. ಅದನ್ನು ಮೇಲಕ್ಕೆತ್ತುವ ಸಾಮರ್ಥ್ಯ ನಮ್ಮ ಪಕ್ಷಕ್ಕಿದೆ’ ಎಂದು ಮಾಜಿ ಪ್ರಧಾನಿ ಹಾಗೂ ಯುನೈಟೆಡ್ ನ್ಯಾಷನಲ್ ಪಾರ್ಟಿಯ ರಾನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ.</p>.<p>225 ಸದಸ್ಯ ಬಲದ ಲೋಕಸಭೆ ಚುನಾವಣೆಯ ಫಲಿತಾಂಶವು ಗುರುವಾರ ಸಂಜೆ ಪ್ರಕಟವಾಗುತ್ತದೆ ಎಂದು ಹೇಳಲಾಗಿದೆ.</p>.<p>ಕೋವಿಡ್–19 ಕಾರಣದಿಂದಾಗಿ ಈ ಸಲದ ಚುನಾವಣೆಯನ್ನು ಎರಡು ಬಾರಿ ಮುಂದಕ್ಕೆ ಹಾಕಲಾಗಿತ್ತು. ಏಪ್ರಿಲ್ 25ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಜೂನ್ 20ಕ್ಕೆ ಮುಂದೂಡಲಾಗಿತ್ತು. ಆಗಸ್ಟ್ 5ರಂದು ಚುನಾವಣೆ ಪ್ರಕ್ರಿಯೆ ನಡೆಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>